• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಟ್ಟಾರಣ್ಯದಲ್ಲಿ ಪತ್ನಿಯನ್ನು ಮರಕ್ಕೆ ಕಟ್ಟಿ ಹಾಕಿ ಓಡಿಹೋದನಾ ಪತಿ!

Tulunadu News Posted On July 30, 2024
0


0
Shares
  • Share On Facebook
  • Tweet It

ಅದು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯ ಪ್ರದೇಶ. ಅಲ್ಲಿನ ಒಂದು ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿದ ಮಹಿಳೆ ಪತ್ತೆಯಾಗಿದ್ದಾರೆ. ಆಕೆಯ ಬಳಿ ಅಮೇರಿಕಾದ ಪಾಸ್ ಪೋರ್ಟ್ ಪ್ರತಿ ಸಿಕ್ಕಿದೆ. ಅದರೊಂದಿಗೆ ತಮಿಳುನಾಡಿನ ಆಧಾರ್ ಕಾರ್ಡ್ ಕೂಡ ದೊರಕಿದೆ. ಅದರಲ್ಲಿ ಮಹಿಳೆಯ ಹೆಸರು ಲಲಿತಾ ಕಾಯಿ ಎಂದು ಬರೆಯಲಾಗಿದೆ. ಅವಳು ಅಲ್ಲಿಗೆ ಹೇಗೆ ಬಂದಳು, ಯಾರಾದರೂ ಬಲವಂತವಾಗಿ ತಂದಿದ್ರೆ ಅದು ಯಾರು? ಅವಳನ್ನು ಯಾಕೆ ಕಟ್ಟಿ ಹಾಕಲಾಗಿತ್ತು? ಕೊನೆಗೆ ಹೊರ ಪ್ರಪಂಚಕ್ಕೆ ಅವಳ ಇರುವಿಕೆ ಹೇಗೆ ಗೊತ್ತಾಯಿತು ಎನ್ನುವುದೇ ಈಗ ಇರುವ ವಿಷಯ.

ಮುಂಬೈ ನಗರದಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ಸಿಂಧದುರ್ಗ ಜಿಲ್ಲೆಯ ಸೊನುರಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಳೆದ ಶನಿವಾರ ಹೆಂಗಸೊಬ್ಬಳ ಚೀರಾಟ ಕೇಳಿಸಿದೆ. ಗ್ರಾಮಸ್ಥರಲ್ಲಿ ಕೆಲವರು ಧೈರ್ಯ ಮಾಡಿ ಕಾಡೊಳಗೆ ಹೋಗಿದ್ದಾರೆ. ಅಲ್ಲಿ ಕಬ್ಬಿಣದ ಸರಪಳಿಯಲ್ಲಿ ಬಂಧಿಯಾಗಿ ಕುಳಿತಿದ್ದ ಮಹಿಳೆ ಕಂಡುಬಂದಿದ್ದಾಳೆ. ಕೂಡಲೇ ಊರಿನವರು ಸ್ಥಳೀಯ ಠಾಣೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಎಷ್ಟು ದಿನಗಳಿಂದ ಅವಳು ಅಲ್ಲಿ ಇದ್ದಳು ಎನ್ನುವುದು ಸದ್ಯಕ್ಕೆ ತಿಳಿಯುತ್ತಿಲ್ಲ. ಯಾಕೆಂದರೆ ಲಲಿತಾ ಕಾಯಿ ಮಾತನಾಡದ ಸ್ಥಿತಿಯಲ್ಲಿದ್ದಾರೆ. ಆಹಾರ ಇಲ್ಲದೆ ಬಳಲಿ ಬೆಂಡಾಗಿದ್ದಾಳೆ. ನಿತ್ರಾಣಗೊಂಡು ಅರೆಜೀವದ ಸ್ಥಿತಿಗೆ ತಲುಪಿದ್ದಾಳೆ. ಅರಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯ ನೀರಿನಿಂದ ತೊಯ್ದಿರುವ ಆಕೆಯನ್ನು ಮೊದಲು ಸಾವಂತವಾಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸಿಂಧುದುರ್ಗದ ಓರೋಸ್ ಆಸ್ಪತ್ರೆಗೆ ದಾಖಲಾಗಿತ್ತು. ಮಹಿಳೆಯ ಮಾನಸಿಕ ಸ್ಥಿತಿ ಕೂಡ ಗಂಭೀರವಾಗಿರುವುದರಿಂದ ಪ್ರಸ್ತುತ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ.

ಲಲಿತಾ ಕಾಯಿ ಮೂಲತ: ಅಮೇರಿಕಾ ನಿವಾಸಿಯಾಗಿದ್ದು, ಕಳೆದ 10 ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಿದ್ದರು. ಪತಿ ತಮಿಳುನಾಡಿನವರಾಗಿದ್ದು, ಸದ್ಯ ಈಕೆಯ ಪಾಸ್ ಪೋರ್ಟ್ ಅವಧಿ ಮುಕ್ತಾಯಗೊಂಡಿದೆ. ಈಕೆ ಸಂಪೂರ್ಣವಾಗಿ ಗುಣಮುಖರಾದ ನಂತರ ವಿಷಯ ತಿಳಿಯಬೇಕಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search