• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪಾಕಿಗಳು ಸೋತು ಸುಣ್ಣವಾಗಿದ್ದರೂ ಅಮೇರಿಕಾದಲ್ಲಿ ಜಾಲಿ!

Tulunadu News Posted On June 20, 2024
0


0
Shares
  • Share On Facebook
  • Tweet It

ಟಿಟ್ವೆಂಟಿ ವಿಶ್ವಕಪ್ ನಲ್ಲಿ ಗೆದ್ದರೆ ಪ್ರತಿ ಆಟಗಾರನಿಗೆ ಒಂದು ಕೋಟಿ ಅಮೇರಿಕನ್ ಡಾಲರ್ ನೀಡುತ್ತೇನೆ ಎಂದು ಪಾಕ್ ಕ್ರಿಕೆಟ್ ಮಂಡಳಿ ಪಾಕಿಸ್ತಾನದ ಆಟಗಾರರಿಗೆ ಭರವಸೆ ನೀಡಿತ್ತು. ಒಂದು ಹಂತಕ್ಕೆ ಪಾಕ್ ಆಟಗಾರರು ಪ್ರಾಕ್ಟೀಸ್ ಮಾಡುತ್ತಿದ್ದ ರೀತಿಗೆ ಅವರಲ್ಲಿ ಅಗಾಧ ಶಿಸ್ತು ಬೆಳೆದಿರುವಂತೆಯೂ ಕಾಣಿಸುತ್ತಿತ್ತು. ಆದರೆ ಅಮೇರಿಕಾದಲ್ಲಿ ಇಳಿಯುತ್ತಿದ್ದಂತೆ ಶಿಸ್ತು, ಆಟ ಎಲ್ಲವನ್ನು ಮರೆತಂತಿರುವ ಪಾಕಿಗಳು ಅಲ್ಲಿ ಜಾಲಿ ಮೂಡ್ ನಲ್ಲಿ ದಿನ ಕಳೆಯುತ್ತಿದ್ದಾರೆ.

ಪ್ರಸ್ತುತ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗ್ರೂಪ್ – ಎ ನಲ್ಲಿದ್ದ ಪಾಕ್ ತಂಡ 4 ಪಂದ್ಯಗಳ ಪೈಕಿ ಕೇವಲ ಎರಡು ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ, ಲೀಗ್ ಸುತ್ತಿನಲ್ಲಿ ಹೊರಬಿದ್ದಿತ್ತು. ಈ ಬಗ್ಗೆ ಪಾಕಿಸ್ತಾನದ ಮಾಜಿ ಆಟಗಾರ ಹಾಗೂ ಹಾಲಿ ಕೋಚ್ ಆಗಿರುವ ಅತೀಕ್ ಉಝ್ ಝಮಾನ್ ಅವರು ಮಾತನಾಡಿ ” ಹಿಂದೆ ಪಾಕ್ ತಂಡಕ್ಕೆ ಒಬ್ಬ ಕೋಚ್ ಹಾಗೂ ಒಬ್ಬ ಮ್ಯಾನೇಜರ್ ಮಾತ್ರ ನೇಮಕವಾಗುತ್ತಿದ್ದರು. ಅವರೊಂದಿಗೆ ಇಡೀ ತಂಡ ಯಾವುದೇ ಕ್ರಿಕೆಟ್ ಪಂದ್ಯಾವಳಿಗೂ ಶಿಸ್ತಿನಿಂದ ಹೋಗಿ ಬರುತ್ತಿತ್ತು. ಆದರೆ ಈಗ ಹಾಗಿಲ್ಲ. ಪ್ರತಿ ಆಟಗಾರ ತನ್ನೊಂದಿಗೆ ಒಬ್ಬ ಪ್ರತ್ಯೇಕ ಮ್ಯಾನೇಜರ್ ನನ್ನು ಕರೆದುಕೊಂಡು ಹೋಗುತ್ತಾನೆ. ಅದರೊಂದಿಗೆ ಆಟಗಾರರ ಪತ್ನಿಯರು ಕೂಡ ಇಂತಹ ಸರಣಿಗಳಿಗೆ ಹೋಗುತ್ತಾರೆ. 17 ಅಧಿಕಾರಿಗಳು, 60 ಹೋಟೇಲ್ ರೂಂ, ಕುಟುಂಬಗಳು ಇದೆಲ್ಲವನ್ನು ನೋಡುವಾಗ ಇವರು ದೇಶಕ್ಕಾಗಿ ಆಡಲು ಹೋಗುತ್ತಿದ್ದಾರೋ ಅಥವಾ ರಜಾದಿನಗಳನ್ನು ಎಂಜಾಯ್ ಮಾಡಲು ಹೋಗುತ್ತಿದ್ದಾರೋ ಎಂದು ತಿಳಿಯುವುದಿಲ್ಲ. ಇವರು ಆಡುವುದಕ್ಕಿಂತ ಹೆಚ್ಚಾಗಿ ಮೈದಾನದ ಹೊರಗಿರುವ ಹೆಂಡತಿ, ಮಕ್ಕಳ ಬಗ್ಗೆ ಗಮನ ಹರಿಸಿದರೆ ಆಟದ ಮೇಲೆ ಮನ ಕೇಂದ್ರಿಕರಿಸುವುದು ಹೇಗೆ? ಇವರಿಗಾಗಿ ಪ್ರತಿ ವರ್ಷ ಕೋಟಿಗಟ್ಟಲೆ ಹಣವನ್ನು ಪಾಕ್ ಖರ್ಚು ಮಾಡುತ್ತಿದ್ದರೂ ಇವರು ಹೀಗೆ ಮಾಡಿದರೆ ಇವರ ಬಗ್ಗೆ ಗೌರವ ಎಲ್ಲಿ ಉಳಿಯುತ್ತದೆ” ಎಂದು ಝಮಾನ್ ಪ್ರಶ್ನಿಸಿದ್ದಾರೆ.

ಸದ್ಯ ಪಾಕ್ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದರೂ ತವರಿಗೆ ಮರಳದೇ ಅಮೇರಿಕಾದಲ್ಲಿ ಉಳಿದಿದ್ದಾರೆ. ಐಷಾರಾಮಿ ರೂಂಗಳನ್ನು ಬುಕ್ ಮಾಡಿಕೊಂಡಿದ್ದು, ಹಾಲಿಡೆ ಗಮ್ಮತ್ತಿನಲ್ಲಿದ್ದಾರೆ. ಇದರಿಂದ ಪಾಕ್ ಆಟಗಾರರ ವಿರುದ್ಧ ಅಲ್ಲಿನ ಹಿರಿಯ ಆಟಗಾರರ ಆಕ್ರೋಶ ಮುಂದುವರೆದಿದೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search