• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಫೋನ್ ಕೊಡಿಸಲಿಲ್ಲ ಎಂದು ಹುಡುಗ ಆತ್ಮಹತ್ಯೆ!

Tulunadu News Posted On July 12, 2024
0


0
Shares
  • Share On Facebook
  • Tweet It

ಆತನಿಗೆ ಇನ್ನು 18 ವಯಸ್ಸು. ನಡತೆ ಸರಿಯಿಲ್ಲ ಎಂದು ಶಾಲೆಯಿಂದ ಹೊರಗೆ ಹಾಕಲಾಗಿತ್ತು. ಆತ ಪುಂಡರ ಸಹವಾಸಕ್ಕೆ ಬಿದ್ದಿದ್ದ. ಡ್ರಗ್ಸ್ ಚಟವೂ ಹತ್ತಿಕೊಂಡಿತ್ತು. ಹೀಗಿರುವಾಗಲೇ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಹೊಸ ಐಫೋನ್ ಇವನ ಕಣ್ಣಿಗೆ ಬಿದ್ದಿದೆ. ಅದನ್ನು ಖರೀದಿಸಿಕೊಡುವಂತೆ ತಂದೆಗೆ ದಂಬಾಲು ಬಿದ್ದಿದ್ದಾನೆ. ಆ ಮೊಬೈಲ್ ಫೋನ್ ಬೆಲೆ ನೋಡಿ ತಂದೆ ಬೆಚ್ಚಿಬಿದ್ದಿದ್ದಾರೆ. ಏಕೆಂದರೆ ಫೋನ್ ಬೆಲೆ 1.5 ಲಕ್ಷ. ಇಷ್ಟು ದುಬಾರಿ ಫೋನ್ ಇಟ್ಟುಕೊಂಡು ಮಗ ಮಾಡುವಂತದ್ದು ಏನೂ ಇಲ್ಲ ಎಂದು ಅಂದುಕೊಂಡ ತಂದೆ ಫೋನ್ ತಾನೆ ಬೇಕು. ಯಾವುದಾದರೂ ಕೊಡಿಸ್ತೀನಿ ಎಂದು ಬೇರೆ ಕೈಗೆಟಕುವ ಬೆಲೆಯ ವಿವೋ ಮೊಬೈಲ್ ಫೋನ್ ಖರೀದಿಸಿ ಮಗನಿಗೆ ಉಡುಗೊರೆ ನೀಡಿದ್ದಾರೆ. ಆದರೆ ಬೇರೆ ಫೋನ್ ನೋಡಿ ಹುಡುಗ ಗಲಾಟೆ ಶುರು ಮಾಡಿದ್ದಾನೆ. ಐಫೋನ್ ತಂದುಕೊಡಲು ಹೇಳಿದ್ರೆ ಇದು ಕೊಡಿಸುತ್ತೀರಾ ಎಂದವನೇ ಕೋಣೆಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನವಿ ಮುಂಬೈಯಲ್ಲಿ ನಡೆದಿರುವ ಈ ಘಟನೆ ಇಂದಿನ ಕಾಲದ ಮಕ್ಕಳ ಮನಸ್ಥಿತಿಯನ್ನು ತೋರಿಸುತ್ತದೆ. ಸಿಮೆಂಟ್ ವ್ಯಾಪಾರವನ್ನು ಮಾಡುತ್ತಿರುವ ತಂದೆಯ ಆರ್ಥಿಕ ಸಾಮರ್ತ್ಯವನ್ನು ನೋಡದೇ ಮಕ್ಕಳು ಹೀಗೆ ಹಟ ಹಿಡಿಯುವುದು ಮತ್ತು ಅದು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸೂಸೈಡ್ ಮಾಡುವುದು ಪ್ರಜ್ಞಾವಂತ ಸಮಾಜ ಎತ್ತ ಸಾಗುತ್ತಿದೆ ಎಂದು ಯೋಚಿಸಬೇಕಾದ ಸಂಗತಿ. ಸದ್ಯ ಕಾಮೋಥೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
  • Popular Posts

    • 1
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 2
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 3
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 4
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 5
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!

  • Privacy Policy
  • Contact
© Tulunadu Infomedia.

Press enter/return to begin your search