• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಕ್ಷಿಣ ಕನ್ನಡದಲ್ಲಿ ವಿವಾದ ಸೃಷ್ಟಿಸಲಿದೆಯಾ ಸರಕಾರದ ಹೊಸ ಸುತ್ತೋಲೆ!

Tulunadu News Posted On July 18, 2024
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶೋತ್ಸವ, ಕೃಷ್ಣಾಷ್ಟಮಿಗೆ ವಿಶೇಷವಾದ ಮಹತ್ವವಿದೆ. ಅನೇಕ ಸಂಘ, ಸಂಸ್ಥೆಗಳು, ಯುವಕ ಮಂಡಲಗಳು ಸಂಭ್ರಮ, ಸಡಗರದಿಂದ ಇದನ್ನು ಎಷ್ಟೋ ವರ್ಷಗಳಿಂದ ಆಚರಿಸಿಕೊಂಡು ಬರುತ್ತಿವೆ. ಕೆಲವು ಕಡೆ ಒಂದು ದಿನ ಕಾರ್ಯಕ್ರಮ ಇದ್ದರೆ, ಕೆಲವು ಏಳು ದಿನವೂ ಇಟ್ಟು ಧಾರ್ಮಿಕ ವಿಧಿವಿಧಾನಗಳನ್ನು ಅನುಸರಿಸಿ ಸಂಭ್ರಮಿಸಲಾಗುತ್ತದೆ. ಅನೇಕ ಕಡೆ ಸಂಘಟನೆಗಳಿಗೆ ಈ ಗಣೇಶೋತ್ಸವ, ಅಷ್ಟಮಿ ಆಚರಣೆಗೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸ್ಥಳಾವಕಾಶದ ಅಡಚಣೆ ಇರುವುದರಿಂದ ಆಗ ಸಮೀಪದ ಶಾಲೆಗಳಲ್ಲಿ ಇದನ್ನು ನಡೆಸಿಕೊಂಡು ಬರಲಾಗುತ್ತದೆ.
ಆದರೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಶಾಲಾ ಮೈದಾನ, ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ- ಉದ್ದೇಶಗಳಿಗೆ ಬಳಸಬಾರದು ಎಂದು ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಅನುಮತಿಗಾಗಿ ಶಿಕ್ಷಣ ಇಲಾಖೆಗೆ ಪ್ರಸ್ತಾಪನೆಗಳನ್ನು ಸಲ್ಲಿಸಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಇದು ಸಹಜವಾಗಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಡಿಡಿಪಿಐ ಸುತ್ತೋಲೆಯಲ್ಲಿ ಏನಿದೆ?

ಶೈಕ್ಷಣಿಕವಾದ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ ಎಂದು ದಕ್ಷಿಣ ಕನ್ನಡ ಡಿಡಿಪಿಐ ಹೇಳಿರುವುದರಿಂದ ಶಾಲಾ ಮುಖ್ಯಸ್ಥರು ಅನುಮತಿ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ಗ್ರಾಮದ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ನಡೆಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ಎಲ್ಲಿ ನಡೆಸುವುದು ಎನ್ನುವ ಪ್ರಶ್ನೆ ಮೂಡಿದೆ.
ಈ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡದ ಶಾಸಕರು ಧ್ವನಿ ಎತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವನ್ನು ಈಗ ಏಕಾಏಕಿ ಇಂತಹ ನಿಯಮಗಳ ಮೂಲಕ ಮುರಿಯಲು ಸರಕಾರ ಮುಂದಾಗಿರುವುದು ಸರಿಯಲ್ಲ ಎಂದು ಹಿಂದೂ ಮುಖಂಡರು ಹೇಳಿದ್ದಾರೆ.
ಸದ್ಯ ಸುತ್ತೋಲೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇದು ರಾಜಕೀಯ ಜಟಾಪಟಿಗೆ ಕಾರಣವಾಗುವ ಸಾಧ್ಯತೆ ಇದೆ.

0
Shares
  • Share On Facebook
  • Tweet It




Trending Now
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
  • Popular Posts

    • 1
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • 2
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 3
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 4
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search