• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವಿಎಂ ಹ್ಯಾಕ್ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ!

Tulunadu News Posted On June 18, 2024
0


0
Shares
  • Share On Facebook
  • Tweet It

ವಿದ್ಯುನ್ಮಾನ ಮತಯಂತ್ರ (ಇವಿಎಂ) ಹ್ಯಾಕ್ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ನವರು 136 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸುವಂತಾಯಿತೇ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಮುಖಂಡರನ್ನು ಪ್ರಶ್ನಿಸಿದ್ದಾರೆ. ಇತ್ತೀಚಿಗೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಶಿವಸೇನೆ (ಉದ್ದವ್ ಠಾಕ್ರೆ) ಮುಖಂಡರು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ಇವಿಎಂನನ್ನು ಬ್ಲ್ಯಾಕ್ ಬಾಕ್ಸ್ ಎಂದು ತಮ್ಮ ಏಕ್ಸ್ ನಲ್ಲಿ ಬರೆದಿದ್ದಾರೆ. ಅದರ ಪಾರದರ್ಶಕತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಆದಿತ್ಯ ಠಾಕ್ರೆ ಕೂಡ ಇವಿಎಂ ಬಗ್ಗೆ ತಮ್ಮ ಅನುಮಾನವನ್ನು ಹೇಳಿದ್ದರು.
ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರು ” ಇವಿಎಂ ಹ್ಯಾಕ್ ಮಾಡಬಹುದು ಎಂದು ಹೇಳುತ್ತಿರುವವರು ಮೊದಲು ಸಾಕ್ಷಿ ಕೊಡಲಿ. ಆ ನಂತರ ಸತ್ಯ ಏನೆಂಬುದು ಗೊತ್ತಾಗುತ್ತದೆ” ಎಂದರು.
ಈ ಬಗ್ಗೆ ಹಲವು ವರ್ಷಗಳಿಂದ ಆರೋಪ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಯಾರೂ ಖಚಿತಪಡಿಸಲು ಸಾಧ್ಯವಾಗಿಲ್ಲ. ಇದೆಲ್ಲ ಊಹಾಪೂಹವೆಂದು ಚುನಾವಣಾ ಆಯೋಗವೂ ಹೇಳಿದೆ. ಸುಪ್ರೀಂಕೋರ್ಟ್ ನಲ್ಲೂ ಚರ್ಚೆಗಳು ನಡೆದಿವೆ ಎಂದು ಹೇಳಿದರು.

100 ಆಡುಗಳ ಜೀವ ಉಳಿಸಿದ ಜೈನ ಸಮುದಾಯ!

ಅಹಿಂಸಾ ಪರಮ ಧರ್ಮ ಎನ್ನುವ ತತ್ವವನ್ನು ಪಾಲಿಸಿಕೊಂಡು ಬರುತ್ತಿರುವ ಜೈನ ಸಮುದಾಯ ಮತ್ತೊಂದು ಮಹತ್ಕಾರ್ಯವನ್ನು ಮಾಡಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದೆ. ಬಕ್ರೀದ್ ದಿನದಂದು ಇಡೀ ಪ್ರಪಂಚದಲ್ಲಿ ಅಸಂಖ್ಯಾತ ಪಶು, ಪ್ರಾಣಿಗಳನ್ನು ವಧಿಸಲ್ಪಡುವುದು ನಿಜಕ್ಕೂ ನಮಗೆಲ್ಲರಿಗೂ ಗೊತ್ತಿರುವ ಸಂಗತಿ. ಪ್ರಾಣಿಪ್ರಿಯರಿಗೆ ಇದರಿಂದ ನೋವಾದರೂ ಕೂಡ ಇದನ್ನು ಯಾರೂ ಕೂಡ ತಡೆಯಲು ಸಾಧ್ಯವಿಲ್ಲ ಎನ್ನುವ ಭಾವನೆ ಇದೆ. ಪ್ರಾಣಿದಯಾ ಸಂಘಗಳು ಕೂಡ ಯಾವ ವಿಷಯದಲ್ಲಿ ಧ್ವನಿ ಎತ್ತಬೇಕೋ ಆ ವಿಷಯದಲ್ಲಿ ಎತ್ತುವುದಿಲ್ಲ ಎನ್ನುವುದು ನಾಗರಿಕರು ಆಡಿಕೊಳ್ಳುವ ಮಾತುಗಳು. ಇಂತಹ ಪರಿಸ್ಥಿತಿ ಇರುವಾಗ ಜೈನ ಸಮುದಾಯದ ಒಂದಿಷ್ಟು ಹಿರಿಕಿರಿಯರು ದೆಹಲಿಯ ಚಾಂದಿನಿ ಚೌಕದಲ್ಲಿ ಸೇರಿ ನೂರು ಆಡುಗಳನ್ನು 11 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿಸಿದರು.
ನಂತರ ಅವುಗಳನ್ನು ತಮ್ಮ ಫಾರಂಗೆ ತೆಗೆದುಕೊಂಡು ಹೋಗಿ ಅಲ್ಲಿ ಸ್ವಚ್ಚಂದವಾಗಿ ಬಿಡುವ ಯೋಜನೆ ಇದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search