• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಪು ಮಾರಿಗುಡಿಗೆ ಭೇಟಿ ನೀಡಿದ ಬಳಿಕ ಖುಲಾಯಿಸಿದ ಅದೃಷ್ಟ!

Tulunadu News Posted On July 18, 2024
0


0
Shares
  • Share On Facebook
  • Tweet It

ಸೂರ್ಯಕುಮಾರ್ ಯಾದವ್ ಅವರು ಟಿಟ್ವೆಂಟಿ ವಿಶ್ವಕಪ್ ಗೆದ್ದ ಬಳಿಕ ಇತ್ತೀಚೆಗೆ ಉಡುಪಿ ಜಿಲ್ಲೆಯ ಕಾಪು ಮಾರಿಗುಡಿ ದೇವಳಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಹೋಗಿದ್ದರು. ಅಲ್ಲಿ ಅವರೊಂದಿಗೆ ಅವರ ಪತ್ನಿ ದೀವಿಶಾ ಶೆಟ್ಟಿ ಕೂಡ ಉಪಸ್ಥಿತರಿದ್ದರು. ಅಲ್ಲಿ ದೇವರ ಆರ್ಶೀವಾದವನ್ನು ಪಡೆದುಕೊಂಡು ತೆರಳಿದ ಬಳಿಕ ಸೂರ್ಯ ಕುಮಾರ್ ಯಾದವ್ ಅವರ ಜೀವನದಲ್ಲಿ ಬಹುದೊಡ್ಡ ತಿರುವು ಸಿಕ್ಕಿದೆ.

ಭಾರತ ಟಿ20 ತಂಡದ ನಾಯಕನಾಗಿ ಸೂರ್ಯ ಕುಮಾರ್ ಯಾದವ್ ಆಯ್ಕೆಯಾಗಿದ್ದಾರೆ ಎನ್ನುವ ಮಾಹಿತಿ ಬಂದಿದೆ. ಈ ಹಿಂದೆ ಹಾರ್ದಿಕ್ ಪಾಂಡ್ಯ ಟಿ20 ತಂಡದ ಕ್ಯಾಪ್ಟನ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಸದ್ಯ ಟಿ20 ತಜ್ಞ ಸೂರ್ಯ ಕುಮಾರ್ ಯಾದವ್ ಅವರಿಗೆ ನಾಯಕನ ಪಟ್ಟ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎನ್ನಲಾಗಿದೆ. ಅದರಂತೆ ಶ್ರೀಲಂಕಾ ವಿರುದ್ಧದ ಸರಣಿಗೆ ಸೂರ್ಯ ತಂಡದ ಕಪ್ತಾನ ಆಗಿ ಮಿಂಚಲಿದ್ದಾರೆ.


ಈ ಮೊದಲು ಸೂರ್ಯ ಕುಮಾರ್ ಯಾದವ್ ಭಾರತ ತಂಡವನ್ನು ಹಂಗಾಮಿ ನಾಯಕನ ರೀತಿಯಲ್ಲಿ ಏಳು ಟಿ20 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಪ್ರಮುಖ ಆಟಗಾರರ ಅನುಪಸ್ಥಿತಿಯ ನಡುವೆ ಟೀಮ್ ಇಂಡಿಯಾದ ಸಾರಥ್ಯ ವಹಿಸಿದ್ದ ಸೂರ್ಯ ಐದು ಪಂದ್ಯಗಳಲ್ಲಿ ಭಾರತ ತಂಡಕ್ಕೆ ಜಯ ತಂದುಕೊಟ್ಟಿದ್ದಾರೆ. ಇದೀಗ ಜುಲೈ 27 ರಿಂದ ಶುರುವಾಗಲಿರುವ ಟಿ20 ಸರಣಿ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಕಣಕ್ಕಿಳಿಯಲು ಅಣಿಯಾಗಿದ್ದಾರೆ.

ಟಿ20 ವಿಶ್ವಕಪ್ ಮುಕ್ತಾಯದ ಕೂಡಲೇ ಟಿ20 ಅಂತರಾಷ್ಟ್ರೀಯ ಕ್ರಿಕೆಟಿಗೆ ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಹೀಗಾಗಿ ಟಿ20 ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆಯಲ್ಲಿದ್ದ ಬಿಸಿಸಿಐ ಕೊನೆಗೂ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಿದೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search