• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮನು ಬಾಕರ್ ಮತ್ತೊಂದು ದಾಖಲೆ! ಏನು ಗೊತ್ತಾ?

Tulunadu News Posted On July 30, 2024
0


0
Shares
  • Share On Facebook
  • Tweet It

ಖ್ಯಾತ ಪರಿಣಿತ ಶೂಟರ್ ಮನು ಬಾಕರ್ ಅವರು ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡೆಯಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಒಂದೇ ಒಲಿಂಪಿಕ್ಸ್ ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಮೊದಲ ಕ್ರೀಡಾಪಟು ಆಗಿ ಮನು ಬಾಕರ್ ಹೊರಹೊಮ್ಮಿದ್ದಾರೆ. ಮಿಕ್ಸಡ್ ಡಬಲ್ ನಲ್ಲಿ 10 ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಸರ್ಬಜ್ಯೋತ್ ಸಿಂಗ್ ಜೊತೆ ಅವರು ಕಂಚಿನ ಪದಕವನ್ನು ಗೆಲ್ಲುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಇದೇ ಪಂದ್ಯಾವಳಿಯಲ್ಲಿ ಅವರು ಈಗಾಗಲೇ ಮಹಿಳಾ 10 ಎಂ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕಗಳನ್ನು ಗೆದ್ದು ಭಾರತದ ಪದಕಗಳ ಬೇಟೆಗೆ ನಾಂದಿ ಹಾಡಿದ್ದಾರೆ.
ಮನು ಬಾಕರ್ ಮೊದಲ ಪದಕವನ್ನು ಗೆದ್ದಾಗ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ ಅಭಿನಂದಿಸಿದ್ದರು. ಅದಾದ ಎರಡೇ ದಿನಕ್ಕೆ ಮನು ಬಾಕರ್ ಮಿಕ್ಸಡ್ ಡಬಲ್ಸ್ ನಲ್ಲಿ ಮತ್ತೊಂದು ಪದಕ ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ ಮಗಳ ವಿಶಿಷ್ಟ ಸಾಧನೆಗೆ ಮೋದಿಜಿಯವರ ಸ್ಫೂರ್ತಿಯ ಮಾತುಗಳೇ ಕಾರಣ ಎಂದು ಮನು ಬಾಕರ್ ತಂದೆ ರಾಮಕಿಶನ್ ಬಾಕರ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಪ್ರಧಾನಿ ಮೋದಿಯವರು ಯಾವುದೇ ಕ್ರೀಡಾಪಟುವಿನ ಬಳಿ ಮಾತನಾಡಿದರೆ ಅದರಿಂದ 80% ಹೆಚ್ಚು ಶಕ್ತಿ ದೊರಕುತ್ತದೆ. ಅದನ್ನು ನೀವು ಯಾವತ್ತೂ ನೋಡಬಹುದು. ಮೋದಿಯವರು ಮಾತನಾಡಿದ ಬಳಿಕ ಮನು ಇನ್ನೊಂದು ಪದಕ ಗೆಲ್ಲುವಂತಾಯಿತು ” ಎಂದು ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search