• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಉತ್ತರಾಖಂಡದ ರೈಲ್ವೆ ಬೋರ್ಡ್ ಗಳಲ್ಲಿ ಸಂಸ್ಕೃತ ಭಾಷೆಯಲ್ಲಿಯೂ ಹೆಸರು ಇರಲಿ!

Tulunadu News Posted On July 16, 2024
0


0
Shares
  • Share On Facebook
  • Tweet It

ಸಂಸ್ಕೃತ ಭಾಷೆ ಉತ್ತರಖಂಡ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿದೆ. ಹಾಗಿದ್ದ ಮೇಲೆ ಅದಕ್ಕೊಂದು ಗೌರವ, ಸ್ಥಾನಮಾನ ಕೊಡಬೇಕು ತಾನೆ. ಭಾರತೀಯ ಜನತಾ ಪಾರ್ಟಿ 2022 ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಹೊಸ ಮನ್ವಂತರ ಆರಂಭವಾಗಬಹುದು ಎಂಬ ಅಪೇಕ್ಷೆ ಎಲ್ಲರಲ್ಲಿತ್ತು. ಹಾಗೆ ಈ ರೈಲ್ವೆ ನಿಲ್ದಾಣಗಳಲ್ಲಿ ಊರಿನ ಹೆಸರನ್ನು ತೋರಿಸುವ ಸೈನ್ ಬೋರ್ಡ್ ಗಳಿರುತ್ತವಲ್ಲ, ಅಂತಹ ಬೋರ್ಡ್ ಗಳಲ್ಲಿ ಮೂರು ಭಾಷೆಗಳಲ್ಲಿ ಊರಿನ ಹೆಸರನ್ನು ನಮೂದಿಸಲಾಗಿತ್ತು. ಅದರಲ್ಲಿ ಒಂದು ಹಿಂದಿ, ಇನ್ನೊಂದು ಇಂಗ್ಲೀಷ್, ಮತ್ತೊಂದು ಉರ್ದು.

2020 ಫೆಬ್ರವರಿಯಲ್ಲಿ ಡೆಹ್ರಾದೂನ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣವನ್ನು ಅಭಿವೃದ್ಧಿಗೊಳಿಸುವಾಗ ಅದರ ಗುತ್ತಿಗೆ ವಹಿಸಿಕೊಂಡ ಸಂಸ್ಥೆಯಿಂದ ಉರ್ದು ಭಾಷೆಯ ಮೇಲೆ ಸಂಸ್ಕೃತದಲ್ಲಿ ಊರಿನ ಹೆಸರನ್ನು ಬರೆದ ಸ್ಟೀಕರ್ ಅನ್ನು ಪೇಸ್ಟ್ ಮಾಡಲಾಗಿತ್ತು. ಇದರಿಂದ ಸಂಸ್ಕೃತ ಭಾಷೆಗೆ ರಾಜ್ಯದಲ್ಲಿ ವಿಶೇಷ ಸ್ಥಾನಮಾನ ಸಿಕ್ಕಿದಂತೆ ಆಗಿತ್ತು. ಸನಾತನಿಗಳೇ ಹೆಚ್ಚಿನ ನೆಲೆಸಿರುವ, ಸಾಧು ಸಂತರ ನಾಡೆಂದು ಖ್ಯಾತವಾಗಿರುವ ಉತ್ತರಾಖಂಡದಲ್ಲಿ ಸಂಸ್ಕೃತ ಭಾಷೆಯಲ್ಲಿ ಬೋರ್ಡ್ ಇರುವುದು ನಿಜಕ್ಕೂ ಮಾದರಿಯಾಗಿತ್ತು. ಆದರೆ ಈ ಖುಷಿ ತುಂಬಾ ದಿನ ಇರಲಿಲ್ಲ. ಅದಕ್ಕೆ ವಿವಾದ ಅಂಟಿಕೊಂಡಿತ್ತು.

ಬಳಿಕ ತಕ್ಷಣ ಮತ್ತೆ ಸಂಸ್ಕೃತದ ಮೇಲೆ ಉರ್ದು ಭಾಷೆಯಲ್ಲಿ ಬರೆದ ಊರಿನ ಹೆಸರಿನ ಸ್ಟೀಕರ್ ಕಾಣಿಸಿಕೊಂಡಿತ್ತು. ಇದರಿಂದ ಅಲ್ಲಿನ ಸ್ಥಳೀಯ ಮಠಗಳ ಸಾಧು, ಸಂತರಿಗೆ ಬೇಸರವಾಗಿತ್ತು. ಯಾರನ್ನು ಓಲೈಸಲು ಇಂತಹ ಕೆಲಸ ಎಂದು ಪ್ರಶ್ನಿಸಿದ್ದಾರೆ. ಈ ಘಟನೆಗಳು ನಡೆದು ಈಗಾಗಲೇ ನಾಲ್ಕು ವರ್ಷಗಳು ಕಳೆದಿವೆ. ಈಗಲೂ ಆ ಬೋರ್ಡ್ ಗಳಲ್ಲಿ ಹಿಂದಿ, ಇಂಗ್ಲೀಷ್ ಮತ್ತು ಉರ್ದು ಭಾಷೆಯನ್ನು ಮಾತ್ರ ಕಾಣಬಹುದಾಗಿದೆ.

0
Shares
  • Share On Facebook
  • Tweet It


- Advertisement -


Trending Now
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
Tulunadu News June 20, 2025
ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
Tulunadu News June 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!
    • ಲಂಡನ್ನಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೊನೆಯ ಕ್ಷಣದಲ್ಲಿ ಪ್ರಯಾಣ ರದ್ದು!
    • ಗಿರೀಶ್ ಭಾರದ್ವಾಜ್ ಮನವಿಗೆ ಸ್ಪಂದನೆ: ಹಿಂದೂ ಮುಖಂಡರ ರಾತ್ರಿ ಮನೆ ಭೇಟಿಯ ಬಗ್ಗೆ ವರದಿ ಕೇಳಿದ ಪೊಲೀಸ್ ದೂರು ಪ್ರಾಧಿಕಾರ!
    • ಹಿಂದೂಗಳು 3 ಮಕ್ಕಳನ್ನು ಹೆರಲು ಕೊಪ್ಪಳದಲ್ಲಿ ತೊಗಾಡಿಯಾ ಕರೆ!
    • ಬೈಕ್ ಟ್ಯಾಕ್ಸಿ ಬ್ಯಾನ್ ನಿಂದ ಬೆಂಗಳೂರಿನ 1 ಲಕ್ಷ ಯುವಕರ ಉದ್ಯೋಗಕ್ಕೆ ಕುತ್ತು!
    • ಯುಪಿಐನಲ್ಲಿ ಇನ್ನು ಹಣ ವರ್ಗಾವಣೆಗೆ 15 ಸೆಕೆಂಡ್ ಸಾಕು!
  • Popular Posts

    • 1
      ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಅರ್ಜಿ: ಅರುಣ್ ಶ್ಯಾಮ್ ವಾದ...
    • 2
      ಮಂಗಳೂರಿನಲ್ಲಿ ಮಗುವಿನ ಅಪಹರಣ, ಮಾರಾಟಕ್ಕೆ ಯತ್ನ - ಒಬ್ಬನ ಬಂಧನ!
    • 3
      ಫಾಸ್ಟ್ ಟ್ಯಾಗ್ ಇನ್ನು ವರ್ಷದ ಪಾಸ್ ನಲ್ಲಿ ಲಭ್ಯ: ಎಷ್ಟು ಕೊಟ್ಟರೆ ಸಾಕು ಗೊತ್ತಾ?
    • 4
      ಭೀಕರ ರಸ್ತೆ ಅಪಘಾತ- ದಕ ಜಿಲ್ಲಾ NSUI ಉಪಾಧ್ಯಕ್ಷ ಸೇರಿ ಇಬ್ಬರು ಯುವಕರು ಸಾವು!
    • 5
      ವಿಮಾನ ದುರಂತ ಸ್ಥಳದಲ್ಲಿ ಸಿಕ್ಕಿವೆ ಸಾಕಷ್ಟು ಚಿನ್ನ, ಹಣ, ಭಗವದ್ಗೀತೆ!

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search