• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ರಾಜ್ಯದಲ್ಲಿ ಡೆಂಗ್ಯೂ ತಡೆಗೆ ಸಿಸಿಟಿವಿ ಅಳವಡಿಕೆ! ಹೇಗಿದೆ ಪರಿಹಾರ..

Tulunadu News Posted On July 10, 2024
0


0
Shares
  • Share On Facebook
  • Tweet It

ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರಕಾರ ತಯಾರಾಗಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ಜನರು ಸಿಕ್ಕಿದ ಕಡೆ ರಸ್ತೆ ಬದಿಯಲ್ಲಿ ತ್ಯಾಜ್ಯ ಬಿಸಾಡುವುದನ್ನು ತಪ್ಪಿಸಲು ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಲಾಗುವುದು, ಜನರು ಮನೆಯ ಬಳಿ ಬರುವ ಕಸ ಸಂಗ್ರಹ ವಾಹನಗಳಿಗೆ ಕಸವನ್ನು ಹಾಕದೇ ರಸ್ತೆ ಬದಿ ಎಸೆಯುತ್ತಿದ್ದಾರೆ. ಈ ಕಾರಣಕ್ಕೆ ಎಲ್ ಇಡಿ ವಿದ್ಯುತ್ ದೀಪದ ಕಂಬಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣ ಏರಿಕೆಯಾಗುತ್ತಲೇ ಇದೆ. ಆರೋಗ್ಯ ಇಲಾಖೆ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸಾರ್ವಜನಿಕರ ಸಹಕಾರ ಕೋರಿದೆ. ಕಸವನ್ನು ಮನೆಬಾಗಿಲಿಗೆ ಬರುವ ತ್ಯಾಜ್ಯ ಸಂಗ್ರಹ ವಾಹನಗಳಿಗೆ ನೀಡಬೇಕು ಎನ್ನುವ ಸೂಚನೆಯನ್ನು ಅನೇಕರು ಪಾಲಿಸುತ್ತಿಲ್ಲ. ಜೊತೆಗೆ ಒಣ ಮತ್ತು ಹಸಿಕಸ ಬೇರ್ಪಡಿಸಬೇಕು ಎನ್ನುವ ಸೂಚನೆಯನ್ನು ಜನ ಕ್ಯಾರೇ ಮಾಡುತ್ತಿಲ್ಲ. ಒಂದಷ್ಟು ದಿನ ದಂಡ ವಿಧಿಸುವ ಪ್ರಕ್ರಿಯೆ ಆರಂಭವಾದರೂ, ಸಾರ್ವಜನಿಕರಿಂದ ಇದಕ್ಕೂ ಸೂಕ್ತ ಸ್ಪಂದನೆ ವ್ಯಕ್ತವಾಗದ ಹಿನ್ನಲೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ಕಸ ಬಿಸಾಕುವುದು ಬಹುತೇಕ ಕಡೆ ಹಾಗೆ ಇದೆ.

ಕಸ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸುವ ಬಗ್ಗೆಯೂ ಸೂಚನೆ ನೀಡಲಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಪಾಲಿಕೆಗಳು ಹಾಗೂ ಆರೋಗ್ಯ ಇಲಾಖೆ ಜಂಟಿಯಾಗಿ ಕೆಲಸ ಮಾಡುತ್ತಿವೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಭೆ ನಡೆಸುತ್ತಾರೆ ಎಂದು ಡಿಸಿಎಂ ಹೇಳಿದ್ದಾರೆ.

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೂ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆಯಲ್ಲಿ ನಿರ್ದೇಶನ ನೀಡಿದ್ದರು.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search