• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Tulunadu News Posted On July 20, 2024
0


0
Shares
  • Share On Facebook
  • Tweet It

ಹಿಂದೂಗಳ ವಿರುದ್ಧ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ನಡೆಸಿದ ಭಾರತೀಯ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿಯವರು ರಾಹುಲ್ ಗಾಂಧಿಯವರು ಹಿಂದೂಗಳ ಬಗ್ಗೆ ಅವಹೇಳನಕಾರಿ ರೀತಿ ಮಾತನಾಡಿರುವುದನ್ನು ಪ್ರಖರ ಶಬ್ದಗಳ ಮೂಲಕ ಖಂಡಿಸಿದ್ದರು.

ಡಾ. ಭರತ್ ಶೆಟ್ಟಿಯವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಸದಸ್ಯ, ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಸೆಕ್ಷನ್ 353 (2) ಪ್ರಕಾರ ಜುಲೈ 10 ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಭರತ್ ಶೆಟ್ಟಿ ಹೈಕೋರ್ಟ್ ಮೆಟ್ಟಲೇರಿದ್ದರು. ತಮ್ಮ ವಿರುದ್ಧ ದಾಖಲಾಗಿರುವ ಈ ಪ್ರಕರಣ ರಾಜಕೀಯ ಪ್ರೇರಿತ ಮತ್ತು ಆರೋಪ ನಿರಾಧರ ಎಂದು ವಾದಿಸಿದ್ದರು. ಜುಲೈ 11 ರಂದು ನಿರೀಕ್ಷಣಾ ಜಾಮೀನು ದೊರಕಿತ್ತು.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಮಧ್ಯಂತರ ಆದೇಶ ಹೊರಡಿಸಿ ಎಫ್ ಐ ಆರ್ ಗೆ ತಡೆ ನೀಡಿದ್ದಾರೆ. ಅದರೊಂದಿಗೆ ಈ ಪ್ರಕರಣದ ಸಂಬಂಧ ಶಾಸಕ ಡಾ. ಭರತ್ ಶೆಟ್ಟಿಯವರ ವಿರುದ್ಧ ಎಲ್ಲಾ ಕ್ರಿಮಿನಲ್ ಪ್ರಕರಣಕ್ಕೂ ತಡೆ ಆದೇಶವೇ ಜಾರಿಯಲ್ಲಿ ಇರಲಿದೆ.

ಡಾ. ಭರತ್ ಶೆಟ್ಟಿಯವರ ಪರ ವಾದಿಸಿದ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ “ಭರತ್ ಶೆಟ್ಟಿಯವರು ಯಾವುದೇ ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುವಂತಹ ಹೇಳಿಕೆ ನೀಡಿಲ್ಲ ” ಎಂದರು.

0
Shares
  • Share On Facebook
  • Tweet It




Trending Now
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
  • Popular Posts

    • 1
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 2
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 3
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search