• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಹಾ ಹತ್ಯೆಯ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ!

Tulunadu News Posted On July 10, 2024
0


0
Shares
  • Share On Facebook
  • Tweet It

ರಾಜ್ಯದಲ್ಲಿಯೇ ಸಂಚಲನ ಉಂಟು ಮಾಡಿದ್ದ ನೇಹಾ ಹಿರೇಮಠ ಹತ್ಯಾ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೊಲೆಯಾದ 81 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಅದರಲ್ಲಿರುವ 483 ಪುಟಗಳ ವರದಿ ಸದ್ಯ ನ್ಯಾಯಾಲಯದ ಮುಂದಿದೆ. ಚಾರ್ಜ್ ಶೀಟ್ ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಹತ್ಯೆಯ ಹಿಂದೆ ಲವ್ ಜಿಹಾದ್ ಕಾರಣವಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದವು. ನೇಹಾ ತಂದೆ ಕೂಡ ಇದನ್ನು ಬಲವಾಗಿ ಸಮರ್ಥಿಸಿದ್ದರು. ಆದರೆ ಸಿಐಡಿ ಸಲ್ಲಿಸಿದ ವರದಿಯಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಮದುವೆ ನಿರಾಕರಣೆಯೇ ಕಾರಣ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್ ಹುಬ್ಬಳ್ಳಿಯ ಪಿಸಿ ಜಾಬಿನ್ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿ ನಂತರ ಪ್ರೀತಿಸಲು ಶುರು ಮಾಡಿದ್ದರು. 2024 ರ ಮಾರ್ಚ್ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಅದು ಮನಸ್ತಾಪಕ್ಕೆ ಬೆಳೆದು ನೇಹಾ ಕೊನೆಗೆ ಫಯಾಜ್ ಜೊತೆ ಮಾತನಾಡುವುದನ್ನು ಬಿಟ್ಟುಬಿಟ್ಟಿದ್ದಳು.
ಇದರಿಂದ ಫಯಾಜ್ ತೀವ್ರ ಹತಾಶೆಗೊಂಡು ನೇಹಾಳನ್ನು ಜೀವಂತ ಬಿಡಬಾರದು ಎಂದು ನಿರ್ಧರಿಸಿ ಏಪ್ರಿಲ್ 18 ರಂದು ಕೊಲೆ ಮಾಡುವ ಮೂರು ದಿನಗಳ ಮೊದಲು ಧಾರವಾಡದ ಆರ್ಯ ಸೂಪರ್ ಬಜಾರ್ ನಲ್ಲಿ ಚಾಕು ಖರೀದಿಸಿದ್ದಾನೆ. ಫಯಾಜ್ ಚಾಕು ಖರೀದಿಸಿದ ಸಿಸಿಟಿವಿ ದೃಶ್ಯ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ.
ಆರೋಪಿ ಫಯಾಜ್ ವಿರುದ್ಧ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ), 341 ( ಒಂದು ತಿಂಗಳು ಜೈಲು ಶಿಕ್ಷೆ) ಹಾಗೂ 506 ( ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.

ಇಷ್ಟು ದಿನ ಪ್ರೀತಿ ಮಾಡಿ ಈಗ ಮೋಸ ಮಾಡುತ್ತಿದ್ದೀಯಾ? ನನ್ನನ್ನು ಮದುವೆ ಆಗುವುದಿಲ್ಲವೇ? ಈಗ ನಿನ್ನನ್ನು ಬಿಡುವುದಿಲ್ಲ ಎಂದು ಸಂಜೆ 4.40 ರ ಸುಮಾರಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಕೊಲೆ ಮಾಡಿ, ಅಲ್ಲಿಯೇ ಚಾಕು ಬಿಟ್ಟು ಓಡಿ ಹೋಗಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
Tulunadu News June 18, 2025
ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
    • 114 ಮುಸ್ಲಿಮರು ಸೇರಿ ದೇಗುಲದ 167 ಸಿಬ್ಬಂದಿ ವಜಾ ಮಾಡಿ ಆದೇಶ!
    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
  • Popular Posts

    • 1
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 2
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 3
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • 4
      ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • 5
      ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search