• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇನ್ನು ದರ್ಶನ್ ಮನೆಗೂ ಸಂಚಕಾರ!

Tulunadu News Posted On June 18, 2024


  • Share On Facebook
  • Tweet It

ದರ್ಶನ್ ಕೊಲೆ ಕೇಸಿನಲ್ಲಿ ಸಿಲುಕಿ ವಿಚಾರಣೆಯನ್ನು ಎದುರಿಸುತ್ತಿರುವಾಗಲೇ ಇತ್ತ ಅವರ ನಿವಾಸಕ್ಕೂ ಸಂಚಕಾರ ಬರುವಂತೆ ಕಾಣುತ್ತಿದೆ. ನಟ ದರ್ಶನ್ ಗೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಭವ್ಯ ಬಂಗ್ಲೆ ಇದೆ. ಅದಕ್ಕೆ ತೂಗುದೀಪ ನಿವಾಸ ಎಂದು ಹೆಸರು ಇಡಲಾಗಿದೆ. ಅದನ್ನು ರಾಜಕಾಲುವೆಯ ಮೇಲೆ ನಿರ್ಮಾಣವಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರವುಗೊಳಿಸಲು ಮುಂದಾಗಿತ್ತು. ಆ ಮನೆ ಮಾತ್ರವಲ್ಲ, ಆ ಪ್ರದೇಶದಲ್ಲಿರುವ ಹಲವು ಮನೆಗಳನ್ನು ತೆರವುಗೊಳಿಸಲು ಬಿಬಿಎಂಪಿ ಮುಂದಾಗಿತ್ತು. ಆದರೆ ದರ್ಶನ ಸೇರಿದಂತೆ ರಾಜಕಾಲುವೆಯ ಮನೆ ಕಟ್ಟಿರುವ ಅನೇಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು.
ಈಗ ಬಿಬಿಎಂಪಿ ಮತ್ತೊಮ್ಮೆ ರಾಜಕಾಲುವೆಯ ಒತ್ತುವರಿಯನ್ನು ತೆರವುಗೊಳಿಸಲು ಕಾರ್ಯರೂಪಕ್ಕೆ ಇಳಿದಿದೆ. ಈ ಬಗ್ಗೆ ಮಾಧ್ಯಮದವರು ರಾಜ್ಯದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಕೇಳಿದಾಗ ” ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡುತ್ತೇವೆ. ನೀ ಸ್ಟೇ ತಂದಿದ್ರು ತೆರವು ಮಾಡುತ್ತೇವೆ, ನಾನು ಸ್ಟೇ ತಂದಿದ್ರು ತೆರವು ಮಾಡುತ್ತೇವೆ ” ಎಂದು ಹೇಳಿದರು.
ಈ ವಿಷಯದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಪ್ರತಿಕ್ರಿಯಿಸಿ ” ಸಣ್ಣವರು, ದೊಡ್ಡವರು ಅಂತಾ ನೋಡಲ್ಲ, ತೆರವು ಮಾಡುತ್ತೇವೆ. ಸ್ಟೇ ಇತ್ತು. ನಾವು ವೆಕೆಟ್ ಮಾಡಿರಲಿಲ್ಲ. ಸ್ಟೇ ತೆರವು ಮಾಡಿ ಕಾರ್ಯಾಚರಣೆ ಮಾಡುತ್ತೇವೆ. ಎಷ್ಟು ಸ್ಟೇ ತೆರವು ಆಗುತ್ತೋ ನೋಡುತ್ತೇವೆ. ಎಲ್ಲೆಲ್ಲಿ ಸ್ಟೇ ಇರುವ ಪ್ರಕರಣಗಳು ಇವೆ. ಅಲ್ಲೆಲ್ಲಾ ತೆರವು ಕಾರ್ಯ ಮಾಡುತ್ತೇವೆ. ಎಷ್ಟು ಬೇಗ ಕೋರ್ಟ್ ನಲ್ಲಿ ಸ್ಟೇ ತೆರವಾಗುತ್ತೆ, ನೋಡುತ್ತೇವೆ, ನಂತರ ಕ್ರಮ ವಹಿಸುತ್ತೇವೆ ” ಎಂದು ಹೇಳಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search