• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಕ್ಷಿಣ ಕನ್ನಡದಲ್ಲಿ ವಿವಾದ ಸೃಷ್ಟಿಸಲಿದೆಯಾ ಸರಕಾರದ ಹೊಸ ಸುತ್ತೋಲೆ!

Tulunadu News Posted On July 18, 2024
0


0
Shares
  • Share On Facebook
  • Tweet It

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶೋತ್ಸವ, ಕೃಷ್ಣಾಷ್ಟಮಿಗೆ ವಿಶೇಷವಾದ ಮಹತ್ವವಿದೆ. ಅನೇಕ ಸಂಘ, ಸಂಸ್ಥೆಗಳು, ಯುವಕ ಮಂಡಲಗಳು ಸಂಭ್ರಮ, ಸಡಗರದಿಂದ ಇದನ್ನು ಎಷ್ಟೋ ವರ್ಷಗಳಿಂದ ಆಚರಿಸಿಕೊಂಡು ಬರುತ್ತಿವೆ. ಕೆಲವು ಕಡೆ ಒಂದು ದಿನ ಕಾರ್ಯಕ್ರಮ ಇದ್ದರೆ, ಕೆಲವು ಏಳು ದಿನವೂ ಇಟ್ಟು ಧಾರ್ಮಿಕ ವಿಧಿವಿಧಾನಗಳನ್ನು ಅನುಸರಿಸಿ ಸಂಭ್ರಮಿಸಲಾಗುತ್ತದೆ. ಅನೇಕ ಕಡೆ ಸಂಘಟನೆಗಳಿಗೆ ಈ ಗಣೇಶೋತ್ಸವ, ಅಷ್ಟಮಿ ಆಚರಣೆಗೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸ್ಥಳಾವಕಾಶದ ಅಡಚಣೆ ಇರುವುದರಿಂದ ಆಗ ಸಮೀಪದ ಶಾಲೆಗಳಲ್ಲಿ ಇದನ್ನು ನಡೆಸಿಕೊಂಡು ಬರಲಾಗುತ್ತದೆ.
ಆದರೆ ಈ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಶಾಲಾ ಮೈದಾನ, ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ- ಉದ್ದೇಶಗಳಿಗೆ ಬಳಸಬಾರದು ಎಂದು ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಅನುಮತಿಗಾಗಿ ಶಿಕ್ಷಣ ಇಲಾಖೆಗೆ ಪ್ರಸ್ತಾಪನೆಗಳನ್ನು ಸಲ್ಲಿಸಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ. ಇದು ಸಹಜವಾಗಿ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಡಿಡಿಪಿಐ ಸುತ್ತೋಲೆಯಲ್ಲಿ ಏನಿದೆ?

ಶೈಕ್ಷಣಿಕವಾದ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಹೊಣೆಗಾರರಾಗುತ್ತಾರೆ ಎಂದು ದಕ್ಷಿಣ ಕನ್ನಡ ಡಿಡಿಪಿಐ ಹೇಳಿರುವುದರಿಂದ ಶಾಲಾ ಮುಖ್ಯಸ್ಥರು ಅನುಮತಿ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ಗ್ರಾಮದ ಸಂಘಟನೆಗಳು ಸ್ವಯಂ ಪ್ರೇರಿತರಾಗಿ ನಡೆಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವ ಆಚರಣೆಯನ್ನು ಎಲ್ಲಿ ನಡೆಸುವುದು ಎನ್ನುವ ಪ್ರಶ್ನೆ ಮೂಡಿದೆ.
ಈ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡದ ಶಾಸಕರು ಧ್ವನಿ ಎತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯವನ್ನು ಈಗ ಏಕಾಏಕಿ ಇಂತಹ ನಿಯಮಗಳ ಮೂಲಕ ಮುರಿಯಲು ಸರಕಾರ ಮುಂದಾಗಿರುವುದು ಸರಿಯಲ್ಲ ಎಂದು ಹಿಂದೂ ಮುಖಂಡರು ಹೇಳಿದ್ದಾರೆ.
ಸದ್ಯ ಸುತ್ತೋಲೆಗೆ ಭಾರಿ ವಿರೋಧ ವ್ಯಕ್ತವಾಗುತ್ತಿದೆ. ಇದು ರಾಜಕೀಯ ಜಟಾಪಟಿಗೆ ಕಾರಣವಾಗುವ ಸಾಧ್ಯತೆ ಇದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!

  • Privacy Policy
  • Contact
© Tulunadu Infomedia.

Press enter/return to begin your search