• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಟ್ಟಾರಣ್ಯದಲ್ಲಿ ಪತ್ನಿಯನ್ನು ಮರಕ್ಕೆ ಕಟ್ಟಿ ಹಾಕಿ ಓಡಿಹೋದನಾ ಪತಿ!

Tulunadu News Posted On July 30, 2024
0


0
Shares
  • Share On Facebook
  • Tweet It

ಅದು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯ ಪ್ರದೇಶ. ಅಲ್ಲಿನ ಒಂದು ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿದ ಮಹಿಳೆ ಪತ್ತೆಯಾಗಿದ್ದಾರೆ. ಆಕೆಯ ಬಳಿ ಅಮೇರಿಕಾದ ಪಾಸ್ ಪೋರ್ಟ್ ಪ್ರತಿ ಸಿಕ್ಕಿದೆ. ಅದರೊಂದಿಗೆ ತಮಿಳುನಾಡಿನ ಆಧಾರ್ ಕಾರ್ಡ್ ಕೂಡ ದೊರಕಿದೆ. ಅದರಲ್ಲಿ ಮಹಿಳೆಯ ಹೆಸರು ಲಲಿತಾ ಕಾಯಿ ಎಂದು ಬರೆಯಲಾಗಿದೆ. ಅವಳು ಅಲ್ಲಿಗೆ ಹೇಗೆ ಬಂದಳು, ಯಾರಾದರೂ ಬಲವಂತವಾಗಿ ತಂದಿದ್ರೆ ಅದು ಯಾರು? ಅವಳನ್ನು ಯಾಕೆ ಕಟ್ಟಿ ಹಾಕಲಾಗಿತ್ತು? ಕೊನೆಗೆ ಹೊರ ಪ್ರಪಂಚಕ್ಕೆ ಅವಳ ಇರುವಿಕೆ ಹೇಗೆ ಗೊತ್ತಾಯಿತು ಎನ್ನುವುದೇ ಈಗ ಇರುವ ವಿಷಯ.

ಮುಂಬೈ ನಗರದಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ಸಿಂಧದುರ್ಗ ಜಿಲ್ಲೆಯ ಸೊನುರಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಳೆದ ಶನಿವಾರ ಹೆಂಗಸೊಬ್ಬಳ ಚೀರಾಟ ಕೇಳಿಸಿದೆ. ಗ್ರಾಮಸ್ಥರಲ್ಲಿ ಕೆಲವರು ಧೈರ್ಯ ಮಾಡಿ ಕಾಡೊಳಗೆ ಹೋಗಿದ್ದಾರೆ. ಅಲ್ಲಿ ಕಬ್ಬಿಣದ ಸರಪಳಿಯಲ್ಲಿ ಬಂಧಿಯಾಗಿ ಕುಳಿತಿದ್ದ ಮಹಿಳೆ ಕಂಡುಬಂದಿದ್ದಾಳೆ. ಕೂಡಲೇ ಊರಿನವರು ಸ್ಥಳೀಯ ಠಾಣೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಎಷ್ಟು ದಿನಗಳಿಂದ ಅವಳು ಅಲ್ಲಿ ಇದ್ದಳು ಎನ್ನುವುದು ಸದ್ಯಕ್ಕೆ ತಿಳಿಯುತ್ತಿಲ್ಲ. ಯಾಕೆಂದರೆ ಲಲಿತಾ ಕಾಯಿ ಮಾತನಾಡದ ಸ್ಥಿತಿಯಲ್ಲಿದ್ದಾರೆ. ಆಹಾರ ಇಲ್ಲದೆ ಬಳಲಿ ಬೆಂಡಾಗಿದ್ದಾಳೆ. ನಿತ್ರಾಣಗೊಂಡು ಅರೆಜೀವದ ಸ್ಥಿತಿಗೆ ತಲುಪಿದ್ದಾಳೆ. ಅರಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯ ನೀರಿನಿಂದ ತೊಯ್ದಿರುವ ಆಕೆಯನ್ನು ಮೊದಲು ಸಾವಂತವಾಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸಿಂಧುದುರ್ಗದ ಓರೋಸ್ ಆಸ್ಪತ್ರೆಗೆ ದಾಖಲಾಗಿತ್ತು. ಮಹಿಳೆಯ ಮಾನಸಿಕ ಸ್ಥಿತಿ ಕೂಡ ಗಂಭೀರವಾಗಿರುವುದರಿಂದ ಪ್ರಸ್ತುತ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ.

ಲಲಿತಾ ಕಾಯಿ ಮೂಲತ: ಅಮೇರಿಕಾ ನಿವಾಸಿಯಾಗಿದ್ದು, ಕಳೆದ 10 ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಿದ್ದರು. ಪತಿ ತಮಿಳುನಾಡಿನವರಾಗಿದ್ದು, ಸದ್ಯ ಈಕೆಯ ಪಾಸ್ ಪೋರ್ಟ್ ಅವಧಿ ಮುಕ್ತಾಯಗೊಂಡಿದೆ. ಈಕೆ ಸಂಪೂರ್ಣವಾಗಿ ಗುಣಮುಖರಾದ ನಂತರ ವಿಷಯ ತಿಳಿಯಬೇಕಿದೆ.

0
Shares
  • Share On Facebook
  • Tweet It




Trending Now
ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
Tulunadu News July 11, 2025
ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
Tulunadu News July 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
  • Popular Posts

    • 1
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 2
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 3
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • 4
      ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • 5
      ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!

  • Privacy Policy
  • Contact
© Tulunadu Infomedia.

Press enter/return to begin your search