• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಗಳು ಸೋತು ಸುಣ್ಣವಾಗಿದ್ದರೂ ಅಮೇರಿಕಾದಲ್ಲಿ ಜಾಲಿ!

Tulunadu News Posted On June 20, 2024
0


0
Shares
  • Share On Facebook
  • Tweet It

ಟಿಟ್ವೆಂಟಿ ವಿಶ್ವಕಪ್ ನಲ್ಲಿ ಗೆದ್ದರೆ ಪ್ರತಿ ಆಟಗಾರನಿಗೆ ಒಂದು ಕೋಟಿ ಅಮೇರಿಕನ್ ಡಾಲರ್ ನೀಡುತ್ತೇನೆ ಎಂದು ಪಾಕ್ ಕ್ರಿಕೆಟ್ ಮಂಡಳಿ ಪಾಕಿಸ್ತಾನದ ಆಟಗಾರರಿಗೆ ಭರವಸೆ ನೀಡಿತ್ತು. ಒಂದು ಹಂತಕ್ಕೆ ಪಾಕ್ ಆಟಗಾರರು ಪ್ರಾಕ್ಟೀಸ್ ಮಾಡುತ್ತಿದ್ದ ರೀತಿಗೆ ಅವರಲ್ಲಿ ಅಗಾಧ ಶಿಸ್ತು ಬೆಳೆದಿರುವಂತೆಯೂ ಕಾಣಿಸುತ್ತಿತ್ತು. ಆದರೆ ಅಮೇರಿಕಾದಲ್ಲಿ ಇಳಿಯುತ್ತಿದ್ದಂತೆ ಶಿಸ್ತು, ಆಟ ಎಲ್ಲವನ್ನು ಮರೆತಂತಿರುವ ಪಾಕಿಗಳು ಅಲ್ಲಿ ಜಾಲಿ ಮೂಡ್ ನಲ್ಲಿ ದಿನ ಕಳೆಯುತ್ತಿದ್ದಾರೆ.

ಪ್ರಸ್ತುತ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗ್ರೂಪ್ – ಎ ನಲ್ಲಿದ್ದ ಪಾಕ್ ತಂಡ 4 ಪಂದ್ಯಗಳ ಪೈಕಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ, ಲೀಗ್ ಸುತ್ತಿನಲ್ಲಿ ಹೊರಬಿದ್ದಿತ್ತು. ಈ ಬಗ್ಗೆ ಪಾಕಿಸ್ತಾನದ ಮಾಜಿ ಆಟಗಾರ ಹಾಗೂ ಹಾಲಿ ಕೋಚ್ ಆಗಿರುವ ಅತೀಕ್ ಉಝ್ ಝಮಾನ್ ಅವರು ಮಾತನಾಡಿ ” ಹಿಂದೆ ಪಾಕ್ ತಂಡಕ್ಕೆ ಒಬ್ಬ ಕೋಚ್ ಹಾಗೂ ಒಬ್ಬ ಮ್ಯಾನೇಜರ್ ಮಾತ್ರ ನೇಮಕವಾಗುತ್ತಿದ್ದರು. ಅವರೊಂದಿಗೆ ಇಡೀ ತಂಡ ಯಾವುದೇ ಕ್ರಿಕೆಟ್ ಪಂದ್ಯಾವಳಿಗೂ ಶಿಸ್ತಿನಿಂದ ಹೋಗಿ ಬರುತ್ತಿತ್ತು. ಆದರೆ ಈಗ ಹಾಗಿಲ್ಲ. ಪ್ರತಿ ಆಟಗಾರ ತನ್ನೊಂದಿಗೆ ಒಬ್ಬ ಪ್ರತ್ಯೇಕ ಮ್ಯಾನೇಜರ್ ನನ್ನು ಕರೆದುಕೊಂಡು ಹೋಗುತ್ತಾನೆ. ಅದರೊಂದಿಗೆ ಆಟಗಾರರ ಪತ್ನಿಯರು ಕೂಡ ಇಂತಹ ಸರಣಿಗಳಿಗೆ ಹೋಗುತ್ತಾರೆ. 17 ಅಧಿಕಾರಿಗಳು, 60 ಹೋಟೇಲ್ ರೂಂ, ಕುಟುಂಬಗಳು ಇದೆಲ್ಲವನ್ನು ನೋಡುವಾಗ ಇವರು ದೇಶಕ್ಕಾಗಿ ಆಡಲು ಹೋಗುತ್ತಿದ್ದಾರೋ ಅಥವಾ ರಜಾದಿನಗಳನ್ನು ಎಂಜಾಯ್ ಮಾಡಲು ಹೋಗುತ್ತಿದ್ದಾರೋ ಎಂದು ತಿಳಿಯುವುದಿಲ್ಲ. ಇವರು ಆಡುವುದಕ್ಕಿಂತ ಹೆಚ್ಚಾಗಿ ಮೈದಾನದ ಹೊರಗಿರುವ ಹೆಂಡತಿ, ಮಕ್ಕಳ ಬಗ್ಗೆ ಗಮನ ಹರಿಸಿದರೆ ಆಟದ ಮೇಲೆ ಮನ ಕೇಂದ್ರಿಕರಿಸುವುದು ಹೇಗೆ? ಇವರಿಗಾಗಿ ಪ್ರತಿ ವರ್ಷ ಕೋಟಿಗಟ್ಟಲೆ ಹಣವನ್ನು ಪಾಕ್ ಖರ್ಚು ಮಾಡುತ್ತಿದ್ದರೂ ಇವರು ಹೀಗೆ ಮಾಡಿದರೆ ಇವರ ಬಗ್ಗೆ ಗೌರವ ಎಲ್ಲಿ ಉಳಿಯುತ್ತದೆ” ಎಂದು ಝಮಾನ್ ಪ್ರಶ್ನಿಸಿದ್ದಾರೆ.

ಸದ್ಯ ಪಾಕ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದರೂ ತವರಿಗೆ ಮರಳದೇ ಅಮೇರಿಕಾದಲ್ಲಿ ಉಳಿದಿದ್ದಾರೆ. ಐಷಾರಾಮಿ ರೂಂಗಳನ್ನು ಬುಕ್ ಮಾಡಿಕೊಂಡಿದ್ದು, ಹಾಲಿಡೆ ಗಮ್ಮತ್ತಿನಲ್ಲಿದ್ದಾರೆ. ಇದರಿಂದ ಪಾಕ್ ಆಟಗಾರರ ವಿರುದ್ಧ ಅಲ್ಲಿನ ಹಿರಿಯ ಆಟಗಾರರ ಆಕ್ರೋಶ ಮುಂದುವರೆದಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search