• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ ಗೆ ಹಠಾತ್ ಕಿವುಡತನ! ಇನ್ ಸ್ಟಾದಲ್ಲಿ ಹೇಳಿಕೆ

Tulunadu News Posted On June 18, 2024
0


0
Shares
  • Share On Facebook
  • Tweet It

ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ ಯಾರೆಂದು ಗೊತ್ತಿಲ್ಲದ ಸಂಗೀತ ಪ್ರೇಮಿಗಳು ಇಲ್ಲ. ಅವರು ರಾಷ್ಟ್ರೀಯ ವಾಹಿನಿಗಳ ಸಂಗೀತ ಸ್ಪರ್ಧೆಯಲ್ಲಿ ತೀರ್ಪುಗಾರರಾಗಿ ಕೂಡ ಜನಮನ ಗೆದ್ದವರು. ಅವರಿಗೆ ಈಗ ಅಚಾನಕ್ ಆಗಿ ಕಿವುಡುತನ ಬಂದಿರುವುದು ನಿಜಕ್ಕೂ ಅವರ ಅಭಿಮಾನಿಗಳಿಗೆ ತುಂಬಾ ನೋವನ್ನು ತಂದಿದೆ. ಈ ಬಗ್ಗೆ ಅವರೇ ಇನ್ಸಸ್ಟಾಗ್ರಾಂನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

” ಕೆಲವು ವಾರಗಳ ಹಿಂದೆ ವಿಮಾನದಿಂದ ಇಳಿದು ಬರುವಾಗ ಏನು ಕೇಳಿಸದಂತ ಅನುಭವವಾಯಿತು. ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ವೈರಾಣು ಸೋಂಕಿನಿಂದ ಕಿವಿಯಲ್ಲಿರುವ ನರಕೋಶಗಳಿಗೆ ಆಗಿರುವ ತೊಂದರೆಯಿಂದಾಗಿ ಇದ್ದಕ್ಕಿದ್ದಂತೆ ಕಿವುಡತನ ಕಾಣಿಸಿಕೊಂಡಿದೆ ಎಂದರು ” ಎಂದು ಅಲ್ಕಾ ತಿಳಿಸಿದ್ದಾರೆ.

” ಆದಷ್ಟು ಹೆಡ್ ಫೋನ್ ಬಳಕೆ ಮತ್ತು ಜೋರಾದ ಶಬ್ದಗಳಿಂದ ದೂರವಿರಿ ಎಂದು ನನ್ನ ಅಭಿಮಾನಿಗಳು ಮತ್ತು ಯುವಜನರನ್ನು ಕೇಳಿಕೊಳ್ಳುತ್ತೇನೆ. ನನ್ನ ವೃತ್ತಿ ಜೀವನದಲ್ಲಾದ ಅನಾರೋಗ್ಯ ಸಮಸ್ಯೆಗಳ ಬಗ್ಗೆ ಮುಂದೊಂದು ದಿನ ವಿವರಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ನಿಮ್ಮೆಲ್ಲರ ಪ್ರೋತ್ಸಾಹ, ಆರ್ಶೀವಾದವಿರಲಿ. ಆದಷ್ಟು ಬೇಗ ಚೇತರಿಸಿಕೊಳ್ಳುತ್ತೇನೆ ” ಎಂದು ಬರೆದುಕೊಂಡಿದ್ದಾರೆ.
58 ವರ್ಷದ ಅಲ್ಕಾ ಅವರು ಈವರೆಗೆ 1114 ಸಿನೆಮಾಗಳಿಗೆ ಸುಮಾರು 2486 ಹಾಡುಗಳನ್ನು ಹಾಡಿದ್ದಾರೆ. ಈ ಮೂಲಕ ಬಾಲಿವುಡ್ ನಲ್ಲಿ ಅತೀ ಹೆಚ್ಚು ಹಾಡುಗಳನ್ನು ಹಾಡಿದ ಗಾಯಕರ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದಾರೆ.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search