• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ಬ್ಯಾಂಕ್ ಖಾತೆ ಸೀಝ್ ಮಾಡಲು ಎಸ್ ಐಟಿ ನಿರ್ಧಾರ!

Tulunadu News Posted On May 18, 2024
0


0
Shares
  • Share On Facebook
  • Tweet It

ಪೆನ್ ಡ್ರೈವ್ ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್ ರೇವಣ್ಣ ಸ್ವದೇಶಕ್ಕೆ ಬರುವುದನ್ನು ಮುಂದೂಡುತ್ತಿರುವ ಈ ಸಂದರ್ಭದಲ್ಲಿ ಅವರನ್ನು ಎಲ್ಲಾ ಕಡೆಗಳಿಂದಲೂ ಆರ್ಥಿಕವಾಗಿ ಕಟ್ಟಿ ಹಾಕಲು ವಿಶೇಷ ತನಿಖಾ ದಳ ಮುಂದಾಗಿದೆ. ಒಬ್ಬ ಆರೋಪಿ ತನಿಖೆಯನ್ನು ಎದುರಿಸಲು ಮುಂದಾಗದ ಪರಿಸ್ಥಿತಿಯಲ್ಲಿ ಅವರಿಗೆ ಇರುವ ಹಣಕಾಸಿನ ಮೂಲಗಳನ್ನು ಬಂದ್ ಮಾಡಿದರೆ ಆಗ ಆ ವ್ಯಕ್ತಿ ಬೇರೆ ದಾರಿ ಕಾಣದೇ ತಾನಾಗಿಯೇ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇದು ಬಹಳ ಹಳೆಯ ವಿಧಾನವಾದರೂ ಎಂದೆಂದಿಗೂ ಪರಿಣಾಮಕಾರಿಯಾಗಬಲ್ಲ ಸಾಧನವಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣನವರಿಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಅವರಿಗೆ ಸೇರಿದ ಬ್ಯಾಂಕ್ ಅಕೌಂಟ್ ಗಳನ್ನು ಫ್ರೀಝ್ ಮಾಡುವ ಪ್ರಕ್ರಿಯೆಗೆ ಅಧಿಕಾರಿಗಳು ತಯಾರಾಗಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಜ್ವಲ್ ವಿದೇಶದಲ್ಲಿರುವುದರಿಂದ ಅವರ ಅಲ್ಲಿನ ಖರ್ಚಿಗೆ ಇಲ್ಲಿಂದ ಅವರ ಬ್ಯಾಂಕ್ ಖಾತೆಗೆ ಹಣ ಪಾವತಿಯಾಗಿರುವ ಸಾಧ್ಯತೆಗಳಿರುತ್ತವೆ. ಹಾಗೆ ಯಾರಾದರೂ ಹಣ ಹಾಕಿದ್ದಾರಾ ಎನ್ನುವುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಎಸ್ ಐಟಿಗೆ ಅಧಿಕೃತವಾಗಿ ಲಭ್ಯವಿರುವ ಮಾಹಿತಿಯ ಪ್ರಕಾರ ಪ್ರಜ್ವಲ್ ಏಳು ಖಾತೆಗಳನ್ನು ಹೊಂದಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಪ್ರಜ್ವಲ್ ತಲೆಮರೆಸಿಕೊಂಡು ತಿಂಗಳಾಗುತ್ತಾ ಬಂದಿರುವುದರಿಂದ ಈ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದ್ದು, ಸದ್ಯ ಪೆನ್ ಡ್ರೈವ್ ಹಂಚಿರುವ ಹಿಂದಿನ ಕಾಣದ ಕೈಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಪ್ರಕರಣ ಗರಿಗೆದರುತ್ತಿದ್ದಂತೆ ಎಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನದಂದು ವಿದೇಶಕ್ಕೆ ಹಾರಿರುವ ಪ್ರಜ್ವಲ್ ಯಾವಾಗ ಭಾರತಕ್ಕೆ ಮರಳುತ್ತಾರೆ ಎನ್ನುವ ಮಾಹಿತಿ ಯಾರ ಬಳಿಯೂ ಇಲ್ಲ. ಈಗಾಗಲೇ ಜರ್ಮನಿಯಿಂದ ರಿಟನ್ ಟಿಕೆಟ್ ಅವರು ಬುಕ್ ಮಾಡಿದ್ದರೂ ಅವರು ಅದನ್ನು ಬಳಸದೇ ಇರುವುದು ಮತ್ತಷ್ಟು ಊಹಾಪೋಹಾಕ್ಕೆ ಕಾರಣವಾಗಿದೆ. ಅವರಿಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಇನ್ನೂ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿ ರೆಡ್ ಕಾರ್ನರ್ ನೋಟಿಸ್ ನೀಡಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿ ದೊರಕಿದೆ.

0
Shares
  • Share On Facebook
  • Tweet It




Trending Now
ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
Tulunadu News July 8, 2025
ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
Tulunadu News July 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
  • Popular Posts

    • 1
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 2
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • 3
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 4
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 5
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!

  • Privacy Policy
  • Contact
© Tulunadu Infomedia.

Press enter/return to begin your search