• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಟ್ಟಾರಣ್ಯದಲ್ಲಿ ಪತ್ನಿಯನ್ನು ಮರಕ್ಕೆ ಕಟ್ಟಿ ಹಾಕಿ ಓಡಿಹೋದನಾ ಪತಿ!

Tulunadu News Posted On July 30, 2024
0


0
Shares
  • Share On Facebook
  • Tweet It

ಅದು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯ ಪ್ರದೇಶ. ಅಲ್ಲಿನ ಒಂದು ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿದ ಮಹಿಳೆ ಪತ್ತೆಯಾಗಿದ್ದಾರೆ. ಆಕೆಯ ಬಳಿ ಅಮೇರಿಕಾದ ಪಾಸ್ ಪೋರ್ಟ್ ಪ್ರತಿ ಸಿಕ್ಕಿದೆ. ಅದರೊಂದಿಗೆ ತಮಿಳುನಾಡಿನ ಆಧಾರ್ ಕಾರ್ಡ್ ಕೂಡ ದೊರಕಿದೆ. ಅದರಲ್ಲಿ ಮಹಿಳೆಯ ಹೆಸರು ಲಲಿತಾ ಕಾಯಿ ಎಂದು ಬರೆಯಲಾಗಿದೆ. ಅವಳು ಅಲ್ಲಿಗೆ ಹೇಗೆ ಬಂದಳು, ಯಾರಾದರೂ ಬಲವಂತವಾಗಿ ತಂದಿದ್ರೆ ಅದು ಯಾರು? ಅವಳನ್ನು ಯಾಕೆ ಕಟ್ಟಿ ಹಾಕಲಾಗಿತ್ತು? ಕೊನೆಗೆ ಹೊರ ಪ್ರಪಂಚಕ್ಕೆ ಅವಳ ಇರುವಿಕೆ ಹೇಗೆ ಗೊತ್ತಾಯಿತು ಎನ್ನುವುದೇ ಈಗ ಇರುವ ವಿಷಯ.

ಮುಂಬೈ ನಗರದಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ಸಿಂಧದುರ್ಗ ಜಿಲ್ಲೆಯ ಸೊನುರಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಳೆದ ಶನಿವಾರ ಹೆಂಗಸೊಬ್ಬಳ ಚೀರಾಟ ಕೇಳಿಸಿದೆ. ಗ್ರಾಮಸ್ಥರಲ್ಲಿ ಕೆಲವರು ಧೈರ್ಯ ಮಾಡಿ ಕಾಡೊಳಗೆ ಹೋಗಿದ್ದಾರೆ. ಅಲ್ಲಿ ಕಬ್ಬಿಣದ ಸರಪಳಿಯಲ್ಲಿ ಬಂಧಿಯಾಗಿ ಕುಳಿತಿದ್ದ ಮಹಿಳೆ ಕಂಡುಬಂದಿದ್ದಾಳೆ. ಕೂಡಲೇ ಊರಿನವರು ಸ್ಥಳೀಯ ಠಾಣೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಎಷ್ಟು ದಿನಗಳಿಂದ ಅವಳು ಅಲ್ಲಿ ಇದ್ದಳು ಎನ್ನುವುದು ಸದ್ಯಕ್ಕೆ ತಿಳಿಯುತ್ತಿಲ್ಲ. ಯಾಕೆಂದರೆ ಲಲಿತಾ ಕಾಯಿ ಮಾತನಾಡದ ಸ್ಥಿತಿಯಲ್ಲಿದ್ದಾರೆ. ಆಹಾರ ಇಲ್ಲದೆ ಬಳಲಿ ಬೆಂಡಾಗಿದ್ದಾಳೆ. ನಿತ್ರಾಣಗೊಂಡು ಅರೆಜೀವದ ಸ್ಥಿತಿಗೆ ತಲುಪಿದ್ದಾಳೆ. ಅರಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯ ನೀರಿನಿಂದ ತೊಯ್ದಿರುವ ಆಕೆಯನ್ನು ಮೊದಲು ಸಾವಂತವಾಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸಿಂಧುದುರ್ಗದ ಓರೋಸ್ ಆಸ್ಪತ್ರೆಗೆ ದಾಖಲಾಗಿತ್ತು. ಮಹಿಳೆಯ ಮಾನಸಿಕ ಸ್ಥಿತಿ ಕೂಡ ಗಂಭೀರವಾಗಿರುವುದರಿಂದ ಪ್ರಸ್ತುತ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ.

ಲಲಿತಾ ಕಾಯಿ ಮೂಲತ: ಅಮೇರಿಕಾ ನಿವಾಸಿಯಾಗಿದ್ದು, ಕಳೆದ 10 ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಿದ್ದರು. ಪತಿ ತಮಿಳುನಾಡಿನವರಾಗಿದ್ದು, ಸದ್ಯ ಈಕೆಯ ಪಾಸ್ ಪೋರ್ಟ್ ಅವಧಿ ಮುಕ್ತಾಯಗೊಂಡಿದೆ. ಈಕೆ ಸಂಪೂರ್ಣವಾಗಿ ಗುಣಮುಖರಾದ ನಂತರ ವಿಷಯ ತಿಳಿಯಬೇಕಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search