• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ ಮದುವೆಗೆ ಎಲ್ಲರೂ ಬಂದ್ರೂ ಅಕ್ಷಯ್ ಕುಮಾರ್ ಬಂದಿಲ್ಲ, ಯಾಕೆ?

Tulunadu News Posted On July 12, 2024
0


0
Shares
  • Share On Facebook
  • Tweet It

ಬಹಳ ಅದ್ದೂರಿ ಮದುವೆಗಳಲ್ಲಿ ಒಂದಾಗಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ದೇಶ, ವಿದೇಶದಿಂದ ವಿವಿಐಪಿಗಳು ಸಾಲಾಗಿ ಬರುತ್ತಿದ್ದಾರೆ. ಆಹ್ವಾನ ಸಿಕ್ಕಿದ ಯಾರೂ ಕೂಡ ಈ ಮದುವೆಯನ್ನು ತಪ್ಪಿಸಿಕೊಳ್ಳಲು ಬಯಸುವುದಿಲ್ಲ. ಯಾಕೆಂದರೆ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಶ್ರೀಮಂತರು, ಪ್ರಭಾವಿಗಳು ಎಲ್ಲರೂ ಒಂದೆಡೆ ಸೇರುವ ಈ ವಿಶೇಷ ಮದುವೆಯಲ್ಲಿ ಭಾಗವಹಿಸುವುದು ಎಂದರೆ ಅದು ಗಣ್ಯರಿಗೆ ಒಂದು ರೀತಿಯ ಸ್ಟೇಟಸ್ ಸಿಂಬಲ್ ಇದ್ದ ಹಾಗೆ. ಭಾರತದಲ್ಲಿ ವಿಐಪಿಗಳಾಗಿರುವ ಬಹುತೇಕರಿಗೆ ಈ ಮದುವೆಗೆ ಆಮಂತ್ರಣ ಸಿಕ್ಕಿದೆ. ಅದು ಮನೋರಂಜನಾ ಕ್ಷೇತ್ರ, ಕ್ರೀಡೆ, ಸಂಗೀತ, ರಾಜಕೀಯ, ವ್ಯಾಪಾರ, ವ್ಯವಹಾರ, ಆಡಳಿತ ಹೀಗೆ ಮುಕ್ಕಾಲು ಬಾಲಿವುಡ್ ಅಂಬಾನಿ ಮನೆಯ ಅಂಗಳದಲ್ಲಿದೆ. ಇಷ್ಟಿರುವಾಗ ಹಿಂದಿ ಸಿನೆಮಾ ರಂಗದ ಕಿಲಾಡಿ ಅಕ್ಷಯ್ ಕುಮಾರ್ ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಹಾಗಾದರೆ ಅಕ್ಷಯ್ ಕುಮಾರ್ ಅವರಿಗೆ ಆಹ್ವಾನ ನೀಡಿಲ್ಲವೇ? ನೀಡಿದ್ದರೂ ಅವರಿಗೂ ಅಂಬಾನಿ ಪರಿವಾರಕ್ಕೂ ಏನಾದರೂ ಮುನಿಸಿದೆಯಾ? ಈ ಪ್ರಶ್ನೆ ನಿಮ್ಮನ್ನು ಕಾಡಬಹುದು. ಹಾಗೇನಿಲ್ಲ. ನಟ ಅಕ್ಷಯ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಬಾಲಿವುಡ್ ಫಿಟ್ ನಟನಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಅವರು ಸದ್ಯ ಕ್ವಾರಂಟೈನ್ ನಲ್ಲಿದ್ದು, ವೈದ್ಯರು ಶಿಫಾರಸ್ಸು ಮಾಡಿದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವರದಿಯ ಪ್ರಕಾರ ಅನಂತ್ ಅಂಬಾನಿ – ರಾಧಿಕಾ ಮದುವೆಯ ದಿನವೇ ಕೋವಿಡ್ ಗೆ ತುತ್ತಾಗಿರುವ ಅಕ್ಷಯ್ ಕುಮಾರ್ ಸದ್ಯ ಮದುವೆಗೆ ಗೈರಾಗಿದ್ದಾರೆ. ಎಲ್ಲಾ ಕಡೆ ಡೆಂಘೆ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರ ಕಚೇರಿ ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search