• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದಟ್ಟಾರಣ್ಯದಲ್ಲಿ ಪತ್ನಿಯನ್ನು ಮರಕ್ಕೆ ಕಟ್ಟಿ ಹಾಕಿ ಓಡಿಹೋದನಾ ಪತಿ!

Tulunadu News Posted On July 30, 2024


  • Share On Facebook
  • Tweet It

ಅದು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅರಣ್ಯ ಪ್ರದೇಶ. ಅಲ್ಲಿನ ಒಂದು ಮರಕ್ಕೆ ಕಬ್ಬಿಣದ ಸರಪಳಿಯಲ್ಲಿ ಕಟ್ಟಿದ ಮಹಿಳೆ ಪತ್ತೆಯಾಗಿದ್ದಾರೆ. ಆಕೆಯ ಬಳಿ ಅಮೇರಿಕಾದ ಪಾಸ್ ಪೋರ್ಟ್ ಪ್ರತಿ ಸಿಕ್ಕಿದೆ. ಅದರೊಂದಿಗೆ ತಮಿಳುನಾಡಿನ ಆಧಾರ್ ಕಾರ್ಡ್ ಕೂಡ ದೊರಕಿದೆ. ಅದರಲ್ಲಿ ಮಹಿಳೆಯ ಹೆಸರು ಲಲಿತಾ ಕಾಯಿ ಎಂದು ಬರೆಯಲಾಗಿದೆ. ಅವಳು ಅಲ್ಲಿಗೆ ಹೇಗೆ ಬಂದಳು, ಯಾರಾದರೂ ಬಲವಂತವಾಗಿ ತಂದಿದ್ರೆ ಅದು ಯಾರು? ಅವಳನ್ನು ಯಾಕೆ ಕಟ್ಟಿ ಹಾಕಲಾಗಿತ್ತು? ಕೊನೆಗೆ ಹೊರ ಪ್ರಪಂಚಕ್ಕೆ ಅವಳ ಇರುವಿಕೆ ಹೇಗೆ ಗೊತ್ತಾಯಿತು ಎನ್ನುವುದೇ ಈಗ ಇರುವ ವಿಷಯ.

ಮುಂಬೈ ನಗರದಿಂದ ಸುಮಾರು 450 ಕಿ.ಮೀ ದೂರದಲ್ಲಿರುವ ಸಿಂಧದುರ್ಗ ಜಿಲ್ಲೆಯ ಸೊನುರಲಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಳೆದ ಶನಿವಾರ ಹೆಂಗಸೊಬ್ಬಳ ಚೀರಾಟ ಕೇಳಿಸಿದೆ. ಗ್ರಾಮಸ್ಥರಲ್ಲಿ ಕೆಲವರು ಧೈರ್ಯ ಮಾಡಿ ಕಾಡೊಳಗೆ ಹೋಗಿದ್ದಾರೆ. ಅಲ್ಲಿ ಕಬ್ಬಿಣದ ಸರಪಳಿಯಲ್ಲಿ ಬಂಧಿಯಾಗಿ ಕುಳಿತಿದ್ದ ಮಹಿಳೆ ಕಂಡುಬಂದಿದ್ದಾಳೆ. ಕೂಡಲೇ ಊರಿನವರು ಸ್ಥಳೀಯ ಠಾಣೆ ಹಾಗೂ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಎಷ್ಟು ದಿನಗಳಿಂದ ಅವಳು ಅಲ್ಲಿ ಇದ್ದಳು ಎನ್ನುವುದು ಸದ್ಯಕ್ಕೆ ತಿಳಿಯುತ್ತಿಲ್ಲ. ಯಾಕೆಂದರೆ ಲಲಿತಾ ಕಾಯಿ ಮಾತನಾಡದ ಸ್ಥಿತಿಯಲ್ಲಿದ್ದಾರೆ. ಆಹಾರ ಇಲ್ಲದೆ ಬಳಲಿ ಬೆಂಡಾಗಿದ್ದಾಳೆ. ನಿತ್ರಾಣಗೊಂಡು ಅರೆಜೀವದ ಸ್ಥಿತಿಗೆ ತಲುಪಿದ್ದಾಳೆ. ಅರಣ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಳೆಯ ನೀರಿನಿಂದ ತೊಯ್ದಿರುವ ಆಕೆಯನ್ನು ಮೊದಲು ಸಾವಂತವಾಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಸಿಂಧುದುರ್ಗದ ಓರೋಸ್ ಆಸ್ಪತ್ರೆಗೆ ದಾಖಲಾಗಿತ್ತು. ಮಹಿಳೆಯ ಮಾನಸಿಕ ಸ್ಥಿತಿ ಕೂಡ ಗಂಭೀರವಾಗಿರುವುದರಿಂದ ಪ್ರಸ್ತುತ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿದೆ.

ಲಲಿತಾ ಕಾಯಿ ಮೂಲತ: ಅಮೇರಿಕಾ ನಿವಾಸಿಯಾಗಿದ್ದು, ಕಳೆದ 10 ವರ್ಷಗಳಿಂದ ತಮಿಳುನಾಡಿನಲ್ಲಿ ವಾಸವಿದ್ದರು. ಪತಿ ತಮಿಳುನಾಡಿನವರಾಗಿದ್ದು, ಸದ್ಯ ಈಕೆಯ ಪಾಸ್ ಪೋರ್ಟ್ ಅವಧಿ ಮುಕ್ತಾಯಗೊಂಡಿದೆ. ಈಕೆ ಸಂಪೂರ್ಣವಾಗಿ ಗುಣಮುಖರಾದ ನಂತರ ವಿಷಯ ತಿಳಿಯಬೇಕಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search