• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಾಸಕ ಡಾ. ಭರತ್ ಶೆಟ್ಟಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

Tulunadu News Posted On July 20, 2024
0


0
Shares
  • Share On Facebook
  • Tweet It

ಹಿಂದೂಗಳ ವಿರುದ್ಧ ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಿ ನಡೆಸಿದ ಭಾರತೀಯ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಡಾ. ಭರತ್ ಶೆಟ್ಟಿಯವರು ರಾಹುಲ್ ಗಾಂಧಿಯವರು ಹಿಂದೂಗಳ ಬಗ್ಗೆ ಅವಹೇಳನಕಾರಿ ರೀತಿ ಮಾತನಾಡಿರುವುದನ್ನು ಪ್ರಖರ ಶಬ್ದಗಳ ಮೂಲಕ ಖಂಡಿಸಿದ್ದರು.

ಡಾ. ಭರತ್ ಶೆಟ್ಟಿಯವರ ವಿರುದ್ಧ ಮಂಗಳೂರು ಮಹಾನಗರ ಪಾಲಿಕೆ ಸದಸ್ಯ, ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಸೆಕ್ಷನ್ 353 (2) ಪ್ರಕಾರ ಜುಲೈ 10 ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಭರತ್ ಶೆಟ್ಟಿ ಹೈಕೋರ್ಟ್ ಮೆಟ್ಟಲೇರಿದ್ದರು. ತಮ್ಮ ವಿರುದ್ಧ ದಾಖಲಾಗಿರುವ ಈ ಪ್ರಕರಣ ರಾಜಕೀಯ ಪ್ರೇರಿತ ಮತ್ತು ಆರೋಪ ನಿರಾಧರ ಎಂದು ವಾದಿಸಿದ್ದರು. ಜುಲೈ 11 ರಂದು ನಿರೀಕ್ಷಣಾ ಜಾಮೀನು ದೊರಕಿತ್ತು.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರು ಮಧ್ಯಂತರ ಆದೇಶ ಹೊರಡಿಸಿ ಎಫ್ ಐ ಆರ್ ಗೆ ತಡೆ ನೀಡಿದ್ದಾರೆ. ಅದರೊಂದಿಗೆ ಈ ಪ್ರಕರಣದ ಸಂಬಂಧ ಶಾಸಕ ಡಾ. ಭರತ್ ಶೆಟ್ಟಿಯವರ ವಿರುದ್ಧ ಎಲ್ಲಾ ಕ್ರಿಮಿನಲ್ ಪ್ರಕರಣಕ್ಕೂ ತಡೆ ಆದೇಶವೇ ಜಾರಿಯಲ್ಲಿ ಇರಲಿದೆ.

ಡಾ. ಭರತ್ ಶೆಟ್ಟಿಯವರ ಪರ ವಾದಿಸಿದ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ “ಭರತ್ ಶೆಟ್ಟಿಯವರು ಯಾವುದೇ ಧರ್ಮಗಳ ನಡುವೆ ಸಂಘರ್ಷ ಉಂಟು ಮಾಡುವಂತಹ ಹೇಳಿಕೆ ನೀಡಿಲ್ಲ ” ಎಂದರು.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 4
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ

  • Privacy Policy
  • Contact
© Tulunadu Infomedia.

Press enter/return to begin your search