• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

UK ಸಂಸತ್ತಿನಲ್ಲಿ ಭಗವದ್ಗೀತೆಯ ಮೇಲೆ ಪ್ರಮಾಣ ವಚನ!

Tulunadu News Posted On July 11, 2024
0


0
Shares
  • Share On Facebook
  • Tweet It

ಭಗವತ್ ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿರುವ ಘಟನೆಯೊಂದು ನಡೆದಿದ್ದು ಅದು ಯುನೈಟೆಡ್ ಕಿಂಗ್ ಡಂ ಸಂಸತ್ತಿನಲ್ಲಿ ಎನ್ನುವ ವಿಷಯ ನಿಮಗೆ ಗೊತ್ತಾದರೆ ನಿಜಕ್ಕೂ ಆಶ್ಚರ್ಯವಾಗಬಹುದು. ಹೌದು, ಹಾಗೆ ಆಗಿದೆ. ಶಿವಾನಿ ರಾಜಾ ಎನ್ನುವ ಮಹಿಳೆ ಸಂಸದೆ ಭಗವತ್ ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 29 ವರ್ಷದ ಶಿವಾನಿ ರಾಜಾ ಅವರು ಲೇಸೆಸ್ಟರ್ ಪೂರ್ವ ಕ್ಷೇತ್ರದಿಂದ ಗೆದ್ದಿದ್ದಾರೆ. ಇನ್ನು ವಿಶೇಷ ಎಂದರೆ ಅವರ ಕನಸರವೇಟಿವ್ ಪಕ್ಷ ಕಳೆದ 37 ವರ್ಷಗಳಲ್ಲಿ ಮೊದಲ ಬಾರಿ ಇಲ್ಲಿ ಗೆಲ್ಲುವ ಮೂಲಕ ಬಲಾಢ್ಯ ಲೇಬರ್ ಪಾರ್ಟಿಯ ಭದ್ರಕೋಟೆಯನ್ನು ಚೂರು ಚೂರು ಮಾಡಿದೆ.


ಲೇಸೆಸ್ಟರ್ ಪೂರ್ವವನ್ನು ಪ್ರತಿನಿಧಿಸುತ್ತಿರುವುದು ನಿಜಕ್ಕೂ ಹೆಮ್ಮೆ ತಂದಿದೆ, ಆದ್ದರಿಂದ ಭಗವತ್ ಗೀತೆಯ ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಶಿವಾನಿ ರಾಜಾ ಹೇಳಿದ್ದಾರೆ.
ಲೇಬರ್ ಪಕ್ಷ ಇಲ್ಲಿಯ ತನಕ ಸೋಲದೇ ಇದ್ದ ಬಲಿಷ್ಟವಾಗಿ ಬೇರೂರಿದ್ದ ಲೇಸೆಸ್ಟರ್ ಪೂರ್ವ ಕ್ಷೇತ್ರವನ್ನು ಗೆದ್ದಿರುವ ಶಿವಾನಿ ರಾಜಾ ಅವರಿಗೆ ಸಿಕ್ಕಿರುವ ಒಟ್ಟು ಮತಗಳು 14,526. ಅವರ ಸಮೀಪದ ಪ್ರತಿಸ್ಪರ್ಧಿ ಲೇಬರ್ ಪಾರ್ಟಿಯ ರಾಜೇಶ್ ಅಗರ್ವಾಲ್ ಅವರಿಗೆ 10,100 ಮತಗಳು ಸಿಕ್ಕಿವೆ. ಇನ್ನು ಲಿಬರಲ್ ಡೆಮಾಕ್ರೆಟ್ ಪಕ್ಷದ ಝಾಪರ್ ಹಕ್ ಅವರಿಗೆ 6329 ಮತಗಳು ಸಿಕ್ಕಿದ್ದು ಅವರು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.


ಲೇಸಿಸ್ಟರ್ ನಗರದ ಇತಿಹಾಸದಲ್ಲಿ ಶಿವಾನಿ ರಾಜಾ ಅವರ ವಿಜಯ ಬಹುದೊಡ್ಡ ಪರಿಣಾಮವನ್ನು ಬೀರಿದ್ದು, ಈ ಭಾಗದಲ್ಲಿ ಬಹಳ ಸಮಯದಿಂದ ಸನಾತನಿಗಳ ಮತ್ತು ಮುಸಲಿಯರ ನಡುವಿನ ಸಂಘರ್ಷಕ್ಕೆ ಈ ಜಾಗ ಸಾಕ್ಷಿಯಾಗಿತ್ತು.
2022 ರಲ್ಲಿ ಎರಡೂ ಸಮುದಾಯದವರ ನಡುವಿನ ತಿಕ್ಕಾಟಕ್ಕೆ ಯುನೈಟೆಡ್ ಕಿಂಗ್ ಡಂ ವೇದಿಕೆಯಾಗಿತ್ತು. ರಾಣಿಯ ಪಾರ್ಥಿವ ಶರೀರದ ಮೆರವಣಿಗೆಯ ಸಮಯದಲ್ಲಿ ಜೈ ಶ್ರೀ ರಾಮ್ ಎನ್ನುವ ಘೋಷ ವಾಕ್ಯ ಮೊಳಗುತ್ತಿದ್ದಂತೆ ಎರಡೂ ಸಮುದಾಯದವರ ನಡುವೆ ವ್ಯಾಪಕ ಗಲಾಟೆ, ದೊಂಬಿ ನಡೆದಿದ್ದವು. ಇದೆಲ್ಲದರ ನಂತರ ಈಗ ಅದೇ ಲೇಸಿಸ್ಟರ್ ಪೂರ್ವದಲ್ಲಿ ಗುಜರಾತಿ ಮೂಲದ ಹಿಂದೂ ಉದ್ಯಮಿ ಶಿವಾನಿ ರಾಜಾ ಗೆದ್ದು ಚರಿತ್ರೆ ನಿರ್ಮಿಸಿದ್ದಾರೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search