• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಗಳು ಸೋತು ಸುಣ್ಣವಾಗಿದ್ದರೂ ಅಮೇರಿಕಾದಲ್ಲಿ ಜಾಲಿ!

Tulunadu News Posted On June 20, 2024
0


0
Shares
  • Share On Facebook
  • Tweet It

ಟಿಟ್ವೆಂಟಿ ವಿಶ್ವಕಪ್ ನಲ್ಲಿ ಗೆದ್ದರೆ ಪ್ರತಿ ಆಟಗಾರನಿಗೆ ಒಂದು ಕೋಟಿ ಅಮೇರಿಕನ್ ಡಾಲರ್ ನೀಡುತ್ತೇನೆ ಎಂದು ಪಾಕ್ ಕ್ರಿಕೆಟ್ ಮಂಡಳಿ ಪಾಕಿಸ್ತಾನದ ಆಟಗಾರರಿಗೆ ಭರವಸೆ ನೀಡಿತ್ತು. ಒಂದು ಹಂತಕ್ಕೆ ಪಾಕ್ ಆಟಗಾರರು ಪ್ರಾಕ್ಟೀಸ್ ಮಾಡುತ್ತಿದ್ದ ರೀತಿಗೆ ಅವರಲ್ಲಿ ಅಗಾಧ ಶಿಸ್ತು ಬೆಳೆದಿರುವಂತೆಯೂ ಕಾಣಿಸುತ್ತಿತ್ತು. ಆದರೆ ಅಮೇರಿಕಾದಲ್ಲಿ ಇಳಿಯುತ್ತಿದ್ದಂತೆ ಶಿಸ್ತು, ಆಟ ಎಲ್ಲವನ್ನು ಮರೆತಂತಿರುವ ಪಾಕಿಗಳು ಅಲ್ಲಿ ಜಾಲಿ ಮೂಡ್ ನಲ್ಲಿ ದಿನ ಕಳೆಯುತ್ತಿದ್ದಾರೆ.

ಪ್ರಸ್ತುತ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗ್ರೂಪ್ – ಎ ನಲ್ಲಿದ್ದ ಪಾಕ್ ತಂಡ 4 ಪಂದ್ಯಗಳ ಪೈಕಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ, ಲೀಗ್ ಸುತ್ತಿನಲ್ಲಿ ಹೊರಬಿದ್ದಿತ್ತು. ಈ ಬಗ್ಗೆ ಪಾಕಿಸ್ತಾನದ ಮಾಜಿ ಆಟಗಾರ ಹಾಗೂ ಹಾಲಿ ಕೋಚ್ ಆಗಿರುವ ಅತೀಕ್ ಉಝ್ ಝಮಾನ್ ಅವರು ಮಾತನಾಡಿ ” ಹಿಂದೆ ಪಾಕ್ ತಂಡಕ್ಕೆ ಒಬ್ಬ ಕೋಚ್ ಹಾಗೂ ಒಬ್ಬ ಮ್ಯಾನೇಜರ್ ಮಾತ್ರ ನೇಮಕವಾಗುತ್ತಿದ್ದರು. ಅವರೊಂದಿಗೆ ಇಡೀ ತಂಡ ಯಾವುದೇ ಕ್ರಿಕೆಟ್ ಪಂದ್ಯಾವಳಿಗೂ ಶಿಸ್ತಿನಿಂದ ಹೋಗಿ ಬರುತ್ತಿತ್ತು. ಆದರೆ ಈಗ ಹಾಗಿಲ್ಲ. ಪ್ರತಿ ಆಟಗಾರ ತನ್ನೊಂದಿಗೆ ಒಬ್ಬ ಪ್ರತ್ಯೇಕ ಮ್ಯಾನೇಜರ್ ನನ್ನು ಕರೆದುಕೊಂಡು ಹೋಗುತ್ತಾನೆ. ಅದರೊಂದಿಗೆ ಆಟಗಾರರ ಪತ್ನಿಯರು ಕೂಡ ಇಂತಹ ಸರಣಿಗಳಿಗೆ ಹೋಗುತ್ತಾರೆ. 17 ಅಧಿಕಾರಿಗಳು, 60 ಹೋಟೇಲ್ ರೂಂ, ಕುಟುಂಬಗಳು ಇದೆಲ್ಲವನ್ನು ನೋಡುವಾಗ ಇವರು ದೇಶಕ್ಕಾಗಿ ಆಡಲು ಹೋಗುತ್ತಿದ್ದಾರೋ ಅಥವಾ ರಜಾದಿನಗಳನ್ನು ಎಂಜಾಯ್ ಮಾಡಲು ಹೋಗುತ್ತಿದ್ದಾರೋ ಎಂದು ತಿಳಿಯುವುದಿಲ್ಲ. ಇವರು ಆಡುವುದಕ್ಕಿಂತ ಹೆಚ್ಚಾಗಿ ಮೈದಾನದ ಹೊರಗಿರುವ ಹೆಂಡತಿ, ಮಕ್ಕಳ ಬಗ್ಗೆ ಗಮನ ಹರಿಸಿದರೆ ಆಟದ ಮೇಲೆ ಮನ ಕೇಂದ್ರಿಕರಿಸುವುದು ಹೇಗೆ? ಇವರಿಗಾಗಿ ಪ್ರತಿ ವರ್ಷ ಕೋಟಿಗಟ್ಟಲೆ ಹಣವನ್ನು ಪಾಕ್ ಖರ್ಚು ಮಾಡುತ್ತಿದ್ದರೂ ಇವರು ಹೀಗೆ ಮಾಡಿದರೆ ಇವರ ಬಗ್ಗೆ ಗೌರವ ಎಲ್ಲಿ ಉಳಿಯುತ್ತದೆ” ಎಂದು ಝಮಾನ್ ಪ್ರಶ್ನಿಸಿದ್ದಾರೆ.

ಸದ್ಯ ಪಾಕ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದರೂ ತವರಿಗೆ ಮರಳದೇ ಅಮೇರಿಕಾದಲ್ಲಿ ಉಳಿದಿದ್ದಾರೆ. ಐಷಾರಾಮಿ ರೂಂಗಳನ್ನು ಬುಕ್ ಮಾಡಿಕೊಂಡಿದ್ದು, ಹಾಲಿಡೆ ಗಮ್ಮತ್ತಿನಲ್ಲಿದ್ದಾರೆ. ಇದರಿಂದ ಪಾಕ್ ಆಟಗಾರರ ವಿರುದ್ಧ ಅಲ್ಲಿನ ಹಿರಿಯ ಆಟಗಾರರ ಆಕ್ರೋಶ ಮುಂದುವರೆದಿದೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search