• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೆದ್ದರೆ ನಟನೆ ಬಿಡುತ್ತೇನೆ ಎಂದಿದ್ದೇಕೆ ಬಾಲಿವುಡ್ ಚೆಲುವೆ!

Tulunadu News Posted On May 20, 2024
0


0
Shares
  • Share On Facebook
  • Tweet It

ಖ್ಯಾತ ಬಾಲಿವುಡ್ ನಟಿ ಕಂಗನಾ ರಾಣಾವತ್ ನೀಡಿರುವ ಹೇಳಿಕೆಯಿಂದ ಬಾಲಿವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ತಾನು ಸ್ಪರ್ಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಗೆದ್ದರೆ ನಟನಾ ಕ್ಷೇತ್ರದಿಂದ ಹಿಂದಕ್ಕೆ ಸರಿಯುತ್ತೇನೆ ಎಂದು ಬಾಲಿವುಡ್ ತಾರೆ ಕಂಗನಾ ರಾಣಾವತ್ ನಿರ್ಧರಿಸಿರುವುದು ಸರಿಯಲ್ಲ ಎನ್ನುವುದು ನಿರ್ಮಾಪಕರ ಅನಿಸಿಕೆ.

ಉತ್ತಮ ಕಲಾವಿದೆಯೊಬ್ಬರು ರಾಜಕೀಯ ಕಾರಣಗಳಿಂದ ನೇಪಥ್ಯಕ್ಕೆ ಸರಿದರೆ ಅದರಿಂದ ಬಾಲಿವುಡ್ ನಷ್ಟ ಅನುಭವಿಸುತ್ತದೆ ಎನ್ನುವುದು ನಿರ್ಮಾಪಕರ ಅಭಿಪ್ರಾಯ.
ಕಂಗನಾ ಉತ್ತಮ ನಟಿಯಾಗಿರುವುದರಿಂದ ಮತ್ತು ಯಶಸ್ವಿ ಚಿತ್ರಗಳನ್ನು ನೀಡುತ್ತಿರುವುದರಿಂದ ಅಂತವರು ಚಿತ್ರರಂಗದಿಂದ ದೂರ ಸರಿದರೆ ಅದರಿಂದ ಚಿತ್ರರಂಗಕ್ಕೆ ಹೊಡೆತ ಬೀಳುತ್ತೆ ಎನ್ನುವ ಕಾರಣಕ್ಕೆ ಹಲವು ನಿರ್ಮಾಪಕರು ಕಂಗನಾ ಅವರಿಗೆ ತಮ್ಮ ನಿರ್ಧಾರವನ್ನು ಮರು ಪರಿಶೀಲಿಸಿ ಎಂದು ಹೇಳುತ್ತಿದ್ದಾರೆ.

ಆದರೆ ತಾವು ಗೆದ್ದಾಗ ತಮ್ಮ ಕ್ಷೇತ್ರದ ಜನಸಾಮಾನ್ಯರ ಕಷ್ಟಗಳನ್ನು ಪರಿಹರಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಮಯ ಮೀಸಲಿಡಬೇಕಾಗಿರುವುದರಿಂದ ಈ ನಿರ್ಧಾರ ಅನಿವಾರ್ಯ ಎಂದು ಕಂಗನಾ ಹೇಳಿದ್ದಾರೆ.

ದೇಶಕ್ಕಾಗಿ ಇಂತಹ ಹೆಜ್ಜೆಗಳನ್ನು ಇಡಲು ತಮಗೆ ಸಿನೆಮಾರಂಗದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಮಿಸ್ ರಾಣಾವತ್ ತಿಳಿಸಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸತತವಾಗಿ ಶ್ರಮ ಹಾಕುತ್ತಿರುವ ಕಂಗನಾ ಅಲ್ಲಿ ಈಗಾಗಲೇ ಎರಡು ತಿಂಗಳ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಜೂನ್ 1 ರಂದು ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search