• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸಂಪುಟಕ್ಕೆ ಸರ್ಜರಿ, ಗುರಿ ಮುಟ್ಟದವರ ಸ್ಥಾನಕ್ಕೆ ಕತ್ತರಿ

TNN Correspondent Posted On September 1, 2017


  • Share On Facebook
  • Tweet It

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಗ್ಗೆ 10 ಗಂಟೆಗೆ ಸಚಿವ ಸಂಪುಟ ಪುನರ್ ರಚನೆ ಮಾಡಲು ನಿರ್ಧರಸಿದ್ದು, ನಿಗದಿತ ಗುರಿ ಮುಟ್ಟದ ಸಚಿವರ ಸ್ಥಾಾನಕ್ಕೆ ಕತ್ತರಿ ಪ್ರಯೋಗ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಅಲ್ಲದೆ 2019ರ ಲೋಕಸಭೆ ಚುನಾವಣೆಯನ್ನು ಗುರಿಯಾಗಿಸಿಕೊಂಡು ಪುನರ್ ರಚನೆಗೆ ಮುಂದಗಿದ್ದು, ಭಾನುವಾರ ಜೆಡಿಯು ಹಾಗೂ ಎಐಎಡಿಎಂಕೆ ಸದಸ್ಯರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ.

ಇನ್ನು ಅದಾಗಲೇ ಕೇಂದ್ರ ಸಚಿವರಾದ ಉಮಾಭಾರತಿ, ರಾಜೀವ್ ಪ್ರತಾಪ್ ರೂಢಿ, ಸಂಜೀವ್ ಬಾಲ್ಯಾನ್ ರಾಜೀನಾಮೆ ನೀಡಿದ್ದು, ಇನ್ನಿಬ್ಬರು ರಾಜೀನಾಮೆ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆದಾಗ್ಯೂ, ರಾಜೀವ್ ಪ್ರತಾಪ್ ರೂಢಿ ಅವರು ಸರಕಾರ ನಿಗದಿಪಡಿಸದ ಗುರಿ ಮುಟ್ಟದ ಹಿನ್ನೆಲೆಯಲ್ಲಿ ರಾಜೀನಾಮೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಜತೆಗೆ ರೂಢಿ ಸಹ ನನ್ನ ರಾಜೀನಾಮೆ ನಿರ್ಧಾರ ಸರಕಾರದ್ದೇ ಎಂದಿದ್ದಾರೆ.

ನಿತೀನ್ ಗಡ್ಕರಿಗೆ ರೈಲ್ವೆ ಖಾತೆ?
ಮೂಲಗಳ ಪ್ರಕಾರ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ಅವರಿಗೆ ಹೆಚ್ಚುವರಿಯಾಗಿ ರೈಲ್ವೆ ಹಾಗೂ ವಿಮಾನಯಾನ ಖಾತೆ ಸಿಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸುರೇಶ್ ಪ್ರಭು ಸಹ ರಾಜೀನಾಮೆ ನೀಡುವ ಮುನ್ಸೂಚನೆ ಇರುವುದರಿಂದ ರೈಲ್ವೆ ಖಾತೆಯನ್ನು ನಿತೀನ್ ಗಡ್ಕರಿಗೆ ನೀಡಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅರುಣ್ ಜೇಟ್ಲಿ ಸಹ ರಕ್ಷಣಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

 

 

ಸಚಿವರ ಕೈಬಿಡಲು ಕಾರಣಗಳೇನು?

* ಜವಾಬ್ದಾರಿ ನೀಡಿದಂದಿನಿಂದ ಇದುವರೆಗಿನ ಅಭಿವೃದ್ಧಿ ಪರಿಶೀಲನೆ.
* ಕೆಲಸ ಮಾಡದವರು ಬೇಡ ಎಂಬ ಧೋರಣೆ
* ಜೆಡಿಯು, ಎಐಎಡಿಎಂಕೆ ಸಂಪುಟಕ್ಕೆ ಸೇರ್ಪಡೆ ಹಿನ್

* ಸರಕಾರ ನೀಡಿದ ಗುರಿ ತಲುಪದೇ ಇರುವುದು.

 

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search