• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಚ್ಚೇದಿತ ಮುಸ್ಲಿಂ ಮಹಿಳೆಯರಿಗೂ ಜೀವನಾಂಶದ ಹಕ್ಕಿದೆ – ಸುಪ್ರೀಂ ಕೋರ್ಟ್

Tulunadu News Posted On July 10, 2024
0


0
Shares
  • Share On Facebook
  • Tweet It

ಗಂಡನಿಂದ ವಿಚ್ಚೇದನಕ್ಕೆ ಒಳಗಾಗಿರುವ ಮುಸ್ಲಿಂ ಮಹಿಳೆ ಜೀವನಾಂಶವನ್ನು ಪಡೆಯಲು ಹಕ್ಕು ಹೊಂದಿದ್ದಾಳೆ ಎಂದು ಸುಪ್ರೀಂ ಕೋರ್ಟಿನ ದ್ವಿಸದಸ್ಯ ಪೀಠ ಮಹತ್ತರ ತೀರ್ಪನ್ನು ನೀಡಿದೆ. ಅಪರಾಧಿಕ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ಜೀವನ ನಿರ್ವಹಣೆಗೆ ವಿಚ್ಚೇದಿತ ಮಹಿಳೆ ಪರಿತ್ಯಕ್ತ ಪತಿಯಿಂದ ಹಣವನ್ನು ಪಡೆದುಕೊಳ್ಳಲು ಹಕ್ಕು ಹೊಂದಿದ್ದಾಳೆ. ಇದರಲ್ಲಿ ಯಾವುದೇ ಧರ್ಮ ಹೊರತಾಗಿಲ್ಲ. ಎಲ್ಲಾ ಧರ್ಮದ ಮದುವೆಯಾದ ಮತ್ತು ಮದುವೆಯಾಗದೇ ಒಟ್ಟಿಗಿದ್ದ ಮಹಿಳೆಯರು ಏಕಪ್ರಕಾರವಾಗಿ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಮೂರ್ತಿಗಳಾದ ಜಸ್ಟೀಸ್ ಬಿ ವಿ ನಾಗರತ್ನ ಹಾಗೂ ಜಸ್ಟೀಸ್ ಅಗಸ್ಟೈನ್ ಜಾರ್ಜ್ ಮಾಸಿಹ ಹೇಳಿದ್ದಾರೆ.

ಜೀವನಾಂಶವನ್ನು ವಿಚ್ಚೇದಿತ ಪತ್ನಿಗೆ ನೀಡುವುದು ಅಂದರೆ ದಾನ ನೀಡುವುದಲ್ಲ, ಅದು ಅವರ ಮೂಲಭೂತ ಹಕ್ಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಮಹಿಳೆಯನ್ನು ಆರ್ಥಿಕವಾಗಿ ಬಲಪಡಿಸುವ ನಿಟ್ಟಿನಲ್ಲಿ ಲಿಂಗ ಸಮಾನತೆಯ ಸೂತ್ರವನ್ನು ಅಳವಡಿಸಿ ಇದನ್ನು ಯಾವುದೇ ಧರ್ಮದ ಸೂತ್ರಕ್ಕೆ ಕಟ್ಟು ಹಾಕದೇ ಪರಿಶೀಲಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
“ಕೆಲವು ಗಂಡಂದಿರಿಗೆ ಪತ್ನಿಯಾದವಳು ಓರ್ವ ಗೃಹಿಣಿಯಾಗಿ ತಮ್ಮ ಮೇಲೆ ಎಲ್ಲಾ ರೀತಿಯಲ್ಲಿ ಅವಲಂಬಿತಳಾಗಿದ್ದಾಳೆ ಎನ್ನುವ ಅರಿವೇ ಇರುವುದಿಲ್ಲ. ಆದ್ದರಿಂದ ಇನ್ನಾದರೂ ಭಾರತೀಯ ಪುರುಷರು ಗೃಹಿಣಿಯ ತ್ಯಾಗ ಮತ್ತು ಅರ್ಪಣಾ ಮನೋಭಾವವನ್ನು ಪುರಸ್ಕರಿಸಿ ಆಕೆಗೂ ಉತ್ತಮ ಬಾಳು ಸಿಗಲು ಯೋಚಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

0
Shares
  • Share On Facebook
  • Tweet It




Trending Now
ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
Tulunadu News August 21, 2025
ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
Tulunadu News August 21, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
    • ಮುಂದಿನ ಚುನಾವಣೆಯಲ್ಲಿಯೂ ನನ್ನ ಕೈ ಹಿಡಿಯಿರಿ: ವರುಣಾದಲ್ಲಿ ಸಿಎಂ ಮನವಿ!
    • ಮಂಗಳೂರು: ಈಜುತ್ತಿರುವಾಗಲೇ ಹೃದಯಾಘಾತ: ಮೃತಪಟ್ಟ ಕೋಚ್!
  • Popular Posts

    • 1
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 2
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 3
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • 4
      ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • 5
      ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!

  • Privacy Policy
  • Contact
© Tulunadu Infomedia.

Press enter/return to begin your search