• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ತುಳುನಾಡ ಚೆಲುವೆಯೊಂದಿಗೆ ತರುಣ್ ಮದುವೆ ಅಗಸ್ಟ್ 10 ಕ್ಕೆ ಫಿಕ್ಸಾ?

Tulunadu News Posted On June 25, 2024
0


0
Shares
  • Share On Facebook
  • Tweet It

ಚೌಕ, ರಾಬರ್ಟ್, ಕಾಟೇರ ಕನ್ನಡದ ಹಿಟ್ ಸಿನೆಮಾಗಳ ನಿರ್ದೇಶಕ ತರುಣ್ ಸುಧೀರ್ ಅವರ ಜೊತೆ ತುಳು ಸಿನೆಮಾಗಳಾದ ಎಕ್ಕ ಸಕ್ಕ, ಜೈ ತುಳುನಾಡ್, ಪಿಲಿಬೈಲ್ ಯಮುನಕ್ಕ ಸೇರಿ ಕನ್ನಡದ ರಾಬರ್ಟ್ ಸಹಿತ ಕೆಲವು ಸಿನೆಮಾಗಳಲ್ಲಿ ಮಿಂಚಿದ್ದ ಸೋನಾಲ್ ಮೊಂತೆರೋ ಅವರು ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಗುಸುಗುಸು ಚಂದನವನದಿಂದ ಕೇಳಿಬರುತ್ತಿದೆ. ಇಬ್ಬರೂ ಚಂದನವನದಲ್ಲಿ ದೃಢ ಹೆಜ್ಜೆಗಳನ್ನು ಇಟ್ಟು ಉತ್ತಮ ಭವಿಷ್ಯವನ್ನು ಹೊಂದಿದ್ದಾರೆ.

ಈಗ ಬರುತ್ತಿರುವ ವದಂತಿಯ ಪ್ರಕಾರ ಸೋನಾಲ್ ಅವರು ದರ್ಶನ್ ನಟನೆಯ ರಾಬರ್ಟ್ ಸಿನೆಮಾದ ನಿರ್ದೇಶಕ ತರುಣ್ ಅವರನ್ನು ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಬಹಳ ದಟ್ಟವಾಗಿ ಹರಡಿದೆ. ಇನ್ನು ಅಗಸ್ಟ್ 10 ರಂದು ಈ ಜೋಡಿ ಹಸೆಮಣೆ ಏರಲಿದ್ದಾರೆ ಈಗ ಬರುತ್ತಿರುವ ಲೇಟೆಸ್ಟ್ ಸುದ್ದಿ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ತರುಣ್ ಈ ಬಗ್ಗೆ ಸದ್ಯ ಹರಡುತ್ತಿರುವ ವಿಷಯಗಳ ಬಗ್ಗೆ ನಿಖರವಾಗಿ ಮಾತನಾಡಲು ಕಾಲಾವಕಾಶ ಇದೆ ಎನ್ನುವ ಅರ್ಥದ ಮಾತುಗಳನ್ನು ಆಡಿದ್ದಾರೆ. ಇವರಿಬ್ಬರೂ ರಾಬರ್ಟ್ ಸಿನೆಮಾದ ಚಿತ್ರೀಕರಣದ ಸಮಯದಲ್ಲಿ ಸ್ನೇಹಿತರಾಗಿದ್ದು, ಅದು ನಂತರ ಪ್ರೇಮವಾಗಿ ಬದಲಾಗಿ ಈಗ ಮದುವೆಯ ಹಂತಕ್ಕೆ ಬಂದು ನಿಂತಿದೆ ಎನ್ನುವುದು ಈಗ ಎದ್ದಿರುವ ಊಹೆ. ಸೋನಾಲ್ ಅವರು ಈ ಬಗ್ಗೆ ಇನ್ನು ಕೂಡ ಸ್ಪಷ್ಟನೆ ನೀಡಬೇಕಿದ್ದು, ಇವರಿಬ್ಬರೂ ಮದುವೆಯಾದರೆ ಸ್ಯಾಂಡಲ್ ವುಡ್ ನ ಮತ್ತೊಂದು ತಾರಾ ಜೋಡಿ ಎನಿಸಲಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search