• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲಿನೊಳಗೆ ಮುಂಬೈ ಸರಣಿ ಸ್ಫೋಟದ ಆರೋಪಿ ಖಾನ್ ಫಿನಿಶ್!

Tulunadu News Posted On June 3, 2024
0


0
Shares
  • Share On Facebook
  • Tweet It

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿಯಾಗಿ ಕೊಲ್ಲಾಪುರದ ಕಲಂಬಾ ಸೆಂಟ್ರಲ್ ಜೈಲಿನಲ್ಲಿದ್ದ ಮುನ್ನಾ ಅಲಿಯಾಸ್ ಮೊಹಮ್ಮದ್ ಆಲಿ ಖಾನ್ ಆಲಿಯಾಸ್ ಮನೋಜ್ ಕುಮಾರ್ ಭವರಲಾಲ್ ಗುಪ್ತನನ್ನು ಸಹಕೈದಿಗಳು ಮುಗಿಸಿಬಿಟ್ಟಿದ್ದಾರೆ. ಆತನಿಗೆ 59 ವರ್ಷ ವಯಸ್ಸಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ ಜೈಲಿನಲ್ಲಿ ಬಾತ್ ರೂಂ ಒಳಗೆ ಸ್ನಾನ ಮಾಡುವ ವಿಚಾರದಲ್ಲಿ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೆ ಹೋಗಿ ಸಹಕೈದಿಗಳು ಮಹಮ್ಮದ್ ಆಲಿಖಾನ್ ನನ್ನು ಕೊಂದುಬಿಟ್ಟಿದ್ದಾರೆ.

ಸರಣಿ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಖಾನ್ ನನ್ನು ಕೆಲವು ವಿಚಾರಣಾಧೀನ ಕೈದಿಗಳು ಜೈಲಿನ ಡ್ರೈನೇಜ್ ನ ಕಬ್ಬಿಣದ ಪೈಪ್ ಗೆ ತಲೆಯನ್ನು ಹೊಡೆದಿದ್ದು, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಜೈಲಿನ ಸಿಬ್ಬಂದಿಗಳು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆತನನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸಹಕೈದಿಗಳಾದ ಸೌರಭ್ ವಿಕಾಸ್, ರಿತುರಾಜ್ ವಿನಾಯಕ್ ಇನಾಂದಾರ್, ಸಂದೀಪ್ ಶಂಕರ್ ಚವಾಣ್, ದೀಪಕ್ ನೇತಾಜಿ ಖೋಟ್, ಸುರೇಶ್ ಪಾಟೀಲ್, ಪ್ರತೀಕ್ ಆಲಿಯಾಸ್ ಪಿಲ್ಯಾ ಎಲ್ಲಾ ಸೇರಿ ಖಾನ್ ಮೇಲೆ ದಾಳಿ ನಡೆಸಿ ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಐದು ಜನ ಆರೋಪಿಗಳ ಮೇಲೂ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ಕೊಲ್ಹಾಪುರ ಪೊಲೀಸರು ತಿಳಿಸಿದ್ದಾರೆ. 1993 ಮಾರ್ಚ್ 12 ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದರು.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!
    • 4
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search