• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವಿಎಂ ಹ್ಯಾಕ್ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ!

Tulunadu News Posted On June 18, 2024
0


0
Shares
  • Share On Facebook
  • Tweet It

ವಿದ್ಯುನ್ಮಾನ ಮತಯಂತ್ರ (ಇವಿಎಂ) ಹ್ಯಾಕ್ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ನವರು 136 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸುವಂತಾಯಿತೇ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ಮುಖಂಡರನ್ನು ಪ್ರಶ್ನಿಸಿದ್ದಾರೆ. ಇತ್ತೀಚಿಗೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಶಿವಸೇನೆ (ಉದ್ದವ್ ಠಾಕ್ರೆ) ಮುಖಂಡರು ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ರಾಹುಲ್ ಗಾಂಧಿ ಇವಿಎಂನನ್ನು ಬ್ಲ್ಯಾಕ್ ಬಾಕ್ಸ್ ಎಂದು ತಮ್ಮ ಏಕ್ಸ್ ನಲ್ಲಿ ಬರೆದಿದ್ದಾರೆ. ಅದರ ಪಾರದರ್ಶಕತೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಆದಿತ್ಯ ಠಾಕ್ರೆ ಕೂಡ ಇವಿಎಂ ಬಗ್ಗೆ ತಮ್ಮ ಅನುಮಾನವನ್ನು ಹೇಳಿದ್ದರು.
ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯವರು ” ಇವಿಎಂ ಹ್ಯಾಕ್ ಮಾಡಬಹುದು ಎಂದು ಹೇಳುತ್ತಿರುವವರು ಮೊದಲು ಸಾಕ್ಷಿ ಕೊಡಲಿ. ಆ ನಂತರ ಸತ್ಯ ಏನೆಂಬುದು ಗೊತ್ತಾಗುತ್ತದೆ” ಎಂದರು.
ಈ ಬಗ್ಗೆ ಹಲವು ವರ್ಷಗಳಿಂದ ಆರೋಪ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಯಾರೂ ಖಚಿತಪಡಿಸಲು ಸಾಧ್ಯವಾಗಿಲ್ಲ. ಇದೆಲ್ಲ ಊಹಾಪೂಹವೆಂದು ಚುನಾವಣಾ ಆಯೋಗವೂ ಹೇಳಿದೆ. ಸುಪ್ರೀಂಕೋರ್ಟ್ ನಲ್ಲೂ ಚರ್ಚೆಗಳು ನಡೆದಿವೆ ಎಂದು ಹೇಳಿದರು.

100 ಆಡುಗಳ ಜೀವ ಉಳಿಸಿದ ಜೈನ ಸಮುದಾಯ!

ಅಹಿಂಸಾ ಪರಮ ಧರ್ಮ ಎನ್ನುವ ತತ್ವವನ್ನು ಪಾಲಿಸಿಕೊಂಡು ಬರುತ್ತಿರುವ ಜೈನ ಸಮುದಾಯ ಮತ್ತೊಂದು ಮಹತ್ಕಾರ್ಯವನ್ನು ಮಾಡಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದೆ. ಬಕ್ರೀದ್ ದಿನದಂದು ಇಡೀ ಪ್ರಪಂಚದಲ್ಲಿ ಅಸಂಖ್ಯಾತ ಪಶು, ಪ್ರಾಣಿಗಳನ್ನು ವಧಿಸಲ್ಪಡುವುದು ನಿಜಕ್ಕೂ ನಮಗೆಲ್ಲರಿಗೂ ಗೊತ್ತಿರುವ ಸಂಗತಿ. ಪ್ರಾಣಿಪ್ರಿಯರಿಗೆ ಇದರಿಂದ ನೋವಾದರೂ ಕೂಡ ಇದನ್ನು ಯಾರೂ ಕೂಡ ತಡೆಯಲು ಸಾಧ್ಯವಿಲ್ಲ ಎನ್ನುವ ಭಾವನೆ ಇದೆ. ಪ್ರಾಣಿದಯಾ ಸಂಘಗಳು ಕೂಡ ಯಾವ ವಿಷಯದಲ್ಲಿ ಧ್ವನಿ ಎತ್ತಬೇಕೋ ಆ ವಿಷಯದಲ್ಲಿ ಎತ್ತುವುದಿಲ್ಲ ಎನ್ನುವುದು ನಾಗರಿಕರು ಆಡಿಕೊಳ್ಳುವ ಮಾತುಗಳು. ಇಂತಹ ಪರಿಸ್ಥಿತಿ ಇರುವಾಗ ಜೈನ ಸಮುದಾಯದ ಒಂದಿಷ್ಟು ಹಿರಿಕಿರಿಯರು ದೆಹಲಿಯ ಚಾಂದಿನಿ ಚೌಕದಲ್ಲಿ ಸೇರಿ ನೂರು ಆಡುಗಳನ್ನು 11 ಲಕ್ಷ ರೂಪಾಯಿಗಳನ್ನು ನೀಡಿ ಖರೀದಿಸಿದರು.
ನಂತರ ಅವುಗಳನ್ನು ತಮ್ಮ ಫಾರಂಗೆ ತೆಗೆದುಕೊಂಡು ಹೋಗಿ ಅಲ್ಲಿ ಸ್ವಚ್ಚಂದವಾಗಿ ಬಿಡುವ ಯೋಜನೆ ಇದೆ ಎಂದು ಮಾಧ್ಯಮಗಳಿಗೆ ತಿಳಿಸಿದರು.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search