• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗನ ಸಿಎ ಪಾಸ್ ಫಲಿತಾಂಶಕ್ಕೆ ತಾಯಿಯ ಸ್ಪಂದನೆ

Tulunadu News Posted On July 16, 2024
0


0
Shares
  • Share On Facebook
  • Tweet It

ಹೆತ್ತವರು ತಾವು ಎಷ್ಟೇ ಕಷ್ಟಪಟ್ಟರೂ ತಮ್ಮ ಮಕ್ಕಳು ಮಾತ್ರ ಉತ್ತಮ ಜೀವನವನ್ನು ನಡೆಸಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಎಲ್ಲಾ ಕಷ್ಟಗಳನ್ನು ತಾವು ಅನುಭವಿಸುತ್ತಾ ಮಕ್ಕಳಿಗೆ ಉತ್ತಮ ಬದುಕನ್ನು ನೀಡಲು ಹಗಲಿರುಳು ಶ್ರಮಿಸುತ್ತಾರೆ. ಕೆಲವೊಮ್ಮೆ ಮಕ್ಕಳಿಗೆ ತಮ್ಮ ಅಪ್ಪ, ಅಮ್ಮ ತಮಗಾಗಿ ಅನುಭವಿಸುತ್ತಿರುವ ಕಷ್ಟ ಗೊತ್ತಾಗುವುದಿಲ್ಲ. ಇನ್ನು ಕೆಲವು ಸಂದರ್ಭಗಳಲ್ಲಿ ಪೋಷಕರು ಎಷ್ಟೇ ಸಂಕಟಪಟ್ಟು ಮಕ್ಕಳನ್ನು ಓದಿಸುತ್ತಿದ್ದರೂ ಅದರ ಮಹತ್ವ ಅರಿಯದೇ ಮಗ, ಮಗಳು ದಾರಿ ತಪ್ಪುವುದೂ ಇದೆ. ಆದರೆ ಇನ್ನು ಕೆಲವು ಕುಟುಂಬಗಳಲ್ಲಿ ಮಕ್ಕಳು ತಮ್ಮ ತಂದೆ, ತಾಯಿಯ ತ್ಯಾಗವನ್ನು ಅರಿತು ತಾವು ಉತ್ತಮವಾಗಿ ಕಲಿತು ಹೆತ್ತವರಿಗೆ ಖುಷಿ ಕೊಟ್ಟಿದ್ದೂ ಇದೆ.

ತೊಂಬರೆ ಮಾವಶಿ ಎನ್ನುವ ತಾಯಿಯೊಬ್ಬರು ಮಹಾರಾಷ್ಟ್ರದ ಥಾಣೆ ಉಪನಗರದ ಡೊಂಬಿವಿಲಿ ಪೂರ್ವ ಪ್ರದೇಶದ ಗಾಂಧೀನಗರದಲ್ಲಿ ರಸ್ತೆಬದಿಯಲ್ಲಿ ತರಕಾರಿ ವ್ಯಾಪಾರವನ್ನು ನಡೆಸುತ್ತಿದ್ದರು. ಅವರ ಮಗ ಈ ವರ್ಷ ಸಿಎ ಪರೀಕ್ಷೆಯನ್ನು ಬರೆದಿದ್ದ. ಇತ್ತೀಚೆಗೆ ಅದರ ಫಲಿತಾಂಶ ಬಂದಿದೆ. ಎಲ್ಲರಿಗೂ ಗೊತ್ತಿರುವ ಹಾಗೆ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆ ಅತ್ಯಂತ ಕಠಿಣವಾದ ಪರೀಕ್ಷೆ. ಅದನ್ನು ಒಂದೇ ಪ್ರಯತ್ನದಲ್ಲಿ ಪಾಸ್ ಮಾಡುವುದು ಕೂಡ ದೊಡ್ಡ ಸವಾಲಿನ ಕೆಲಸ. ಅದಕ್ಕಾಗಿ ಕೋಚಿಂಗ್ ಸಹಿತ ನಿರಂತರ ಅಧ್ಯಯನ ನಡೆಸಬೇಕಾಗುತ್ತದೆ.

ಹೀಗೆ ಕಠಿಣ ಅಭ್ಯಾಸ ನಡೆಸಿರುವ ಯೋಗೇಶ್ ಎನ್ನುವ ಯುವಕ ಸಿಎ ಫಲಿತಾಂಶ ನೋಡಿ ಬಂದು ತಾಯಿಯನ್ನು ಭೇಟಿಯಾದಾಗ ಆಕೆ ಪಟ್ಟಿರುವ ಸಂಭ್ರಮವನ್ನು ಈ ವಿಡಿಯೋದಲ್ಲಿ ನೋಡಬಹುದು. ಅದನ್ನು ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ರವೀಂದ್ರ ಚವಾಣ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾಯಿಯ ಆನಂದ ಭಾಷ್ಪ ಮತ್ತು ಮಗನ ಯಶಸ್ಸಿನ ಸಂತೋಷಕ್ಕೆ ಬೆಲೆಕಟ್ಟಲಾದೀತೆ!

0
Shares
  • Share On Facebook
  • Tweet It




Trending Now
ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
Tulunadu News September 16, 2025
ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
Tulunadu News September 16, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
  • Popular Posts

    • 1
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 2
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 3
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 4
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 5
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search