• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಂಬಾನಿ ಮಗನ ಮದುವೆಯಲ್ಲಿ ಸುಧಾ ಮೂರ್ತಿ ಧರಿಸಿದ್ದ ಆಭರಣ ಯಾವುದು?

Tulunadu News Posted On July 17, 2024
0


0
Shares
  • Share On Facebook
  • Tweet It

ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ದೇಶ, ವಿದೇಶದ ಗಣ್ಯರು ಭಾಗವಹಿಸಿದ್ದರು. ಬಾಲಿವುಡ್ ತಾರೆಯರು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು, ರಾಜ್ಯ, ದೇಶ, ವಿದೇಶದ ರಾಜಕೀಯ ಮುಖಂಡರು, ಜಾಗತಿಕ ಉದ್ಯಮಿಗಳು ಹೀಗೆ ಗಣ್ಯಾತಿಗಣ್ಯರು ಅದರಲ್ಲಿ ಉಪಸ್ಥಿತಿಯನ್ನು ತೋರಿಸಿದ್ದರು. ಅಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದೆಂದರೆ ಅನೇಕರಿಗೆ ದೊಡ್ಡ ಹೆಮ್ಮೆಯ ವಿಷಯ. ಒಮ್ಮೆ ಆಹ್ವಾನ ಸಿಕ್ಕಿದರೆ ಯಾರೂ ಅದನ್ನು ಮರೆಯದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಇಂತಹ ಅದ್ದೂರಿ ಮದುವೆಗೆ ಇನ್ಫೊಸಿಸ್ ಫೌಂಡೆಶನ್ ಮುಖ್ಯಸ್ಥೆ, ರಾಜ್ಯಸಭಾ ಸಂಸದೆ ಸುಧಾಮೂರ್ತಿಯವರಿಗೂ ಆಹ್ವಾನ ಇತ್ತು.

ಸಾಮಾನ್ಯವಾಗಿ ಸಿಂಪಲ್ ಉಡುಗೆ, ತೊಡುಗೆಯಲ್ಲಿ ಕಾಣಿಸಿಕೊಳ್ಳುವ ಸುಧಾ ಮೂರ್ತಿಯವರು ಅಂತಹ ವೈಭವೋಪೇತ ಕಾರ್ಯಕ್ರಮದಲ್ಲಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಹಲವರಲ್ಲಿ ಇತ್ತು. ಯಾಕೆಂದರೆ ಅಂಬಾನಿ ಮಗನ ಮದುವೆಗೆ ಬಂದ ಗಣ್ಯರು ಯಾವ ರೀತಿಯಲ್ಲಿ ಆಡಂಬರವನ್ನು ಮೈಮೇಲೆ ಹೇರಿಕೊಳ್ಳಬೇಕು ಎಂದು ವಾರಗಟ್ಟಲೆ ಪ್ಲಾನ್ ಮಾಡಿ ಅದನ್ನು ಧರಿಸಿ ಕ್ಯಾಮೆರಾಗಳ ಮುಂದೆ ಮಿಂಚುತ್ತಿದ್ದರೆ, ಸುಧಾಮೂರ್ತಿಯವರು ಮತ್ತೊಮ್ಮೆ ಸರಳತೆಯನ್ನೇ ಮೆರೆದಿದ್ದಾರೆ.

ಆವತ್ತು ಅವರ ಕೊರಳಲ್ಲಿ ಇದ್ದದ್ದು ಕೇವಲ ಮಂಗಳಸೂತ್ರ ಮಾತ್ರ. ಈ ಮೂಲಕ ತುಂಬಿದ ಕೊಡ ತುಳುಕುವುದಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಒಡತಿಯಾದರೂ ಸಿಂಪಲ್ ಆಗಿ ಅಂಬಾನಿ ಮನೆಯ ಮದುವೆಯಲ್ಲಿ ಭಾಗಿಯಾಗಿರುವುದು ಆಕರ್ಷಣೆಗೆ ಕಾರಣವಾಗಿದೆ. ತೆಲುಗು ನಟ ಮಹೇಶ್ ಬಾಬು ಪತ್ನಿ, ನಟಿ ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಸರಳತೆಯೇ ಭೂಷಣ ಎನ್ನುವಂತೆ ಕಾಣಿಸಿಕೊಂಡಿರುವ ಸುಧಾ ಮೂರ್ತಿಯವರ ನಗೆ ಖುಷಿ ನೀಡುತ್ತದೆ.

ಅದ್ದೂರಿ, ಆಡಂಬರ, ಶ್ರೀಮಂತಿಕೆಯ ನಡುವೆ ಸುಧಾ ಮೂರ್ತಿಯವರ ಸರಳತೆ ಮೈಗೂಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಬಿಲೇನಿಯರ್ ಆಗಿದ್ದರೂ ಮಂಗಳ ಸೂತ್ರದ ಜೊತೆಗೆ ಯಾವುದೇ ಬೆಲೆ ಬಾಳುವ ಒಡವೆಗಳನ್ನು ಧರಿಸಿಲ್ಲ ಎನ್ನುವುದೇ ವಿಶೇಷ.

0
Shares
  • Share On Facebook
  • Tweet It




Trending Now
20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
Tulunadu News July 5, 2025
20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
Tulunadu News July 5, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
  • Popular Posts

    • 1
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 2
      20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • 3
      ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • 4
      ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • 5
      ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು

  • Privacy Policy
  • Contact
© Tulunadu Infomedia.

Press enter/return to begin your search