• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲಿನೊಳಗೆ ಮುಂಬೈ ಸರಣಿ ಸ್ಫೋಟದ ಆರೋಪಿ ಖಾನ್ ಫಿನಿಶ್!

Tulunadu News Posted On June 3, 2024
0


0
Shares
  • Share On Facebook
  • Tweet It

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿಯಾಗಿ ಕೊಲ್ಲಾಪುರದ ಕಲಂಬಾ ಸೆಂಟ್ರಲ್ ಜೈಲಿನಲ್ಲಿದ್ದ ಮುನ್ನಾ ಅಲಿಯಾಸ್ ಮೊಹಮ್ಮದ್ ಆಲಿ ಖಾನ್ ಆಲಿಯಾಸ್ ಮನೋಜ್ ಕುಮಾರ್ ಭವರಲಾಲ್ ಗುಪ್ತನನ್ನು ಸಹಕೈದಿಗಳು ಮುಗಿಸಿಬಿಟ್ಟಿದ್ದಾರೆ. ಆತನಿಗೆ 59 ವರ್ಷ ವಯಸ್ಸಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ ಜೈಲಿನಲ್ಲಿ ಬಾತ್ ರೂಂ ಒಳಗೆ ಸ್ನಾನ ಮಾಡುವ ವಿಚಾರದಲ್ಲಿ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೆ ಹೋಗಿ ಸಹಕೈದಿಗಳು ಮಹಮ್ಮದ್ ಆಲಿಖಾನ್ ನನ್ನು ಕೊಂದುಬಿಟ್ಟಿದ್ದಾರೆ.

ಸರಣಿ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಖಾನ್ ನನ್ನು ಕೆಲವು ವಿಚಾರಣಾಧೀನ ಕೈದಿಗಳು ಜೈಲಿನ ಡ್ರೈನೇಜ್ ನ ಕಬ್ಬಿಣದ ಪೈಪ್ ಗೆ ತಲೆಯನ್ನು ಹೊಡೆದಿದ್ದು, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಜೈಲಿನ ಸಿಬ್ಬಂದಿಗಳು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆತನನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸಹಕೈದಿಗಳಾದ ಸೌರಭ್ ವಿಕಾಸ್, ರಿತುರಾಜ್ ವಿನಾಯಕ್ ಇನಾಂದಾರ್, ಸಂದೀಪ್ ಶಂಕರ್ ಚವಾಣ್, ದೀಪಕ್ ನೇತಾಜಿ ಖೋಟ್, ಸುರೇಶ್ ಪಾಟೀಲ್, ಪ್ರತೀಕ್ ಆಲಿಯಾಸ್ ಪಿಲ್ಯಾ ಎಲ್ಲಾ ಸೇರಿ ಖಾನ್ ಮೇಲೆ ದಾಳಿ ನಡೆಸಿ ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಐದು ಜನ ಆರೋಪಿಗಳ ಮೇಲೂ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ಕೊಲ್ಹಾಪುರ ಪೊಲೀಸರು ತಿಳಿಸಿದ್ದಾರೆ. 1993 ಮಾರ್ಚ್ 12 ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದರು.

0
Shares
  • Share On Facebook
  • Tweet It




Trending Now
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
  • Popular Posts

    • 1
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 2
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 3
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 4
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search