• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದ ಕೊಟ್ಟಿಗೆಯಲ್ಲಿದ್ದ ಹಸು ಕರ್ನಾಟಕದವರ ಜೀವ ಉಳಿಸಿತು!

Tulunadu News Posted On July 31, 2024
0


0
Shares
  • Share On Facebook
  • Tweet It

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಗಳ ಹಿಂದೆ ಅನೇಕ ಹೃದಯವಿದ್ರಾವಕ ಕಥೆಗಳಿವೆ. ಅದರಲ್ಲಿ ಒಂದು ಕಥೆಯನ್ನು ನೀವು ಓದಲೇಬೇಕು. ವಯನಾಡಿನ ಭೂಕುಸಿತದಿಂದ ಇಲ್ಲಿಯವರೆಗೂ ಸುಮಾರು 180 ರಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಎಷ್ಟೋ ಜನ ಈ ದಾರುಣ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ.
ಈ ಭೂಕುಸಿತದ ದುರ್ಘಟನೆಯಲ್ಲಿಯೂ ಒಂದು ಸಮಾಧಾನಕರ ಸಂಗತಿ ನಡೆದಿದೆ.

ಕೇರಳದ ವಯನಾಡಿನಲ್ಲಿ ಚೂರಲ್ ಮಲಾ ಗುಡ್ಡ ಇದೆ. ಅಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ವಿನೋದ್ ಕುಟುಂಬ ವಾಸವಿತ್ತು. ಜುಲೈ 30 ರ ಮಧ್ಯರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಪದೇ ಪದೇ ಚೀರಾಡುತ್ತಾ ಇತ್ತು. ಯಾಕೆ ಹಸು ಹೀಗೆ ವಿಚಿತ್ರವಾಗಿ ಆಡುತ್ತಿದೆ ಎಂದು ನೋಡಲು ವಿನೋದ್ ಹೊರಗೆ ಬಂದಿದ್ದಾರೆ. ಮಳೆಯ ನಡುವೆ ಏನೋ ಅಪಾಯದ ಮುನ್ಸೂಚನೆ ಅರಿತ ವಿನೋದ್ ಮನೆಯಲ್ಲಿ ಮಲಗಿದ್ದವರನ್ನು ತಕ್ಷಣ ಎಬ್ಬಿಸಿದ್ದಾರೆ. ಎಲ್ಲರನ್ನು ಗುಡ್ಡದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅವರು ಇದೇ ಸಮಯದಲ್ಲಿ ಮೆಪಾಡಿ ಎನ್ನುವಂತಹ ಇನ್ನೊಂದು ಪ್ರದೇಶದಲ್ಲಿದ್ದ ಎರಡು ತಿಂಗಳ ಹಸಿ ಬಾಣಂತಿ ಪತ್ನಿ ಪ್ರವಿದಾಗೂ ಮಾಹಿತಿ ನೀಡಿ, ಪತ್ನಿ, ಹಸುಳೆ, ಅತ್ತೆಯನ್ನು ಕೂಡ ಸುರಕ್ಷಿತ ಸ್ಥಳ ತಲುಪುವಂತೆ ಮಾಡಿದ್ದಾರೆ. ಇದೆಲ್ಲಾ ಆದ ಕೆಲವೇ ಗಂಟೆಗಳಲ್ಲಿ ಅವರಿದ್ದ ಮನೆ, ವಾಹನ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮರುದಿನ ವಿನೋದ್ ಅವರ ಇಡೀ ಕುಟುಂಬ ಸುರಕ್ಷಿತವಾಗಿ ಚಾಮರಾಜನಗರವನ್ನು ತಲುಪಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search