• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಹಾ ಹತ್ಯೆಯ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ!

Tulunadu News Posted On July 10, 2024
0


0
Shares
  • Share On Facebook
  • Tweet It

ರಾಜ್ಯದಲ್ಲಿಯೇ ಸಂಚಲನ ಉಂಟು ಮಾಡಿದ್ದ ನೇಹಾ ಹಿರೇಮಠ ಹತ್ಯಾ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೊಲೆಯಾದ 81 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಅದರಲ್ಲಿರುವ 483 ಪುಟಗಳ ವರದಿ ಸದ್ಯ ನ್ಯಾಯಾಲಯದ ಮುಂದಿದೆ. ಚಾರ್ಜ್ ಶೀಟ್ ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಹತ್ಯೆಯ ಹಿಂದೆ ಲವ್ ಜಿಹಾದ್ ಕಾರಣವಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದವು. ನೇಹಾ ತಂದೆ ಕೂಡ ಇದನ್ನು ಬಲವಾಗಿ ಸಮರ್ಥಿಸಿದ್ದರು. ಆದರೆ ಸಿಐಡಿ ಸಲ್ಲಿಸಿದ ವರದಿಯಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಮದುವೆ ನಿರಾಕರಣೆಯೇ ಕಾರಣ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್ ಹುಬ್ಬಳ್ಳಿಯ ಪಿಸಿ ಜಾಬಿನ್ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿ ನಂತರ ಪ್ರೀತಿಸಲು ಶುರು ಮಾಡಿದ್ದರು. 2024 ರ ಮಾರ್ಚ್ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಅದು ಮನಸ್ತಾಪಕ್ಕೆ ಬೆಳೆದು ನೇಹಾ ಕೊನೆಗೆ ಫಯಾಜ್ ಜೊತೆ ಮಾತನಾಡುವುದನ್ನು ಬಿಟ್ಟುಬಿಟ್ಟಿದ್ದಳು.
ಇದರಿಂದ ಫಯಾಜ್ ತೀವ್ರ ಹತಾಶೆಗೊಂಡು ನೇಹಾಳನ್ನು ಜೀವಂತ ಬಿಡಬಾರದು ಎಂದು ನಿರ್ಧರಿಸಿ ಏಪ್ರಿಲ್ 18 ರಂದು ಕೊಲೆ ಮಾಡುವ ಮೂರು ದಿನಗಳ ಮೊದಲು ಧಾರವಾಡದ ಆರ್ಯ ಸೂಪರ್ ಬಜಾರ್ ನಲ್ಲಿ ಚಾಕು ಖರೀದಿಸಿದ್ದಾನೆ. ಫಯಾಜ್ ಚಾಕು ಖರೀದಿಸಿದ ಸಿಸಿಟಿವಿ ದೃಶ್ಯ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ.
ಆರೋಪಿ ಫಯಾಜ್ ವಿರುದ್ಧ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ), 341 ( ಒಂದು ತಿಂಗಳು ಜೈಲು ಶಿಕ್ಷೆ) ಹಾಗೂ 506 ( ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.

ಇಷ್ಟು ದಿನ ಪ್ರೀತಿ ಮಾಡಿ ಈಗ ಮೋಸ ಮಾಡುತ್ತಿದ್ದೀಯಾ? ನನ್ನನ್ನು ಮದುವೆ ಆಗುವುದಿಲ್ಲವೇ? ಈಗ ನಿನ್ನನ್ನು ಬಿಡುವುದಿಲ್ಲ ಎಂದು ಸಂಜೆ 4.40 ರ ಸುಮಾರಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಕೊಲೆ ಮಾಡಿ, ಅಲ್ಲಿಯೇ ಚಾಕು ಬಿಟ್ಟು ಓಡಿ ಹೋಗಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
Tulunadu News February 27, 2026
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
  • Popular Posts

    • 1
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 2
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 3
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 4
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search