• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗನ ಸಿಎ ಪಾಸ್ ಫಲಿತಾಂಶಕ್ಕೆ ತಾಯಿಯ ಸ್ಪಂದನೆ

Tulunadu News Posted On July 16, 2024
0


0
Shares
  • Share On Facebook
  • Tweet It

ಹೆತ್ತವರು ತಾವು ಎಷ್ಟೇ ಕಷ್ಟಪಟ್ಟರೂ ತಮ್ಮ ಮಕ್ಕಳು ಮಾತ್ರ ಉತ್ತಮ ಜೀವನವನ್ನು ನಡೆಸಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಎಲ್ಲಾ ಕಷ್ಟಗಳನ್ನು ತಾವು ಅನುಭವಿಸುತ್ತಾ ಮಕ್ಕಳಿಗೆ ಉತ್ತಮ ಬದುಕನ್ನು ನೀಡಲು ಹಗಲಿರುಳು ಶ್ರಮಿಸುತ್ತಾರೆ. ಕೆಲವೊಮ್ಮೆ ಮಕ್ಕಳಿಗೆ ತಮ್ಮ ಅಪ್ಪ, ಅಮ್ಮ ತಮಗಾಗಿ ಅನುಭವಿಸುತ್ತಿರುವ ಕಷ್ಟ ಗೊತ್ತಾಗುವುದಿಲ್ಲ. ಇನ್ನು ಕೆಲವು ಸಂದರ್ಭಗಳಲ್ಲಿ ಪೋಷಕರು ಎಷ್ಟೇ ಸಂಕಟಪಟ್ಟು ಮಕ್ಕಳನ್ನು ಓದಿಸುತ್ತಿದ್ದರೂ ಅದರ ಮಹತ್ವ ಅರಿಯದೇ ಮಗ, ಮಗಳು ದಾರಿ ತಪ್ಪುವುದೂ ಇದೆ. ಆದರೆ ಇನ್ನು ಕೆಲವು ಕುಟುಂಬಗಳಲ್ಲಿ ಮಕ್ಕಳು ತಮ್ಮ ತಂದೆ, ತಾಯಿಯ ತ್ಯಾಗವನ್ನು ಅರಿತು ತಾವು ಉತ್ತಮವಾಗಿ ಕಲಿತು ಹೆತ್ತವರಿಗೆ ಖುಷಿ ಕೊಟ್ಟಿದ್ದೂ ಇದೆ.

ತೊಂಬರೆ ಮಾವಶಿ ಎನ್ನುವ ತಾಯಿಯೊಬ್ಬರು ಮಹಾರಾಷ್ಟ್ರದ ಥಾಣೆ ಉಪನಗರದ ಡೊಂಬಿವಿಲಿ ಪೂರ್ವ ಪ್ರದೇಶದ ಗಾಂಧೀನಗರದಲ್ಲಿ ರಸ್ತೆಬದಿಯಲ್ಲಿ ತರಕಾರಿ ವ್ಯಾಪಾರವನ್ನು ನಡೆಸುತ್ತಿದ್ದರು. ಅವರ ಮಗ ಈ ವರ್ಷ ಸಿಎ ಪರೀಕ್ಷೆಯನ್ನು ಬರೆದಿದ್ದ. ಇತ್ತೀಚೆಗೆ ಅದರ ಫಲಿತಾಂಶ ಬಂದಿದೆ. ಎಲ್ಲರಿಗೂ ಗೊತ್ತಿರುವ ಹಾಗೆ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆ ಅತ್ಯಂತ ಕಠಿಣವಾದ ಪರೀಕ್ಷೆ. ಅದನ್ನು ಒಂದೇ ಪ್ರಯತ್ನದಲ್ಲಿ ಪಾಸ್ ಮಾಡುವುದು ಕೂಡ ದೊಡ್ಡ ಸವಾಲಿನ ಕೆಲಸ. ಅದಕ್ಕಾಗಿ ಕೋಚಿಂಗ್ ಸಹಿತ ನಿರಂತರ ಅಧ್ಯಯನ ನಡೆಸಬೇಕಾಗುತ್ತದೆ.

ಹೀಗೆ ಕಠಿಣ ಅಭ್ಯಾಸ ನಡೆಸಿರುವ ಯೋಗೇಶ್ ಎನ್ನುವ ಯುವಕ ಸಿಎ ಫಲಿತಾಂಶ ನೋಡಿ ಬಂದು ತಾಯಿಯನ್ನು ಭೇಟಿಯಾದಾಗ ಆಕೆ ಪಟ್ಟಿರುವ ಸಂಭ್ರಮವನ್ನು ಈ ವಿಡಿಯೋದಲ್ಲಿ ನೋಡಬಹುದು. ಅದನ್ನು ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ರವೀಂದ್ರ ಚವಾಣ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾಯಿಯ ಆನಂದ ಭಾಷ್ಪ ಮತ್ತು ಮಗನ ಯಶಸ್ಸಿನ ಸಂತೋಷಕ್ಕೆ ಬೆಲೆಕಟ್ಟಲಾದೀತೆ!

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search