• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Tulunadu News Posted On July 20, 2024
0


0
Shares
  • Share On Facebook
  • Tweet It

ಹಿಂದೂಗಳ ವಿರುದ್ಧ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ನಡೆಸಿದ ಭಾರತೀಯ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿಯವರು ರಾಹುಲ್ ಗಾಂಧಿಯವರು ಹಿಂದೂಗಳ ಬಗ್ಗೆ ಅವಹೇಳನಕಾರಿ ರೀತಿ ಮಾತನಾಡಿರುವುದನ್ನು ಪ್ರಖರ ಶಬ್ದಗಳ ಮೂಲಕ ಖಂಡಿಸಿದ್ದರು.

ಡಾ. ಭರತ್ ಶೆಟ್ಟಿಯವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಸದಸ್ಯ, ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಸೆಕ್ಷನ್ 353 (2) ಪ್ರಕಾರ ಜುಲೈ 10 ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಭರತ್ ಶೆಟ್ಟಿ ಹೈಕೋರ್ಟ್ ಮೆಟ್ಟಲೇರಿದ್ದರು. ತಮ್ಮ ವಿರುದ್ಧ ದಾಖಲಾಗಿರುವ ಈ ಪ್ರಕರಣ ರಾಜಕೀಯ ಪ್ರೇರಿತ ಮತ್ತು ಆರೋಪ ನಿರಾಧರ ಎಂದು ವಾದಿಸಿದ್ದರು. ಜುಲೈ 11 ರಂದು ನಿರೀಕ್ಷಣಾ ಜಾಮೀನು ದೊರಕಿತ್ತು.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಮಧ್ಯಂತರ ಆದೇಶ ಹೊರಡಿಸಿ ಎಫ್ ಐ ಆರ್ ಗೆ ತಡೆ ನೀಡಿದ್ದಾರೆ. ಅದರೊಂದಿಗೆ ಈ ಪ್ರಕರಣದ ಸಂಬಂಧ ಶಾಸಕ ಡಾ. ಭರತ್ ಶೆಟ್ಟಿಯವರ ವಿರುದ್ಧ ಎಲ್ಲಾ ಕ್ರಿಮಿನಲ್ ಪ್ರಕರಣಕ್ಕೂ ತಡೆ ಆದೇಶವೇ ಜಾರಿಯಲ್ಲಿ ಇರಲಿದೆ.

ಡಾ. ಭರತ್ ಶೆಟ್ಟಿಯವರ ಪರ ವಾದಿಸಿದ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ “ಭರತ್ ಶೆಟ್ಟಿಯವರು ಯಾವುದೇ ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುವಂತಹ ಹೇಳಿಕೆ ನೀಡಿಲ್ಲ ” ಎಂದರು.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search