• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಸಂಪುಟಕ್ಕೆ ಸರ್ಜರಿ, ಗುರಿ ಮುಟ್ಟದವರ ಸ್ಥಾನಕ್ಕೆ ಕತ್ತರಿ

TNN Correspondent Posted On September 1, 2017
0


0
Shares
  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ 10 ಗಂಟೆಗೆ ಸಚಿವ ಸಂಪುಟ ಪುನರ್ ರಚನೆ ಮಾಡಲು ನಿರ್ಧರಸಿದ್ದು, ನಿಗದಿತ ಗುರಿ ಮುಟ್ಟದ ಸಚಿವರ ಸ್ಥಾಾನಕ್ಕೆ ಕತ್ತರಿ ಪ್ರಯೋಗ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ 2019ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪುನರ್ ರಚನೆಗೆ ಮುಂದಗಿದ್ದು, ಭಾನುವಾರ ಜೆಡಿಯು ಹಾಗೂ ಎಐಎಡಿಎಂಕೆ ಸದಸ್ಯರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.

ಇನ್ನು ಅದಾಗಲೇ ಕೇಂದ್ರ ಸಚಿವರಾದ ಉಮಾಭಾರತಿ, ರಾಜೀವ್ ಪ್ರತಾಪ್ ರೂಢಿ, ಸಂಜೀವ್ ಬಾಲ್ಯಾನ್ ರಾಜೀನಾಮೆ ನೀಡಿದ್ದು, ಇನ್ನಿಬ್ಬರು ರಾಜೀನಾಮೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆದಾಗ್ಯೂ, ರಾಜೀವ್ ಪ್ರತಾಪ್ ರೂಢಿ ಅವರು ಸರಕಾರ ನಿಗದಿಪಡಿಸದ ಗುರಿ ಮುಟ್ಟದ ಹಿನ್ನೆಲೆಯಲ್ಲಿ ರಾಜೀನಾಮೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಜತೆಗೆ ರೂಢಿ ಸಹ ನನ್ನ ರಾಜೀನಾಮೆ ನಿರ್ಧಾರ ಸರಕಾರದ್ದೇ ಎಂದಿದ್ದಾರೆ.

ನಿತೀನ್ ಗಡ್ಕರಿಗೆ ರೈಲ್ವೆ ಖಾತೆ?
ಮೂಲಗಳ ಪ್ರಕಾರ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರಿಗೆ ಹೆಚ್ಚುವರಿಯಾಗಿ ರೈಲ್ವೆ ಹಾಗೂ ವಿಮಾನಯಾನ ಖಾತೆ ಸಿಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸುರೇಶ್ ಪ್ರಭು ಸಹ ರಾಜೀನಾಮೆ ನೀಡುವ ಮುನ್ಸೂಚನೆ ಇರುವುದರಿಂದ ರೈಲ್ವೆ ಖಾತೆಯನ್ನು ನಿತೀನ್ ಗಡ್ಕರಿಗೆ ನೀಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅರುಣ್ ಜೇಟ್ಲಿ ಸಹ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

 

 

ಸಚಿವರ ಕೈಬಿಡಲು ಕಾರಣಗಳೇನು?

* ಜವಾಬ್ದಾರಿ ನೀಡಿದಂದಿನಿಂದ ಇದುವರೆಗಿನ ಅಭಿವೃದ್ಧಿ ಪರಿಶೀಲನೆ.
* ಕೆಲಸ ಮಾಡದವರು ಬೇಡ ಎಂಬ ಧೋರಣೆ
* ಜೆಡಿಯು, ಎಐಎಡಿಎಂಕೆ ಸಂಪುಟಕ್ಕೆ ಸೇರ್ಪಡೆ ಹಿನ್

* ಸರಕಾರ ನೀಡಿದ ಗುರಿ ತಲುಪದೇ ಇರುವುದು.

 

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search