• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲಿನೊಳಗೆ ಮುಂಬೈ ಸರಣಿ ಸ್ಫೋಟದ ಆರೋಪಿ ಖಾನ್ ಫಿನಿಶ್!

Tulunadu News Posted On June 3, 2024
0


0
Shares
  • Share On Facebook
  • Tweet It

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿಯಾಗಿ ಕೊಲ್ಲಾಪುರದ ಕಲಂಬಾ ಸೆಂಟ್ರಲ್ ಜೈಲಿನಲ್ಲಿದ್ದ ಮುನ್ನಾ ಅಲಿಯಾಸ್ ಮೊಹಮ್ಮದ್ ಆಲಿ ಖಾನ್ ಆಲಿಯಾಸ್ ಮನೋಜ್ ಕುಮಾರ್ ಭವರಲಾಲ್ ಗುಪ್ತನನ್ನು ಸಹಕೈದಿಗಳು ಮುಗಿಸಿಬಿಟ್ಟಿದ್ದಾರೆ. ಆತನಿಗೆ 59 ವರ್ಷ ವಯಸ್ಸಾಗಿತ್ತು. ಪೊಲೀಸರ ಮಾಹಿತಿ ಪ್ರಕಾರ ಜೈಲಿನಲ್ಲಿ ಬಾತ್ ರೂಂ ಒಳಗೆ ಸ್ನಾನ ಮಾಡುವ ವಿಚಾರದಲ್ಲಿ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೆ ಹೋಗಿ ಸಹಕೈದಿಗಳು ಮಹಮ್ಮದ್ ಆಲಿಖಾನ್ ನನ್ನು ಕೊಂದುಬಿಟ್ಟಿದ್ದಾರೆ.

ಸರಣಿ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಖಾನ್ ನನ್ನು ಕೆಲವು ವಿಚಾರಣಾಧೀನ ಕೈದಿಗಳು ಜೈಲಿನ ಡ್ರೈನೇಜ್ ನ ಕಬ್ಬಿಣದ ಪೈಪ್ ಗೆ ತಲೆಯನ್ನು ಹೊಡೆದಿದ್ದು, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಜೈಲಿನ ಸಿಬ್ಬಂದಿಗಳು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆತನನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸಹಕೈದಿಗಳಾದ ಸೌರಭ್ ವಿಕಾಸ್, ರಿತುರಾಜ್ ವಿನಾಯಕ್ ಇನಾಂದಾರ್, ಸಂದೀಪ್ ಶಂಕರ್ ಚವಾಣ್, ದೀಪಕ್ ನೇತಾಜಿ ಖೋಟ್, ಸುರೇಶ್ ಪಾಟೀಲ್, ಪ್ರತೀಕ್ ಆಲಿಯಾಸ್ ಪಿಲ್ಯಾ ಎಲ್ಲಾ ಸೇರಿ ಖಾನ್ ಮೇಲೆ ದಾಳಿ ನಡೆಸಿ ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಐದು ಜನ ಆರೋಪಿಗಳ ಮೇಲೂ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ಕೊಲ್ಹಾಪುರ ಪೊಲೀಸರು ತಿಳಿಸಿದ್ದಾರೆ. 1993 ಮಾರ್ಚ್ 12 ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದರು.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search