• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಕೇರಳದ ಕೊಟ್ಟಿಗೆಯಲ್ಲಿದ್ದ ಹಸು ಕರ್ನಾಟಕದವರ ಜೀವ ಉಳಿಸಿತು!

Tulunadu News Posted On July 31, 2024
0


0
Shares
  • Share On Facebook
  • Tweet It

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಗಳ ಹಿಂದೆ ಅನೇಕ ಹೃದಯವಿದ್ರಾವಕ ಕಥೆಗಳಿವೆ. ಅದರಲ್ಲಿ ಒಂದು ಕಥೆಯನ್ನು ನೀವು ಓದಲೇಬೇಕು. ವಯನಾಡಿನ ಭೂಕುಸಿತದಿಂದ ಇಲ್ಲಿಯವರೆಗೂ ಸುಮಾರು 180 ರಷ್ಟು ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಎಷ್ಟೋ ಜನ ಈ ದಾರುಣ ಘಟನೆಯಲ್ಲಿ ತಮ್ಮವರನ್ನು ಕಳೆದುಕೊಂಡಿದ್ದಾರೆ.
ಈ ಭೂಕುಸಿತದ ದುರ್ಘಟನೆಯಲ್ಲಿಯೂ ಒಂದು ಸಮಾಧಾನಕರ ಸಂಗತಿ ನಡೆದಿದೆ.

ಕೇರಳದ ವಯನಾಡಿನಲ್ಲಿ ಚೂರಲ್ ಮಲಾ ಗುಡ್ಡ ಇದೆ. ಅಲ್ಲಿ ಕರ್ನಾಟಕದ ಚಾಮರಾಜನಗರ ಮೂಲದ ವಿನೋದ್ ಕುಟುಂಬ ವಾಸವಿತ್ತು. ಜುಲೈ 30 ರ ಮಧ್ಯರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಪದೇ ಪದೇ ಚೀರಾಡುತ್ತಾ ಇತ್ತು. ಯಾಕೆ ಹಸು ಹೀಗೆ ವಿಚಿತ್ರವಾಗಿ ಆಡುತ್ತಿದೆ ಎಂದು ನೋಡಲು ವಿನೋದ್ ಹೊರಗೆ ಬಂದಿದ್ದಾರೆ. ಮಳೆಯ ನಡುವೆ ಏನೋ ಅಪಾಯದ ಮುನ್ಸೂಚನೆ ಅರಿತ ವಿನೋದ್ ಮನೆಯಲ್ಲಿ ಮಲಗಿದ್ದವರನ್ನು ತಕ್ಷಣ ಎಬ್ಬಿಸಿದ್ದಾರೆ. ಎಲ್ಲರನ್ನು ಗುಡ್ಡದ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ.

ಅವರು ಇದೇ ಸಮಯದಲ್ಲಿ ಮೆಪಾಡಿ ಎನ್ನುವಂತಹ ಇನ್ನೊಂದು ಪ್ರದೇಶದಲ್ಲಿದ್ದ ಎರಡು ತಿಂಗಳ ಹಸಿ ಬಾಣಂತಿ ಪತ್ನಿ ಪ್ರವಿದಾಗೂ ಮಾಹಿತಿ ನೀಡಿ, ಪತ್ನಿ, ಹಸುಳೆ, ಅತ್ತೆಯನ್ನು ಕೂಡ ಸುರಕ್ಷಿತ ಸ್ಥಳ ತಲುಪುವಂತೆ ಮಾಡಿದ್ದಾರೆ. ಇದೆಲ್ಲಾ ಆದ ಕೆಲವೇ ಗಂಟೆಗಳಲ್ಲಿ ಅವರಿದ್ದ ಮನೆ, ವಾಹನ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಮರುದಿನ ವಿನೋದ್ ಅವರ ಇಡೀ ಕುಟುಂಬ ಸುರಕ್ಷಿತವಾಗಿ ಚಾಮರಾಜನಗರವನ್ನು ತಲುಪಿದೆ.

0
Shares
  • Share On Facebook
  • Tweet It




Trending Now
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
  • Popular Posts

    • 1
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 2
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search