• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ಕುವೈಟ್ ಅಗ್ನಿ‌ ಅವಘಡ: ಮೃತರಲ್ಲಿ ಇಬ್ಬರು ಕಾಸರಗೋಡಿನವರು..

Tulunadu News Posted On June 14, 2024
0


0
Shares
  • Share On Facebook
  • Tweet It

ಕುವೈಟ್ ನ ಬಹುಮಹಡಿ ಕಟ್ಟಡದಲ್ಲಿ ನಡೆದ ಅಗ್ನಿ‌ ಅವಘಡ ಪ್ರಕರಣದಲ್ಲಿ ಮೃತರಾದ ಇಬ್ಬರು ಕರ್ನಾಟಕ ಗಡಿ ಭಾಗದ ಕಾಸರಗೋಡಿನವರು ಎಂದು ತಿಳಿದುಬಂದಿದೆ.  ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಚರ್ಕಳ ಹಾಗೂ ತ್ರಿಕ್ಕರಿಪುರ ನಿವಾಸಿಗಳಾಗಿದ್ದಾರೆ.  ಚೆರ್ಕಳ ಕುಂಡಡ್ಕದ ರಂಜಿತ್ (34) ಮತ್ತು ತ್ರಿಕ್ಕರಿಪುರ ಎಳಂಬಚ್ಚಿಯ ಪಿ.ಕುಂಞಿ ಕೇಳು (55) ಎಂದು ಗುರುತಿಸಲಾಗಿದೆ.

ಕುವೈಟ್ ನ ಕಾರ್ಮಿಕ ವಸತಿ ಗೃಹದಲ್ಲಿ ಜೂನ್ 12ರ ಮುಂಜಾನೆ ಸಂಭವಿಸಿದ ಭೀಕರ ದುರಂತದಲ್ಲಿ ಒಂಭತ್ತು ಕೇರಳಿಗರು ಮೃತಪಟ್ಟಿರೋ ಮಾಹಿತಿ ಇದೆ. ಇವರಲ್ಲಿ ಇಬ್ಬರು ಕರ್ನಾಟಕ ಗಡಿ ಭಾಗದ ಕಾಸರಗೋಡು ನಿವಾಸಿಗಳಾಗಿದ್ದಾರೆ.

ಮೃತ ಪಿ.ಕುಂಞಿ ಕೇಳು ಕುವೈಟ್ ನಲ್ಲಿ ಪ್ರೊಡಕ್ಷನ್ ಇಂಜಿನಿಯರ್ ಆಗಿದ್ದರು. 20 ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಅವರು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಊರಿಗೆ ಬಂದಿದ್ದರು. ಪತ್ನಿ ಮಣಿ ಕೇರಳದ ಪಿಲಿಕೋಡ್ ಪಂಚಾಯತ್ ಕಚೇರಿಯಲ್ಲಿ ಗುಮಾಸ್ತರಾಗಿದ್ದಾರೆ. ಇನ್ನು ಮೃತ ಚೆರ್ಕಳದ ರಂಜಿತ್ ಕುವೈಟ್ ನಲ್ಲಿ ಸ್ಟೋರ್ ಕೀಪರ್ ಆಗಿದ್ದಾರೆ. ವರ್ಷದ ಹಿಂದೆ ಗೃಹಪ್ರವೇಶಕ್ಕೆಂದು ಮನೆಗೆ ಬಂದಿದ್ದರು.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search