• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಗೆದ್ದರೆ ನಟನೆ ಬಿಡುತ್ತೇನೆ ಎಂದಿದ್ದೇಕೆ ಬಾಲಿವುಡ್ ಚೆಲುವೆ!

Tulunadu News Posted On May 20, 2024
0


0
Shares
  • Share On Facebook
  • Tweet It

ಖ್ಯಾತ ಬಾಲಿವುಡ್ ನಟಿ ಕಂಗನಾ ರಾಣಾವತ್ ನೀಡಿರುವ ಹೇಳಿಕೆಯಿಂದ ಬಾಲಿವುಡ್ ನಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ತಾನು ಸ್ಪರ್ಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಗೆದ್ದರೆ ನಟನಾ ಕ್ಷೇತ್ರದಿಂದ ಹಿಂದಕ್ಕೆ ಸರಿಯುತ್ತೇನೆ ಎಂದು ಬಾಲಿವುಡ್ ತಾರೆ ಕಂಗನಾ ರಾಣಾವತ್ ನಿರ್ಧರಿಸಿರುವುದು ಸರಿಯಲ್ಲ ಎನ್ನುವುದು ನಿರ್ಮಾಪಕರ ಅನಿಸಿಕೆ.

ಉತ್ತಮ ಕಲಾವಿದೆಯೊಬ್ಬರು ರಾಜಕೀಯ ಕಾರಣಗಳಿಂದ ನೇಪಥ್ಯಕ್ಕೆ ಸರಿದರೆ ಅದರಿಂದ ಬಾಲಿವುಡ್ ನಷ್ಟ ಅನುಭವಿಸುತ್ತದೆ ಎನ್ನುವುದು ನಿರ್ಮಾಪಕರ ಅಭಿಪ್ರಾಯ.
ಕಂಗನಾ ಉತ್ತಮ ನಟಿಯಾಗಿರುವುದರಿಂದ ಮತ್ತು ಯಶಸ್ವಿ ಚಿತ್ರಗಳನ್ನು ನೀಡುತ್ತಿರುವುದರಿಂದ ಅಂತವರು ಚಿತ್ರರಂಗದಿಂದ ದೂರ ಸರಿದರೆ ಅದರಿಂದ ಚಿತ್ರರಂಗಕ್ಕೆ ಹೊಡೆತ ಬೀಳುತ್ತೆ ಎನ್ನುವ ಕಾರಣಕ್ಕೆ ಹಲವು ನಿರ್ಮಾಪಕರು ಕಂಗನಾ ಅವರಿಗೆ ತಮ್ಮ ನಿರ್ಧಾರವನ್ನು ಮರು ಪರಿಶೀಲಿಸಿ ಎಂದು ಹೇಳುತ್ತಿದ್ದಾರೆ.

ಆದರೆ ತಾವು ಗೆದ್ದಾಗ ತಮ್ಮ ಕ್ಷೇತ್ರದ ಜನಸಾಮಾನ್ಯರ ಕಷ್ಟಗಳನ್ನು ಪರಿಹರಿಸಲು ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಮಯ ಮೀಸಲಿಡಬೇಕಾಗಿರುವುದರಿಂದ ಈ ನಿರ್ಧಾರ ಅನಿವಾರ್ಯ ಎಂದು ಕಂಗನಾ ಹೇಳಿದ್ದಾರೆ.

ದೇಶಕ್ಕಾಗಿ ಇಂತಹ ಹೆಜ್ಜೆಗಳನ್ನು ಇಡಲು ತಮಗೆ ಸಿನೆಮಾರಂಗದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಮಿಸ್ ರಾಣಾವತ್ ತಿಳಿಸಿದ್ದಾರೆ.
ಮಂಡಿ ಲೋಕಸಭಾ ಕ್ಷೇತ್ರವನ್ನು ಗೆಲ್ಲಲು ಸತತವಾಗಿ ಶ್ರಮ ಹಾಕುತ್ತಿರುವ ಕಂಗನಾ ಅಲ್ಲಿ ಈಗಾಗಲೇ ಎರಡು ತಿಂಗಳ ಪ್ರಚಾರ ಕಾರ್ಯ ಮುಗಿಸಿದ್ದಾರೆ. ಜೂನ್ 1 ರಂದು ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search