• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮಗನ ಸಿಎ ಪಾಸ್ ಫಲಿತಾಂಶಕ್ಕೆ ತಾಯಿಯ ಸ್ಪಂದನೆ

Tulunadu News Posted On July 16, 2024


  • Share On Facebook
  • Tweet It

ಹೆತ್ತವರು ತಾವು ಎಷ್ಟೇ ಕಷ್ಟಪಟ್ಟರೂ ತಮ್ಮ ಮಕ್ಕಳು ಮಾತ್ರ ಉತ್ತಮ ಜೀವನವನ್ನು ನಡೆಸಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಎಲ್ಲಾ ಕಷ್ಟಗಳನ್ನು ತಾವು ಅನುಭವಿಸುತ್ತಾ ಮಕ್ಕಳಿಗೆ ಉತ್ತಮ ಬದುಕನ್ನು ನೀಡಲು ಹಗಲಿರುಳು ಶ್ರಮಿಸುತ್ತಾರೆ. ಕೆಲವೊಮ್ಮೆ ಮಕ್ಕಳಿಗೆ ತಮ್ಮ ಅಪ್ಪ, ಅಮ್ಮ ತಮಗಾಗಿ ಅನುಭವಿಸುತ್ತಿರುವ ಕಷ್ಟ ಗೊತ್ತಾಗುವುದಿಲ್ಲ. ಇನ್ನು ಕೆಲವು ಸಂದರ್ಭಗಳಲ್ಲಿ ಪೋಷಕರು ಎಷ್ಟೇ ಸಂಕಟಪಟ್ಟು ಮಕ್ಕಳನ್ನು ಓದಿಸುತ್ತಿದ್ದರೂ ಅದರ ಮಹತ್ವ ಅರಿಯದೇ ಮಗ, ಮಗಳು ದಾರಿ ತಪ್ಪುವುದೂ ಇದೆ. ಆದರೆ ಇನ್ನು ಕೆಲವು ಕುಟುಂಬಗಳಲ್ಲಿ ಮಕ್ಕಳು ತಮ್ಮ ತಂದೆ, ತಾಯಿಯ ತ್ಯಾಗವನ್ನು ಅರಿತು ತಾವು ಉತ್ತಮವಾಗಿ ಕಲಿತು ಹೆತ್ತವರಿಗೆ ಖುಷಿ ಕೊಟ್ಟಿದ್ದೂ ಇದೆ.

ತೊಂಬರೆ ಮಾವಶಿ ಎನ್ನುವ ತಾಯಿಯೊಬ್ಬರು ಮಹಾರಾಷ್ಟ್ರದ ಥಾಣೆ ಉಪನಗರದ ಡೊಂಬಿವಿಲಿ ಪೂರ್ವ ಪ್ರದೇಶದ ಗಾಂಧೀನಗರದಲ್ಲಿ ರಸ್ತೆಬದಿಯಲ್ಲಿ ತರಕಾರಿ ವ್ಯಾಪಾರವನ್ನು ನಡೆಸುತ್ತಿದ್ದರು. ಅವರ ಮಗ ಈ ವರ್ಷ ಸಿಎ ಪರೀಕ್ಷೆಯನ್ನು ಬರೆದಿದ್ದ. ಇತ್ತೀಚೆಗೆ ಅದರ ಫಲಿತಾಂಶ ಬಂದಿದೆ. ಎಲ್ಲರಿಗೂ ಗೊತ್ತಿರುವ ಹಾಗೆ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆ ಅತ್ಯಂತ ಕಠಿಣವಾದ ಪರೀಕ್ಷೆ. ಅದನ್ನು ಒಂದೇ ಪ್ರಯತ್ನದಲ್ಲಿ ಪಾಸ್ ಮಾಡುವುದು ಕೂಡ ದೊಡ್ಡ ಸವಾಲಿನ ಕೆಲಸ. ಅದಕ್ಕಾಗಿ ಕೋಚಿಂಗ್ ಸಹಿತ ನಿರಂತರ ಅಧ್ಯಯನ ನಡೆಸಬೇಕಾಗುತ್ತದೆ.

ಹೀಗೆ ಕಠಿಣ ಅಭ್ಯಾಸ ನಡೆಸಿರುವ ಯೋಗೇಶ್ ಎನ್ನುವ ಯುವಕ ಸಿಎ ಫಲಿತಾಂಶ ನೋಡಿ ಬಂದು ತಾಯಿಯನ್ನು ಭೇಟಿಯಾದಾಗ ಆಕೆ ಪಟ್ಟಿರುವ ಸಂಭ್ರಮವನ್ನು ಈ ವಿಡಿಯೋದಲ್ಲಿ ನೋಡಬಹುದು. ಅದನ್ನು ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ರವೀಂದ್ರ ಚವಾಣ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾಯಿಯ ಆನಂದ ಭಾಷ್ಪ ಮತ್ತು ಮಗನ ಯಶಸ್ಸಿನ ಸಂತೋಷಕ್ಕೆ ಬೆಲೆಕಟ್ಟಲಾದೀತೆ!

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search