• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಿಎಂ ಜೊತೆ ಇರುವುದರಿಂದ ಒಳಗಿನ ಸಮಸ್ಯೆ ನನಗೆ ಮಾತ್ರ ಗೊತ್ತಿದೆ – ರೆಡ್ಡಿ

Tulunadu News Posted On July 11, 2024


  • Share On Facebook
  • Tweet It

ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳನ್ನು ಸರಿಯಾಗಿ ಪೂರೈಸಲು ಏದುಸಿರು ಬಿಡುತ್ತಿರುವ ಮಧ್ಯದಲ್ಲಿಯೇ ಅದೇ ಪಕ್ಷದ ಹಿರಿಯ ಶಾಸಕರೂ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ್ ರಾಯರೆಡ್ಡಿಯವರು ನೀಡಿದ ಹೇಳಿಕೆ ರಾಜ್ಯದ ವಸ್ತುಸ್ಥಿತಿಯನ್ನು ಜನರ ಮುಂದೆ ಇಟ್ಟಿದೆ.

ರಾಜ್ಯದ ಕಾಂಗ್ರೆಸ್ ನೇತೃತ್ವದ ಸರಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗೆ 60 ರಿಂದ 65 ಸಾವಿರ ಕೋಟಿ ರೂ ಬೇಕು. ಇದರಿಂದ ಬೇರೆ ಯೋಜನೆಗಳಿಗೆ ಅನುದಾನ ಇಲ್ಲ. ಯಾವಾಗಲೂ ಸಿಎಂ ಜೊತೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಗೊತ್ತಿದೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.
ಹಣಕಾಸಿನ ಕೊರತೆಯಿಂದ ರಾಜ್ಯದ ಯಾವುದೇ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ರಾಜ್ಯದ ಯಾವುದೇ ವಿಧಾನಸಭೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಎಲ್ಲಾ ಕ್ಷೇತ್ರಗಳ ಶಾಸಕರು ಅಭಿವೃದ್ಧಿಗೆ ಅನುದಾನ ಕೇಳುತ್ತಿದ್ದಾರೆ. ಆದರೆ ಸಿಎಂ ಯಾರಿಗೂ ಅನುದಾನ ನೀಡಿಲ್ಲ ಎಂದು ಹೇಳಿದರು.

ನಮ್ಮ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ಸಿಎಂ ನನ್ನನ್ನು ತಮ್ಮ ಆರ್ಥಿಕ ಸಲಹೆಗಾರನಾಗಿ ಮಾಡಿಕೊಂಡಿದ್ದಾರೆ. ದಿನನಿತ್ಯ ಅವರ ಜೊತೆಯಲ್ಲಿ ಇರುವುದರಿಂದ ನನ್ನ ಕ್ಷೇತ್ರಕ್ಕೆ ಮಾತ್ರ ಹಣ ಬಂದಿದೆ. ರಾಜ್ಯದಲ್ಲಿ ಇದು ಒಂದೇ ಕೆಲಸ ಆಗುತ್ತಿದೆ. ಹಣಕಾಸಿನ ಆಂತರಿಕ ವಿಚಾರ, ನನಗೆ ಮಾತ್ರ ಗೊತ್ತಿದೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಬಸವರಾಜ ರಾಯರೆಡ್ಡಿ ಹೇಳಿದರು.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search