• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದ ಕೊಟ್ಟಿಗೆಯಲ್ಲಿದ್ದ ಹಸು ಕರ್ನಾಟಕದವರ ಜೀವ ಉಳಿಸಿತು!

Tulunadu News Posted On July 31, 2024
0


0
Shares
  • Share On Facebook
  • Tweet It

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಗಳ ಹಿಂದೆ ಅನೇಕ ಹೃದಯವಿದ್ರಾವಕ ಕಥೆಗಳಿವೆ. ಅದರಲ್ಲಿ ಒಂದು ಕಥೆಯನ್ನು ನೀವು ಓದಲೇಬೇಕು. ವಯನಾಡಿನ ಭೂಕುಸಿತದಿಂದ ಇಲ್ಲಿಯವರೆಗೂ ಸುಮಾರು 180 ರಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಎಷ್ಟೋ ಜನ ಈ ದಾರುಣ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ.
ಈ ಭೂಕುಸಿತದ ದುರ್ಘಟನೆಯಲ್ಲಿಯೂ ಒಂದು ಸಮಾಧಾನಕರ ಸಂಗತಿ ನಡೆದಿದೆ.

ಕೇರಳದ ವಯನಾಡಿನಲ್ಲಿ ಚೂರಲ್ ಮಲಾ ಗುಡ್ಡ ಇದೆ. ಅಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ವಿನೋದ್ ಕುಟುಂಬ ವಾಸವಿತ್ತು. ಜುಲೈ 30 ರ ಮಧ್ಯರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಪದೇ ಪದೇ ಚೀರಾಡುತ್ತಾ ಇತ್ತು. ಯಾಕೆ ಹಸು ಹೀಗೆ ವಿಚಿತ್ರವಾಗಿ ಆಡುತ್ತಿದೆ ಎಂದು ನೋಡಲು ವಿನೋದ್ ಹೊರಗೆ ಬಂದಿದ್ದಾರೆ. ಮಳೆಯ ನಡುವೆ ಏನೋ ಅಪಾಯದ ಮುನ್ಸೂಚನೆ ಅರಿತ ವಿನೋದ್ ಮನೆಯಲ್ಲಿ ಮಲಗಿದ್ದವರನ್ನು ತಕ್ಷಣ ಎಬ್ಬಿಸಿದ್ದಾರೆ. ಎಲ್ಲರನ್ನು ಗುಡ್ಡದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅವರು ಇದೇ ಸಮಯದಲ್ಲಿ ಮೆಪಾಡಿ ಎನ್ನುವಂತಹ ಇನ್ನೊಂದು ಪ್ರದೇಶದಲ್ಲಿದ್ದ ಎರಡು ತಿಂಗಳ ಹಸಿ ಬಾಣಂತಿ ಪತ್ನಿ ಪ್ರವಿದಾಗೂ ಮಾಹಿತಿ ನೀಡಿ, ಪತ್ನಿ, ಹಸುಳೆ, ಅತ್ತೆಯನ್ನು ಕೂಡ ಸುರಕ್ಷಿತ ಸ್ಥಳ ತಲುಪುವಂತೆ ಮಾಡಿದ್ದಾರೆ. ಇದೆಲ್ಲಾ ಆದ ಕೆಲವೇ ಗಂಟೆಗಳಲ್ಲಿ ಅವರಿದ್ದ ಮನೆ, ವಾಹನ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮರುದಿನ ವಿನೋದ್ ಅವರ ಇಡೀ ಕುಟುಂಬ ಸುರಕ್ಷಿತವಾಗಿ ಚಾಮರಾಜನಗರವನ್ನು ತಲುಪಿದೆ.

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search