• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಟ್ರಂಪ್ ಗುಂಡಿನ ದಾಳಿ ಬೆನ್ನಲ್ಲೇ ಧನ್ಯವಾದ ಎಸ್ ಪಿಜಿ ಎಂದ ನೆಟ್ಟಿಗರು!

Tulunadu News Posted On July 15, 2024
0


0
Shares
  • Share On Facebook
  • Tweet It

ಅಮೇರಿಕಾದ ಮಾಜಿ ಅಧ್ಯಕ್ಷ ಹಾಗೂ ಅಮೇರಿಕಾದ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಧಿಕೃತ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರ ಮೇಲೆ ಭೀಕರ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಮೇರಿಕಾದ ಪೆನ್ಸಿಲ್ವೇನಿಯಾ ರಾಜ್ಯದ ಬಟ್ಲರ್ ಟೌನ್ ಎಂಬಲ್ಲಿ ಅಮೇರಿಕಾದ ಕಾಲಮಾನ ಶನಿವಾರ ಸಂಜೆ ನಡೆಯುತ್ತಿದ್ದ ಸಭೆಯಲ್ಲಿ ಟ್ರಂಪ್ ಭಾಷಣ ಮಾಡುತ್ತಿದ್ದರು. ಆಗ ಅವರ ಬಲಗಿವಿಯ ಮೇಲ್ತುದಿಯನ್ನು ಸೀಳಿಕೊಂಡು ಬುಲೆಟ್ ಹೋಗಿದೆ. ತಕ್ಷಣ ಟ್ರಂಪ್ ಕೆಳಗೆ ಕುಳಿತಿದ್ದಾರೆ. ಅವರನ್ನು ಭದ್ರತಾ ಸಿಬ್ಬಂದಿಗಳು ಸುತ್ತುವರೆದಿದ್ದಾರೆ. ಹಂತಕನ ಗುಂಡಿಗೆ ಒಬ್ಬ ವ್ಯಕ್ತಿ ಬಲಿಯಾಗಿದ್ದಾನೆ. ಭದ್ರತಾ ಸಿಬ್ಬಂದಿಯಿಂದ ಹಂತಕನ ಹತ್ಯೆ ನಡೆದಿದೆ.
ಈ ಘಟನೆ ನಡೆದ ನಂತರ ಭಾರತೀಯರು ಪಂಜಾಬ್ ನಲ್ಲಿ ಆವತ್ತು ನಡೆದ ಘಟನೆಯನ್ನು ನೆನಪಿಸಿಕೊಳ್ಳುತ್ತಿದ್ದಾರೆ.


ಅದು 2022 ರ ಜನವರಿ. ಪಂಜಾಬಿನ ಭತ್ತಿಂಡಾ ಎನ್ನುವ ಪ್ರದೇಶ. ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ಸಮಾವೇಶದ ಸ್ಥಳಕ್ಕೆ ಹೋಗುವ ದಾರಿಯಲ್ಲಿ ಒಂದು ಪ್ಲೈ ಒವರ್ ಸಿಗುತ್ತದೆ. ಅದರ ಮೇಲೆ ಮೋದಿಯವರ ಕಾರು ಮುಂದಕ್ಕೆ ಹೋಗಲಾರದ ಸ್ಥಿತಿಯಲ್ಲಿ ಬ್ಲಾಕ್ ಆಗಿದೆ. ಕಾರಣ ಸ್ವಲ್ಪ ದೂರದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.


ಇದರಿಂದ ಸುಮಾರು 20 ನಿಮಿಷ ಮೋದಿಯವರ ಕಾರು ಪ್ಲೈಒವರ್ ಮೇಲೆ ಕಾಯುವಂತಾಗಿತ್ತು. ಹೇಳಿ ಕೇಳಿ, ಅದು ಪಾಕಿಸ್ತಾನದ ಗಡಿಗೆ ಹತ್ತಿರವಿರುವ ಊರು. ಒಂದು ವೇಳೆ ಸ್ವಲ್ಪ ಹೆಚ್ಚು ಕಡಿಮೆ ಆದರೂ ಆವತ್ತು ಮೋದಿಯವರ ಜೀವಕ್ಕೆ ಅಪಾಯ ಬರುವ ಸಾಧ್ಯತೆ ಇತ್ತು. ಆದರೆ ಮೋದಿಯವರ ವಿಶೇಷ ಭದ್ರತಾ ಪಡೆ (ಎಸ್ ಪಿಜಿ) ಅದನ್ನು ಬಹಳ ಸೂಕ್ಷ್ಮವಾಗಿ ನಿರ್ವಹಿಸಿದೆ. ಅದರಿಂದ ಮೋದಿಯವರು ಅಂತಹ ಸೂಕ್ಷ್ಮ ಪ್ರದೇಶದಲ್ಲಿ ಕಾಯುವಂತಾದರೂ ಏನೂ ಅವಘಡ ಸಂಭವಿಸಿರಲಿಲ್ಲ.
ಆದರೆ ಟ್ರಂಪ್ ಅವರ ಜೀವಕ್ಕೆ ಅಪಾಯ ಆಗದಿದ್ರೂ ವಿಶ್ವದ ದೊಡ್ಡಣ್ಣ ಎನಿಸಿಕೊಂಡ ಅಮೇರಿಕಾದ ಮಾಜಿ ಅಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದ ಮೇಲೆ ಅದಕ್ಕಿಂತ ಬೇರೆ ನಾಚಿಕೆ ಇದೆಯಾ? ಅಮೇರಿಕಾದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಮಾಜಿ ಅಧ್ಯಕ್ಷರು, ಅವರ ಕುಟುಂಬಗಳನ್ನು ಸಿಕ್ರೆಟ್ ಸರ್ವಿಸ್ ಎಂಬ ರಕ್ಷಣಾ ಸಂಸ್ಥೆ ಯೋಧರು ಸುತ್ತುವರಿದಿರುತ್ತಾರೆ. ಅಮೇರಿಕಾದ ಅಧ್ಯಕ್ಷರ ಮೇಲೆ ದಾಳಿ ಮಾಡುವುದು ಅಷ್ಟು ಸುಲಭದ ವಿಷಯವಲ್ಲ. ಬಹಳ ಅತ್ಯಾಧುನಿಕ ಆಯುಧಗಳು, ರಕ್ಷಣಾ ವ್ಯವಸ್ಥೆಯನ್ನು ಈ ಯೋಧರು ಹೊಂದಿರುತ್ತಾರೆ. ಇಷ್ಟಿದ್ರೂ ಈ ದಾಳಿ ನಡೆದಿದೆ ಎಂದರೆ ಕಟ್ಟಕಡೆಯಲ್ಲಿ ಉಳಿಯುವ ಪ್ರಶ್ನೆ, ಯಾರು ಗ್ರೇಟ್? ಭಾರತವೋ, ಅಮೇರಿಕಾವೋ? ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search