• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಂಬಾನಿ ಮಗನ ಮದುವೆಯಲ್ಲಿ ಸುಧಾ ಮೂರ್ತಿ ಧರಿಸಿದ್ದ ಆಭರಣ ಯಾವುದು?

Tulunadu News Posted On July 17, 2024


  • Share On Facebook
  • Tweet It

ಮುಖೇಶ್ ಅಂಬಾನಿ ಮಗ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ಮಹೋತ್ಸವದಲ್ಲಿ ದೇಶ, ವಿದೇಶದ ಗಣ್ಯರು ಭಾಗವಹಿಸಿದ್ದರು. ಬಾಲಿವುಡ್ ತಾರೆಯರು, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು, ರಾಜ್ಯ, ದೇಶ, ವಿದೇಶದ ರಾಜಕೀಯ ಮುಖಂಡರು, ಜಾಗತಿಕ ಉದ್ಯಮಿಗಳು ಹೀಗೆ ಗಣ್ಯಾತಿಗಣ್ಯರು ಅದರಲ್ಲಿ ಉಪಸ್ಥಿತಿಯನ್ನು ತೋರಿಸಿದ್ದರು. ಅಂತಹ ಕಾರ್ಯಕ್ರಮದಲ್ಲಿ ಭಾಗವಹಿಸುವುದೆಂದರೆ ಅನೇಕರಿಗೆ ದೊಡ್ಡ ಹೆಮ್ಮೆಯ ವಿಷಯ. ಒಮ್ಮೆ ಆಹ್ವಾನ ಸಿಕ್ಕಿದರೆ ಯಾರೂ ಅದನ್ನು ಮರೆಯದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಇಂತಹ ಅದ್ದೂರಿ ಮದುವೆಗೆ ಇನ್ಫೊಸಿಸ್ ಫೌಂಡೆಶನ್ ಮುಖ್ಯಸ್ಥೆ, ರಾಜ್ಯಸಭಾ ಸಂಸದೆ ಸುಧಾಮೂರ್ತಿಯವರಿಗೂ ಆಹ್ವಾನ ಇತ್ತು.

ಸಾಮಾನ್ಯವಾಗಿ ಸಿಂಪಲ್ ಉಡುಗೆ, ತೊಡುಗೆಯಲ್ಲಿ ಕಾಣಿಸಿಕೊಳ್ಳುವ ಸುಧಾ ಮೂರ್ತಿಯವರು ಅಂತಹ ವೈಭವೋಪೇತ ಕಾರ್ಯಕ್ರಮದಲ್ಲಿ ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬ ಕುತೂಹಲ ಹಲವರಲ್ಲಿ ಇತ್ತು. ಯಾಕೆಂದರೆ ಅಂಬಾನಿ ಮಗನ ಮದುವೆಗೆ ಬಂದ ಗಣ್ಯರು ಯಾವ ರೀತಿಯಲ್ಲಿ ಆಡಂಬರವನ್ನು ಮೈಮೇಲೆ ಹೇರಿಕೊಳ್ಳಬೇಕು ಎಂದು ವಾರಗಟ್ಟಲೆ ಪ್ಲಾನ್ ಮಾಡಿ ಅದನ್ನು ಧರಿಸಿ ಕ್ಯಾಮೆರಾಗಳ ಮುಂದೆ ಮಿಂಚುತ್ತಿದ್ದರೆ, ಸುಧಾಮೂರ್ತಿಯವರು ಮತ್ತೊಮ್ಮೆ ಸರಳತೆಯನ್ನೇ ಮೆರೆದಿದ್ದಾರೆ.

ಆವತ್ತು ಅವರ ಕೊರಳಲ್ಲಿ ಇದ್ದದ್ದು ಕೇವಲ ಮಂಗಳಸೂತ್ರ ಮಾತ್ರ. ಈ ಮೂಲಕ ತುಂಬಿದ ಕೊಡ ತುಳುಕುವುದಿಲ್ಲ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಒಡತಿಯಾದರೂ ಸಿಂಪಲ್ ಆಗಿ ಅಂಬಾನಿ ಮನೆಯ ಮದುವೆಯಲ್ಲಿ ಭಾಗಿಯಾಗಿರುವುದು ಆಕರ್ಷಣೆಗೆ ಕಾರಣವಾಗಿದೆ. ತೆಲುಗು ನಟ ಮಹೇಶ್ ಬಾಬು ಪತ್ನಿ, ನಟಿ ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ಸರಳತೆಯೇ ಭೂಷಣ ಎನ್ನುವಂತೆ ಕಾಣಿಸಿಕೊಂಡಿರುವ ಸುಧಾ ಮೂರ್ತಿಯವರ ನಗೆ ಖುಷಿ ನೀಡುತ್ತದೆ.

ಅದ್ದೂರಿ, ಆಡಂಬರ, ಶ್ರೀಮಂತಿಕೆಯ ನಡುವೆ ಸುಧಾ ಮೂರ್ತಿಯವರ ಸರಳತೆ ಮೈಗೂಡಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಬಿಲೇನಿಯರ್ ಆಗಿದ್ದರೂ ಮಂಗಳ ಸೂತ್ರದ ಜೊತೆಗೆ ಯಾವುದೇ ಬೆಲೆ ಬಾಳುವ ಒಡವೆಗಳನ್ನು ಧರಿಸಿಲ್ಲ ಎನ್ನುವುದೇ ವಿಶೇಷ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search