• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ ಮದುವೆಗೆ ಎಲ್ಲರೂ ಬಂದ್ರೂ ಅಕ್ಷಯ್ ಕುಮಾರ್ ಬಂದಿಲ್ಲ, ಯಾಕೆ?

Tulunadu News Posted On July 12, 2024
0


0
Shares
  • Share On Facebook
  • Tweet It

ಬಹಳ ಅದ್ದೂರಿ ಮದುವೆಗಳಲ್ಲಿ ಒಂದಾಗಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ದೇಶ, ವಿದೇಶದಿಂದ ವಿವಿಐಪಿಗಳು ಸಾಲಾಗಿ ಬರುತ್ತಿದ್ದಾರೆ. ಆಹ್ವಾನ ಸಿಕ್ಕಿದ ಯಾರೂ ಕೂಡ ಈ ಮದುವೆಯನ್ನು ತಪ್ಪಿಸಿಕೊಳ್ಳಲು ಬಯಸುವುದಿಲ್ಲ. ಯಾಕೆಂದರೆ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಶ್ರೀಮಂತರು, ಪ್ರಭಾವಿಗಳು ಎಲ್ಲರೂ ಒಂದೆಡೆ ಸೇರುವ ಈ ವಿಶೇಷ ಮದುವೆಯಲ್ಲಿ ಭಾಗವಹಿಸುವುದು ಎಂದರೆ ಅದು ಗಣ್ಯರಿಗೆ ಒಂದು ರೀತಿಯ ಸ್ಟೇಟಸ್ ಸಿಂಬಲ್ ಇದ್ದ ಹಾಗೆ. ಭಾರತದಲ್ಲಿ ವಿಐಪಿಗಳಾಗಿರುವ ಬಹುತೇಕರಿಗೆ ಈ ಮದುವೆಗೆ ಆಮಂತ್ರಣ ಸಿಕ್ಕಿದೆ. ಅದು ಮನೋರಂಜನಾ ಕ್ಷೇತ್ರ, ಕ್ರೀಡೆ, ಸಂಗೀತ, ರಾಜಕೀಯ, ವ್ಯಾಪಾರ, ವ್ಯವಹಾರ, ಆಡಳಿತ ಹೀಗೆ ಮುಕ್ಕಾಲು ಬಾಲಿವುಡ್ ಅಂಬಾನಿ ಮನೆಯ ಅಂಗಳದಲ್ಲಿದೆ. ಇಷ್ಟಿರುವಾಗ ಹಿಂದಿ ಸಿನೆಮಾ ರಂಗದ ಕಿಲಾಡಿ ಅಕ್ಷಯ್ ಕುಮಾರ್ ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಹಾಗಾದರೆ ಅಕ್ಷಯ್ ಕುಮಾರ್ ಅವರಿಗೆ ಆಹ್ವಾನ ನೀಡಿಲ್ಲವೇ? ನೀಡಿದ್ದರೂ ಅವರಿಗೂ ಅಂಬಾನಿ ಪರಿವಾರಕ್ಕೂ ಏನಾದರೂ ಮುನಿಸಿದೆಯಾ? ಈ ಪ್ರಶ್ನೆ ನಿಮ್ಮನ್ನು ಕಾಡಬಹುದು. ಹಾಗೇನಿಲ್ಲ. ನಟ ಅಕ್ಷಯ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಬಾಲಿವುಡ್ ಫಿಟ್ ನಟನಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಅವರು ಸದ್ಯ ಕ್ವಾರಂಟೈನ್ ನಲ್ಲಿದ್ದು, ವೈದ್ಯರು ಶಿಫಾರಸ್ಸು ಮಾಡಿದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವರದಿಯ ಪ್ರಕಾರ ಅನಂತ್ ಅಂಬಾನಿ – ರಾಧಿಕಾ ಮದುವೆಯ ದಿನವೇ ಕೋವಿಡ್ ಗೆ ತುತ್ತಾಗಿರುವ ಅಕ್ಷಯ್ ಕುಮಾರ್ ಸದ್ಯ ಮದುವೆಗೆ ಗೈರಾಗಿದ್ದಾರೆ. ಎಲ್ಲಾ ಕಡೆ ಡೆಂಘೆ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರ ಕಚೇರಿ ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
  • Popular Posts

    • 1
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search