• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅನಂತ್ ಅಂಬಾನಿ ಮದುವೆಗೆ ಎಲ್ಲರೂ ಬಂದ್ರೂ ಅಕ್ಷಯ್ ಕುಮಾರ್ ಬಂದಿಲ್ಲ, ಯಾಕೆ?

Tulunadu News Posted On July 12, 2024
0


0
Shares
  • Share On Facebook
  • Tweet It

ಬಹಳ ಅದ್ದೂರಿ ಮದುವೆಗಳಲ್ಲಿ ಒಂದಾಗಿರುವ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆಗೆ ದೇಶ, ವಿದೇಶದಿಂದ ವಿವಿಐಪಿಗಳು ಸಾಲಾಗಿ ಬರುತ್ತಿದ್ದಾರೆ. ಆಹ್ವಾನ ಸಿಕ್ಕಿದ ಯಾರೂ ಕೂಡ ಈ ಮದುವೆಯನ್ನು ತಪ್ಪಿಸಿಕೊಳ್ಳಲು ಬಯಸುವುದಿಲ್ಲ. ಯಾಕೆಂದರೆ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಶ್ರೀಮಂತರು, ಪ್ರಭಾವಿಗಳು ಎಲ್ಲರೂ ಒಂದೆಡೆ ಸೇರುವ ಈ ವಿಶೇಷ ಮದುವೆಯಲ್ಲಿ ಭಾಗವಹಿಸುವುದು ಎಂದರೆ ಅದು ಗಣ್ಯರಿಗೆ ಒಂದು ರೀತಿಯ ಸ್ಟೇಟಸ್ ಸಿಂಬಲ್ ಇದ್ದ ಹಾಗೆ. ಭಾರತದಲ್ಲಿ ವಿಐಪಿಗಳಾಗಿರುವ ಬಹುತೇಕರಿಗೆ ಈ ಮದುವೆಗೆ ಆಮಂತ್ರಣ ಸಿಕ್ಕಿದೆ. ಅದು ಮನೋರಂಜನಾ ಕ್ಷೇತ್ರ, ಕ್ರೀಡೆ, ಸಂಗೀತ, ರಾಜಕೀಯ, ವ್ಯಾಪಾರ, ವ್ಯವಹಾರ, ಆಡಳಿತ ಹೀಗೆ ಮುಕ್ಕಾಲು ಬಾಲಿವುಡ್ ಅಂಬಾನಿ ಮನೆಯ ಅಂಗಳದಲ್ಲಿದೆ. ಇಷ್ಟಿರುವಾಗ ಹಿಂದಿ ಸಿನೆಮಾ ರಂಗದ ಕಿಲಾಡಿ ಅಕ್ಷಯ್ ಕುಮಾರ್ ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿಲ್ಲ.

ಹಾಗಾದರೆ ಅಕ್ಷಯ್ ಕುಮಾರ್ ಅವರಿಗೆ ಆಹ್ವಾನ ನೀಡಿಲ್ಲವೇ? ನೀಡಿದ್ದರೂ ಅವರಿಗೂ ಅಂಬಾನಿ ಪರಿವಾರಕ್ಕೂ ಏನಾದರೂ ಮುನಿಸಿದೆಯಾ? ಈ ಪ್ರಶ್ನೆ ನಿಮ್ಮನ್ನು ಕಾಡಬಹುದು. ಹಾಗೇನಿಲ್ಲ. ನಟ ಅಕ್ಷಯ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಬಾಲಿವುಡ್ ಫಿಟ್ ನಟನಿಗೆ ಕೋವಿಡ್ ಪಾಸಿಟಿವ್ ಕಂಡುಬಂದಿದೆ. ಅವರು ಸದ್ಯ ಕ್ವಾರಂಟೈನ್ ನಲ್ಲಿದ್ದು, ವೈದ್ಯರು ಶಿಫಾರಸ್ಸು ಮಾಡಿದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ವರದಿಯ ಪ್ರಕಾರ ಅನಂತ್ ಅಂಬಾನಿ – ರಾಧಿಕಾ ಮದುವೆಯ ದಿನವೇ ಕೋವಿಡ್ ಗೆ ತುತ್ತಾಗಿರುವ ಅಕ್ಷಯ್ ಕುಮಾರ್ ಸದ್ಯ ಮದುವೆಗೆ ಗೈರಾಗಿದ್ದಾರೆ. ಎಲ್ಲಾ ಕಡೆ ಡೆಂಘೆ ರೋಗ ಹರಡುತ್ತಿರುವ ಈ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರ ಕಚೇರಿ ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
  • Popular Posts

    • 1
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 2
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 3
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search