• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಗನ ಸಿಎ ಪಾಸ್ ಫಲಿತಾಂಶಕ್ಕೆ ತಾಯಿಯ ಸ್ಪಂದನೆ

Tulunadu News Posted On July 16, 2024
0


0
Shares
  • Share On Facebook
  • Tweet It

ಹೆತ್ತವರು ತಾವು ಎಷ್ಟೇ ಕಷ್ಟಪಟ್ಟರೂ ತಮ್ಮ ಮಕ್ಕಳು ಮಾತ್ರ ಉತ್ತಮ ಜೀವನವನ್ನು ನಡೆಸಬೇಕೆಂದು ಬಯಸುತ್ತಾರೆ. ಅದಕ್ಕಾಗಿ ಎಲ್ಲಾ ಕಷ್ಟಗಳನ್ನು ತಾವು ಅನುಭವಿಸುತ್ತಾ ಮಕ್ಕಳಿಗೆ ಉತ್ತಮ ಬದುಕನ್ನು ನೀಡಲು ಹಗಲಿರುಳು ಶ್ರಮಿಸುತ್ತಾರೆ. ಕೆಲವೊಮ್ಮೆ ಮಕ್ಕಳಿಗೆ ತಮ್ಮ ಅಪ್ಪ, ಅಮ್ಮ ತಮಗಾಗಿ ಅನುಭವಿಸುತ್ತಿರುವ ಕಷ್ಟ ಗೊತ್ತಾಗುವುದಿಲ್ಲ. ಇನ್ನು ಕೆಲವು ಸಂದರ್ಭಗಳಲ್ಲಿ ಪೋಷಕರು ಎಷ್ಟೇ ಸಂಕಟಪಟ್ಟು ಮಕ್ಕಳನ್ನು ಓದಿಸುತ್ತಿದ್ದರೂ ಅದರ ಮಹತ್ವ ಅರಿಯದೇ ಮಗ, ಮಗಳು ದಾರಿ ತಪ್ಪುವುದೂ ಇದೆ. ಆದರೆ ಇನ್ನು ಕೆಲವು ಕುಟುಂಬಗಳಲ್ಲಿ ಮಕ್ಕಳು ತಮ್ಮ ತಂದೆ, ತಾಯಿಯ ತ್ಯಾಗವನ್ನು ಅರಿತು ತಾವು ಉತ್ತಮವಾಗಿ ಕಲಿತು ಹೆತ್ತವರಿಗೆ ಖುಷಿ ಕೊಟ್ಟಿದ್ದೂ ಇದೆ.

ತೊಂಬರೆ ಮಾವಶಿ ಎನ್ನುವ ತಾಯಿಯೊಬ್ಬರು ಮಹಾರಾಷ್ಟ್ರದ ಥಾಣೆ ಉಪನಗರದ ಡೊಂಬಿವಿಲಿ ಪೂರ್ವ ಪ್ರದೇಶದ ಗಾಂಧೀನಗರದಲ್ಲಿ ರಸ್ತೆಬದಿಯಲ್ಲಿ ತರಕಾರಿ ವ್ಯಾಪಾರವನ್ನು ನಡೆಸುತ್ತಿದ್ದರು. ಅವರ ಮಗ ಈ ವರ್ಷ ಸಿಎ ಪರೀಕ್ಷೆಯನ್ನು ಬರೆದಿದ್ದ. ಇತ್ತೀಚೆಗೆ ಅದರ ಫಲಿತಾಂಶ ಬಂದಿದೆ. ಎಲ್ಲರಿಗೂ ಗೊತ್ತಿರುವ ಹಾಗೆ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆ ಅತ್ಯಂತ ಕಠಿಣವಾದ ಪರೀಕ್ಷೆ. ಅದನ್ನು ಒಂದೇ ಪ್ರಯತ್ನದಲ್ಲಿ ಪಾಸ್ ಮಾಡುವುದು ಕೂಡ ದೊಡ್ಡ ಸವಾಲಿನ ಕೆಲಸ. ಅದಕ್ಕಾಗಿ ಕೋಚಿಂಗ್ ಸಹಿತ ನಿರಂತರ ಅಧ್ಯಯನ ನಡೆಸಬೇಕಾಗುತ್ತದೆ.

ಹೀಗೆ ಕಠಿಣ ಅಭ್ಯಾಸ ನಡೆಸಿರುವ ಯೋಗೇಶ್ ಎನ್ನುವ ಯುವಕ ಸಿಎ ಫಲಿತಾಂಶ ನೋಡಿ ಬಂದು ತಾಯಿಯನ್ನು ಭೇಟಿಯಾದಾಗ ಆಕೆ ಪಟ್ಟಿರುವ ಸಂಭ್ರಮವನ್ನು ಈ ವಿಡಿಯೋದಲ್ಲಿ ನೋಡಬಹುದು. ಅದನ್ನು ಮಹಾರಾಷ್ಟ್ರದ ಲೋಕೋಪಯೋಗಿ ಸಚಿವ ರವೀಂದ್ರ ಚವಾಣ್ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾಯಿಯ ಆನಂದ ಭಾಷ್ಪ ಮತ್ತು ಮಗನ ಯಶಸ್ಸಿನ ಸಂತೋಷಕ್ಕೆ ಬೆಲೆಕಟ್ಟಲಾದೀತೆ!

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search