• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರಜ್ವಲ್ ಬ್ಯಾಂಕ್ ಖಾತೆ ಸೀಝ್ ಮಾಡಲು ಎಸ್ ಐಟಿ ನಿರ್ಧಾರ!

Tulunadu News Posted On May 18, 2024
0


0
Shares
  • Share On Facebook
  • Tweet It

ಪೆನ್ ಡ್ರೈವ್ ಪ್ರಕರಣದ ಪ್ರಧಾನ ಆರೋಪಿ ಪ್ರಜ್ವಲ್ ರೇವಣ್ಣ ಸ್ವದೇಶಕ್ಕೆ ಬರುವುದನ್ನು ಮುಂದೂಡುತ್ತಿರುವ ಈ ಸಂದರ್ಭದಲ್ಲಿ ಅವರನ್ನು ಎಲ್ಲಾ ಕಡೆಗಳಿಂದಲೂ ಆರ್ಥಿಕವಾಗಿ ಕಟ್ಟಿ ಹಾಕಲು ವಿಶೇಷ ತನಿಖಾ ದಳ ಮುಂದಾಗಿದೆ. ಒಬ್ಬ ಆರೋಪಿ ತನಿಖೆಯನ್ನು ಎದುರಿಸಲು ಮುಂದಾಗದ ಪರಿಸ್ಥಿತಿಯಲ್ಲಿ ಅವರಿಗೆ ಇರುವ ಹಣಕಾಸಿನ ಮೂಲಗಳನ್ನು ಬಂದ್ ಮಾಡಿದರೆ ಆಗ ಆ ವ್ಯಕ್ತಿ ಬೇರೆ ದಾರಿ ಕಾಣದೇ ತಾನಾಗಿಯೇ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಇದು ಬಹಳ ಹಳೆಯ ವಿಧಾನವಾದರೂ ಎಂದೆಂದಿಗೂ ಪರಿಣಾಮಕಾರಿಯಾಗಬಲ್ಲ ಸಾಧನವಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣನವರಿಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯಲಾಗಿದ್ದು, ಅವರಿಗೆ ಸೇರಿದ ಬ್ಯಾಂಕ್ ಅಕೌಂಟ್ ಗಳನ್ನು ಫ್ರೀಝ್ ಮಾಡುವ ಪ್ರಕ್ರಿಯೆಗೆ ಅಧಿಕಾರಿಗಳು ತಯಾರಾಗಿದ್ದಾರೆ ಎನ್ನಲಾಗಿದೆ.

ಇನ್ನು ಪ್ರಜ್ವಲ್ ವಿದೇಶದಲ್ಲಿರುವುದರಿಂದ ಅವರ ಅಲ್ಲಿನ ಖರ್ಚಿಗೆ ಇಲ್ಲಿಂದ ಅವರ ಬ್ಯಾಂಕ್ ಖಾತೆಗೆ ಹಣ ಪಾವತಿಯಾಗಿರುವ ಸಾಧ್ಯತೆಗಳಿರುತ್ತವೆ. ಹಾಗೆ ಯಾರಾದರೂ ಹಣ ಹಾಕಿದ್ದಾರಾ ಎನ್ನುವುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಎಸ್ ಐಟಿಗೆ ಅಧಿಕೃತವಾಗಿ ಲಭ್ಯವಿರುವ ಮಾಹಿತಿಯ ಪ್ರಕಾರ ಪ್ರಜ್ವಲ್ ಏಳು ಖಾತೆಗಳನ್ನು ಹೊಂದಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಪ್ರಜ್ವಲ್ ತಲೆಮರೆಸಿಕೊಂಡು ತಿಂಗಳಾಗುತ್ತಾ ಬಂದಿರುವುದರಿಂದ ಈ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.

ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದ್ದು, ಸದ್ಯ ಪೆನ್ ಡ್ರೈವ್ ಹಂಚಿರುವ ಹಿಂದಿನ ಕಾಣದ ಕೈಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಪ್ರಕರಣ ಗರಿಗೆದರುತ್ತಿದ್ದಂತೆ ಎಪ್ರಿಲ್ 26 ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನದಂದು ವಿದೇಶಕ್ಕೆ ಹಾರಿರುವ ಪ್ರಜ್ವಲ್ ಯಾವಾಗ ಭಾರತಕ್ಕೆ ಮರಳುತ್ತಾರೆ ಎನ್ನುವ ಮಾಹಿತಿ ಯಾರ ಬಳಿಯೂ ಇಲ್ಲ. ಈಗಾಗಲೇ ಜರ್ಮನಿಯಿಂದ ರಿಟನ್ ಟಿಕೆಟ್ ಅವರು ಬುಕ್ ಮಾಡಿದ್ದರೂ ಅವರು ಅದನ್ನು ಬಳಸದೇ ಇರುವುದು ಮತ್ತಷ್ಟು ಊಹಾಪೋಹಾಕ್ಕೆ ಕಾರಣವಾಗಿದೆ. ಅವರಿಗೆ ಈಗಾಗಲೇ ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ. ಇನ್ನೂ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿ ರೆಡ್ ಕಾರ್ನರ್ ನೋಟಿಸ್ ನೀಡಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿ ದೊರಕಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search